<p><strong>ಬೆಳಗಾವಿ: </strong>ರಾಜ್ಯದ ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ ಮುಂದಿನ ಬಜೆಟ್ನಲ್ಲಿ ವಿಶೇಷ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಬಿ.ಶ್ರೀರಾಮುಲು ಪ್ರಶ್ನೆಗೆ ಉತ್ತರಿಸಿದ ಅವರು, ’ಈ ವರ್ಷ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ₹1,500 ಕೋಟಿ ಮೀಸಲಿಡಲಾಗಿದೆ‘ ಎಂದರು.</p>.<p>ರಾಜ್ಯದ 5,227 ಗ್ರಾಮಗಳಲ್ಲಿ ಶಾಲೆ ಇಲ್ಲ ಎಂಬ ‘ಪ್ರಜಾವಾಣಿ’ ವರದಿಯನ್ನು ಶ್ರೀರಾಮುಲು ಅವರು ಸದನದಲ್ಲಿ ಉಲ್ಲೇಖಿಸಿದರು.</p>.<p>‘ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯನ್ನು ಸಂಪೂರ್ಣ ರದ್ದು ಮಾಡಿಲ್ಲ. ಸೈಕಲ್ಗಳ ಗುಣಮಟ್ಟ ಕಳಪೆ ಗುಣಮಟ್ಟದ್ದು ಎಂಬ ದೂರು ಬಂದಿತ್ತು. ಹಾಗಾಗಿ, ತನಿಖೆಗೆ ಆದೇಶಿಸಿದ್ದೇನೆ’ ಎಂದರು.</p>.<p>ವಿದ್ಯಾರ್ಥಿಗಳ ಕೊರತೆ ಕಾರಣಕ್ಕೆ ಯಾವುದೇ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಮುಚ್ಚಿಲ್ಲ. ಶೂನ್ಯ ದಾಖಲಾತಿ ಹೊಂದಿರುವ 318 ಶಾಲೆಗಳಲ್ಲಿ ತರಗತಿಗಳಲ್ಲಿ ನಡೆಯುತ್ತಿಲ್ಲ ಎಂದರು.</p>.<p><strong>ನೀಟ್’ ಮಾಹಿತಿ ಸೋರಿಕೆ: ಪ್ರಕರಣದ ತನಿಖೆ</strong></p>.<p><strong>ಬೆಳಗಾವಿ:</strong> ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳ ಮಾಹಿತಿ ಸೋರಿಕೆ ಪ್ರಕರಣದ ತನಿಖೆ ನಡೆಸಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ವಿ.ಸೋಮಣ್ಣ ಪ್ರಶ್ನೆಗೆ ಉತ್ತರಿಸಿ, ’ನಮ್ಮ ಆಡಳಿತ ಭಾಷೆಯಲ್ಲೂ ಪರೀಕ್ಷೆ ನಡೆಸುವ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ‘ ಎಂದರು.</p>.<p>ವಿ.ಸೋಮಣ್ಣ, ’ಮಾಹಿತಿ ಸೋರಿಕೆ ಬಗ್ಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಜುಲೈ 21ರಂದು ವರದಿ ಪ್ರಕಟವಾಗಿದೆ. ಇದೊಂದು ಗಂಭೀರ ಪ್ರಕರಣ. ತನಿಖೆ ನಡೆಸಬೇಕು‘ ಎಂದು ಆಗ್ರಹಿಸಿದರು.</p>.<p><strong>ಶೆಟ್ಟರ್ ಚಾಟಿ</strong></p>.<p><strong>ಬೆಳಗಾವಿ:</strong> ಅಭಿವೃದ್ಧಿಯಲ್ಲಿ ಹಿಂದುಳಿದ ಉತ್ತರ ಕರ್ನಾಟಕ ಭಾಗದ ವಸ್ತುಸ್ಥಿತಿಯನ್ನು ವಿಧಾನಸಭೆಯಲ್ಲಿ ಬಿಜೆಪಿಯ ಜಗದೀಶ ಶೆಟ್ಟರ್ ಎಳೆ ಎಳೆಯಾಗಿ ಬಿಚ್ಚಿಟ್ಟರು.