<p><strong>ಬೆಳಗಾವಿ:</strong> ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ.ಕಾವಲಿನ 288 ಎಕರೆಯನ್ನು ಖಾಸಗಿಯವರಿಗೆ ಪರಭಾರೆ ಮಾಡಿರುವ ವಿಶೇಷ ಜಿಲ್ಲಾಧಿಕಾರಿ ಎಸ್.ರಂಗಪ್ಪ ಅವರು ಲೋಪ ಎಸಗಿದ್ದಾರೆ. ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯ ಎ.ಟಿ.ರಾಮಸ್ವಾಮಿ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ’ಪ್ರಜಾವಾಣಿ‘ಯ ವರದಿಯನ್ನು ಸದನದಲ್ಲಿ ಪ್ರದರ್ಶಿಸಿದರು.</p>.<p>’ಈ ವಿಷಯ ಕೇಳಿ ಬಹಳ ನೋವಾಗಿದೆ. ಇದನ್ನೆಲ್ಲ ನೋಡಿಕೊಂಡು ಸದನದಲ್ಲಿ ಇರಬೇಕೇ ಬೇಡವೇ‘ ಎಂದು ಪ್ರಶ್ನಿಸಿದರು. ‘2006ರಲ್ಲಿ ಸದನ ಸಮಿತಿ ಈ ಪ್ರದೇಶವನ್ನು ಪರಿಶೀಲಿಸಿ ವರದಿ ಸಿದ್ಧಪಡಿಸಿತ್ತು. ನಾವು ನಮ್ಮ ಭವಿಷ್ಯವನ್ನು ಪಣಕ್ಕೆ ಇಟ್ಟು ವರದಿ ಸಿದ್ಧಪಡಿಸಿದ್ದೆವು. 310 ಎಕರೆ ಜಾಗದ ಮೌಲ್ಯ ₹3 ಸಾವಿರ ಕೋಟಿ ಆಗುತ್ತದೆ. ನಕಲಿ ದಾಖಲೆ ಸೃಷ್ಟಿಸಿ ಮಂಜೂರಾತಿ ಮಾಡಲಾಗಿದೆ’ ಎಂದರು.</p>.<p>ಈ ಜಾಗವನ್ನು ಯಾರ ಹೆಸರಿಗೆ ಮಾಡಿಕೊಡಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಪ್ರಶ್ನಿಸಿದರು. ’ಬಡವರಿಗೆ ಮಾಡಿಕೊಟ್ಟಿದ್ದರೆ ಹೋಗಲಿ ಎಂದು ಸುಮ್ಮನಾಗುತ್ತಿದ್ದೆ. ದುರಾಸೆ ಜನ ಹಾಗೂ ಹಣಕ್ಕೆ ಆಸೆ ಪಡುವವರ ಹೆಸರಿಗೆ ಮಾಡಿಕೊಡಲಾಗಿದೆ‘ ಎಂದು ರಾಮಸ್ವಾಮಿ ಹೇಳಿದರು.</p>.<p>ವಿಶೇಷ ಜಿಲ್ಲಾಧಿಕಾರಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತಿದ್ದೇವೆ ಎಂದು ದೇಶಪಾಂಡೆ ತಿಳಿಸಿದರು. ’ಅಧಿಕಾರಿಯನ್ನು ವರ್ಗಾವಣೆ ಮಾಡಿದರೆ ಸಾಲದು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂಜೆಯೊಳಗೆ ಆ ಅಧಿಕಾರಿಯನ್ನು ಅಮಾನತು ಮಾಡಿ‘ ಎಂದು ಕೆ.ಆರ್.ರಮೇಶ್ ಕುಮಾರ್ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/stories/stateregional/special-dc-report-594310.html" target="_blank">ವರದಿ ತಿರುಚಿದ ವಿಶೇಷ ಜಿಲ್ಲಾಧಿಕಾರಿ</a></p>.<p>‘ಅಧಿಕಾರಿಯ ಅಮಾನತು ಮಾಡಿ ಎಂದು ನೀವು ಆದೇಶ ಹೊರಡಿಸಿರುವುದು ಸರಿಯಲ್ಲ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಗಾದೆ ಎತ್ತಿದರು. ‘ನಾನು ಆದೇಶ ಮಾಡಿಲ್ಲಪ್ಪ, ವಿನಮ್ರವಾಗಿ ಮನವಿ ಮಾಡಿದ್ದೇನೆ’ ಎಂದು ರಮೇಶ್ ಕುಮಾರ್ ಸ್ಪಷ್ಟಪಡಿಸಿದರು. ಈ ವಿಷಯದ ಬಗ್ಗೆ ಸೋಮವಾರ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ರಾಮಸ್ವಾಮಿ ಅವರಿಗೆ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಬೆಂಗಳೂರು ದಕ್ಷಿಣ ತಾಲ್ಲೂಕಿನ ಬಿ.