</p>.<p>ಈ ವೇಳೆ ‘ಪ್ರಜಾವಾಣಿ’ಯ ‘ಅನುಸಂಧಾನ’ ಅಂಕಣವನ್ನು ಉಲ್ಲೇಖಿಸಿದ ಅವರು, ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದರು.</p>.<p>‘ಕುಮಾರಸ್ವಾಮಿ ಅವರದ್ದು ರಾತ್ರಿ ಸರ್ಕಾರ, ಹಗಲೆಲ್ಲ ನಿದ್ದೆ ಮಾಡುತ್ತಿದೆ’ ಎಂದು ರೈತನೊಬ್ಬ ಹೇಳಿದ ಮಾತು ಈ ಅಂಕಣದಲ್ಲಿದೆ. ಸರ್ಕಾರ ಯಾವ ರೀತಿ ಕೆಲಸ ಮಾಡುತ್ತಿದೆ ಎಂದು ಲೇಖಕರು ಬಣ್ಣಿಸಿದ್ದಾರೆ ಎಂದು ಹೇಳಿದ ಅವರು, ರೈತ –ಲೇಖಕರ ಮಧ್ಯೆ ನಡೆದ ಸಂಭಾಷಣೆಯನ್ನು ಓದಿದರು.</p>.<p>‘ಎಲ್ಲಿಗೆ ಬಂತೋ ಸಂಗಯ್ಯ ಎಂದರೆ, ಇದ್ದಂಗೆ ಇರೋ ಸಿದ್ದಯ್ಯ ಅಂದರಂತೆ ಎಂಬಂತಿದೆ ಸರ್ಕಾರದ ನಡೆ. ಈ ಅಂಕಣ ನೋಡಿಯಾದರೂ ಸಮ್ಮಿಶ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು’ ಎಂದರು. ‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ‘ನಿರ್ಲಕ್ಷ್ಯ ಸೂಚ್ಯಂಕವೇ ಸಾಕ್ಷ್ಯ’ ಎಂಬ ವರದಿಯನ್ನೂ ಉಲ್ಲೇಖಿಸಿದರು. ಬಿಜೆಪಿ ಎ.ಎಸ್. ಪಾಟೀಲ ನಡಹಳ್ಳಿ ಕೂಡಾ ಧ್ವನಿಗೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ರಾಜ್ಯದ ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ ಮುಂದಿನ ಬಜೆಟ್ನಲ್ಲಿ ವಿಶೇಷ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಬಿ.ಶ್ರೀರಾಮುಲು ಪ್ರಶ್ನೆಗೆ ಉತ್ತರಿಸಿದ ಅವರು, ’ಈ ವರ್ಷ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗೆ ₹1,500 ಕೋಟಿ ಮೀಸಲಿಡಲಾಗಿದೆ‘ ಎಂದರು.</p>.<p>ರಾಜ್ಯದ 5,227 ಗ್ರಾಮಗಳಲ್ಲಿ ಶಾಲೆ ಇಲ್ಲ ಎಂಬ ‘ಪ್ರಜಾವಾಣಿ’ ವರದಿಯನ್ನು ಶ್ರೀರಾಮುಲು ಅವರು ಸದನದಲ್ಲಿ ಉಲ್ಲೇಖಿಸಿದರು.</p>.<p>‘ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಯನ್ನು ಸಂಪೂರ್ಣ ರದ್ದು ಮಾಡಿಲ್ಲ. ಸೈಕಲ್ಗಳ ಗುಣಮಟ್ಟ ಕಳಪೆ ಗುಣಮಟ್ಟದ್ದು ಎಂಬ ದೂರು ಬಂದಿತ್ತು. ಹಾಗಾಗಿ, ತನಿಖೆಗೆ ಆದೇಶಿಸಿದ್ದೇನೆ’ ಎಂದರು.</p>.<p>ವಿದ್ಯಾರ್ಥಿಗಳ ಕೊರತೆ ಕಾರಣಕ್ಕೆ ಯಾವುದೇ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಮುಚ್ಚಿಲ್ಲ. ಶೂನ್ಯ ದಾಖಲಾತಿ ಹೊಂದಿರುವ 318 ಶಾಲೆಗಳಲ್ಲಿ ತರಗತಿಗಳಲ್ಲಿ ನಡೆಯುತ್ತಿಲ್ಲ ಎಂದರು.</p>.<p><strong>ನೀಟ್’ ಮಾಹಿತಿ ಸೋರಿಕೆ: ಪ್ರಕರಣದ ತನಿಖೆ</strong></p>.<p><strong>ಬೆಳಗಾವಿ:</strong> ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ ವೈಯಕ್ತಿಕ ಹಾಗೂ ಶೈಕ್ಷಣಿಕ ವಿವರಗಳ ಮಾಹಿತಿ ಸೋರಿಕೆ ಪ್ರಕರಣದ ತನಿಖೆ ನಡೆಸಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ವಿ.ಸೋಮಣ್ಣ ಪ್ರಶ್ನೆಗೆ ಉತ್ತರಿಸಿ, ’ನಮ್ಮ ಆಡಳಿತ ಭಾಷೆಯಲ್ಲೂ ಪರೀಕ್ಷೆ ನಡೆಸುವ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ‘ ಎಂದರು.</p>.<p>ವಿ.ಸೋಮಣ್ಣ, ’ಮಾಹಿತಿ ಸೋರಿಕೆ ಬಗ್ಗೆ ‘ಪ್ರಜಾವಾಣಿ’ ಪತ್ರಿಕೆಯಲ್ಲಿ ಜುಲೈ 21ರಂದು ವರದಿ ಪ್ರಕಟವಾಗಿದೆ. ಇದೊಂದು ಗಂಭೀರ ಪ್ರಕರಣ. ತನಿಖೆ ನಡೆಸಬೇಕು‘ ಎಂದು ಆಗ್ರಹಿಸಿದರು.</p>.<p><strong>ಶೆಟ್ಟರ್ ಚಾಟಿ</strong></p>.<p><strong>ಬೆಳಗಾವಿ:</strong> ಅಭಿವೃದ್ಧಿಯಲ್ಲಿ ಹಿಂದುಳಿದ ಉತ್ತರ ಕರ್ನಾಟಕ ಭಾಗದ ವಸ್ತುಸ್ಥಿತಿಯನ್ನು ವಿಧಾನಸಭೆಯಲ್ಲಿ ಬಿಜೆಪಿಯ ಜಗದೀಶ ಶೆಟ್ಟರ್ ಎಳೆ ಎಳೆಯಾಗಿ ಬಿಚ್ಚಿಟ್ಟರು.</p>.<p>ಈ ವೇಳೆ ‘ಪ್ರಜಾವಾಣಿ’ಯ ‘ಅನುಸಂಧಾನ’ ಅಂಕಣವನ್ನು ಉಲ್ಲೇಖಿಸಿದ ಅವರು, ರಾಜ್ಯ ಸರ್ಕಾರದ ಕಾರ್ಯವೈಖರಿಯನ್ನು ಟೀಕಿಸಿದರು.</p>.<p>‘ಕುಮಾರಸ್ವಾಮಿ ಅವರದ್ದು ರಾತ್ರಿ ಸರ್ಕಾರ, ಹಗಲೆಲ್ಲ ನಿದ್ದೆ ಮಾಡುತ್ತಿದೆ’ ಎಂದು ರೈತನೊಬ್ಬ ಹೇಳಿದ ಮಾತು ಈ ಅಂಕಣದಲ್ಲಿದೆ. ಸರ್ಕಾರ ಯಾವ ರೀತಿ ಕೆಲಸ ಮಾಡುತ್ತಿದೆ ಎಂದು ಲೇಖಕರು ಬಣ್ಣಿಸಿದ್ದಾರೆ ಎಂದು ಹೇಳಿದ ಅವರು, ರೈತ –ಲೇಖಕರ ಮಧ್ಯೆ ನಡೆದ ಸಂಭಾಷಣೆಯನ್ನು ಓದಿದರು.</p>.<p>‘ಎಲ್ಲಿಗೆ ಬಂತೋ ಸಂಗಯ್ಯ ಎಂದರೆ, ಇದ್ದಂಗೆ ಇರೋ ಸಿದ್ದಯ್ಯ ಅಂದರಂತೆ ಎಂಬಂತಿದೆ ಸರ್ಕಾರದ ನಡೆ. ಈ ಅಂಕಣ ನೋಡಿಯಾದರೂ ಸಮ್ಮಿಶ್ರ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು’ ಎಂದರು. ‘ಪ್ರಜಾವಾಣಿ’ಯಲ್ಲಿ ಪ್ರಕಟವಾದ ‘ನಿರ್ಲಕ್ಷ್ಯ ಸೂಚ್ಯಂಕವೇ ಸಾಕ್ಷ್ಯ’ ಎಂಬ ವರದಿಯನ್ನೂ ಉಲ್ಲೇಖಿಸಿದರು. ಬಿಜೆಪಿ ಎ.ಎಸ್. ಪಾಟೀಲ ನಡಹಳ್ಳಿ ಕೂಡಾ ಧ್ವನಿಗೂಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>