ಎಂ.ಕಾವಲಿನ 288 ಎಕರೆಯನ್ನು ಖಾಸಗಿಯವರಿಗೆ ಪರಭಾರೆ ಮಾಡಿರುವ ವಿಶೇಷ ಜಿಲ್ಲಾಧಿಕಾರಿ ಎಸ್.ರಂಗಪ್ಪ ಅವರು ಲೋಪ ಎಸಗಿದ್ದಾರೆ. ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಗುರುವಾರ ಶೂನ್ಯ ವೇಳೆಯಲ್ಲಿ ಜೆಡಿಎಸ್ ಸದಸ್ಯ ಎ.ಟಿ.ರಾಮಸ್ವಾಮಿ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು. ’ಪ್ರಜಾವಾಣಿ‘ಯ ವರದಿಯನ್ನು ಸದನದಲ್ಲಿ ಪ್ರದರ್ಶಿಸಿದರು.</p>.<p>’ಈ ವಿಷಯ ಕೇಳಿ ಬಹಳ ನೋವಾಗಿದೆ. ಇದನ್ನೆಲ್ಲ ನೋಡಿಕೊಂಡು ಸದನದಲ್ಲಿ ಇರಬೇಕೇ ಬೇಡವೇ‘ ಎಂದು ಪ್ರಶ್ನಿಸಿದರು. ‘2006ರಲ್ಲಿ ಸದನ ಸಮಿತಿ ಈ ಪ್ರದೇಶವನ್ನು ಪರಿಶೀಲಿಸಿ ವರದಿ ಸಿದ್ಧಪಡಿಸಿತ್ತು. ನಾವು ನಮ್ಮ ಭವಿಷ್ಯವನ್ನು ಪಣಕ್ಕೆ ಇಟ್ಟು ವರದಿ ಸಿದ್ಧಪಡಿಸಿದ್ದೆವು. 310 ಎಕರೆ ಜಾಗದ ಮೌಲ್ಯ ₹3 ಸಾವಿರ ಕೋಟಿ ಆಗುತ್ತದೆ. ನಕಲಿ ದಾಖಲೆ ಸೃಷ್ಟಿಸಿ ಮಂಜೂರಾತಿ ಮಾಡಲಾಗಿದೆ’ ಎಂದರು.</p>.<p>ಈ ಜಾಗವನ್ನು ಯಾರ ಹೆಸರಿಗೆ ಮಾಡಿಕೊಡಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಪ್ರಶ್ನಿಸಿದರು. ’ಬಡವರಿಗೆ ಮಾಡಿಕೊಟ್ಟಿದ್ದರೆ ಹೋಗಲಿ ಎಂದು ಸುಮ್ಮನಾಗುತ್ತಿದ್ದೆ. ದುರಾಸೆ ಜನ ಹಾಗೂ ಹಣಕ್ಕೆ ಆಸೆ ಪಡುವವರ ಹೆಸರಿಗೆ ಮಾಡಿಕೊಡಲಾಗಿದೆ‘ ಎಂದು ರಾಮಸ್ವಾಮಿ ಹೇಳಿದರು.</p>.<p>ವಿಶೇಷ ಜಿಲ್ಲಾಧಿಕಾರಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತಿದ್ದೇವೆ ಎಂದು ದೇಶಪಾಂಡೆ ತಿಳಿಸಿದರು. ’ಅಧಿಕಾರಿಯನ್ನು ವರ್ಗಾವಣೆ ಮಾಡಿದರೆ ಸಾಲದು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಂಜೆಯೊಳಗೆ ಆ ಅಧಿಕಾರಿಯನ್ನು ಅಮಾನತು ಮಾಡಿ‘ ಎಂದು ಕೆ.ಆರ್.ರಮೇಶ್ ಕುಮಾರ್ ಹೇಳಿದರು.</p>.<p><strong>ಇದನ್ನೂ ಓದಿ:</strong><a href="https://cms.prajavani.net/stories/stateregional/special-dc-report-594310.html" target="_blank">ವರದಿ ತಿರುಚಿದ ವಿಶೇಷ ಜಿಲ್ಲಾಧಿಕಾರಿ</a></p>.<p>‘ಅಧಿಕಾರಿಯ ಅಮಾನತು ಮಾಡಿ ಎಂದು ನೀವು ಆದೇಶ ಹೊರಡಿಸಿರುವುದು ಸರಿಯಲ್ಲ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಗಾದೆ ಎತ್ತಿದರು. ‘ನಾನು ಆದೇಶ ಮಾಡಿಲ್ಲಪ್ಪ, ವಿನಮ್ರವಾಗಿ ಮನವಿ ಮಾಡಿದ್ದೇನೆ’ ಎಂದು ರಮೇಶ್ ಕುಮಾರ್ ಸ್ಪಷ್ಟಪಡಿಸಿದರು. ಈ ವಿಷಯದ ಬಗ್ಗೆ ಸೋಮವಾರ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ರಾಮಸ್ವಾಮಿ ಅವರಿಗೆ ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>