<p><strong>ಬೆಂಗಳೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಮುಖ್ಯಮಂತ್ರಿ ವಿಶೇಷ ಅನುದಾನ’ದ ಅಡಿ 2023–24 ನೇ ಸಾಲಿಗೆ ವಿವಿಧ ಮಠಗಳು ಮತ್ತು ದೇವಸ್ಥಾನಗಳಿಗೆ ₹20 ಕೋಟಿ ಸಹಾಯಾನುದಾನ ಪ್ರಕಟಿಸಿದ್ದಾರೆ.</p><p>ಬಿಜೆಪಿ ಸರ್ಕಾರ ಇದ್ದಾಗ ಅದರಲ್ಲೂ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲ ಸಮುದಾಯಗಳ ಮಠಗಳಿಗೂ ಪ್ರತಿ ಬಜೆಟ್ನಲ್ಲೂ ಅನುದಾನ ನೀಡುತ್ತಲೇ ಬಂದಿದ್ದರು. ಈ ಕ್ರಮ ಸಾಕಷ್ಟು ಟೀಕೆಗೂ ಗುರಿಯಾಗಿತ್ತು. ಆದರೆ, ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಮಠಗಳಿಗೂ ಅನುದಾನ ನೀಡಲು ಮುಂದಾಗಿದ್ದಾರೆ. ತಮ್ಮ ಹಿಂದಿನ ಅವಧಿಯಲ್ಲಿ ಮಠಗಳಿಗೆ ಅನುದಾನ ನೀಡಿರಲಿಲ್ಲ.</p><p>2013–2018 ರ ಅವಧಿಯ ಬಜೆಟ್ಗಳ ವೆಚ್ಚ ಅಂದಾಜಿನ ದಾಖಲೆಗಳನ್ನು ಪರಿಶೀಲಿಸಿದಾಗ ಸಿದ್ದರಾಮಯ್ಯ ಅವರು ಮಠಗಳಿಗೆ ಅನುದಾನ ನೀಡಿರುವುದಕ್ಕೆ ಎಲ್ಲಿಯೂ ಉಲ್ಲೇಖವಿಲ್ಲ. ಆದರೆ, ಕೆಲವು ದೇವಸ್ಥಾನಗಳಿಗೆ ಅನುದಾನ ನೀಡಿರುವ ಮಾಹಿತಿ ಸಿಗುತ್ತದೆ. ವಿಶೇಷ ಅನುದಾನದಡಿ ನೀಡುವ ಮೊಬಲಗು, ಮುಖ್ಯಮಂತ್ರಿಯವರ ವಿವೇಚನಾ ಅಧಿಕಾರವನ್ನು ಒಳಗೊಂಡಿರುತ್ತದೆ.</p><p>ಬಸವರಾಜ ಬೊಮ್ಮಾಯಿ ಅವರು ಫೆಬ್ರುವರಿಯಲ್ಲಿ ಮಂಡಿಸಿದ್ದ ಚುನಾವಣಾ ಪೂರ್ವ ಬಜೆಟ್ನಲ್ಲಿ ವಿವಿಧ ಮಠಗಳು ಮತ್ತು ದೇವಸ್ಥಾನಗಳಿಗೆ ₹200 ಕೋಟಿ ನಿಗದಿ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಹೊಸ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, ಇಷ್ಟು ಬೃಹತ್ ಮೊತ್ತದ ಅನುದಾನವನ್ನು ಕಡಿತ ಮಾಡಿದ್ದಾರೆ. </p>.<p>ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ, 2008–2013 ಮತ್ತು 2020– 2023(ಬೊಮ್ಮಾಯಿ ಬಜೆಟ್ವರೆಗೆ) ರಲ್ಲಿ ಮಠ ಮಂದಿರಗಳಿಗೆ ಸಾಕಷ್ಟು ಅನುದಾನ ನೀಡಲಾಗಿದೆ. </p><p>ರಾಜ್ಯದ ಪ್ರಮುಖ ಮಠಗಳಾದ ಆದಿಚುಂಚನಗಿರಿ, ಸಿದ್ದಗಂಗಾ ಹಾಗೂ ಕಾಗಿನೆಲೆ ಕನಕ ಗುರುಪೀಠ, ಕೂಡಲಸಂಗಮದ ಪಂಚಮಸಾಲಿ ಪೀಠ ಸೇರಿದಂತೆ ಹಲವು ಮಠಗಳು ಸರ್ಕಾರದ ಅನುದಾನ ಪಡೆಯುತ್ತಿವೆ. 2020–21 ರಲ್ಲಿ ಯಡಿಯೂರಪ್ಪ ಅವರು ಕೋವಿಡ್ ಸಮಸ್ಯೆ ಇದ್ದರೂ ₹47.37 ಕೋಟಿ ವಿಶೇಷ ಅನುದಾನ ನೀಡಿದ್ದರು. 2021–22 ರಲ್ಲಿ ₹21.18, 2022–23 ರಲ್ಲಿ ₹20 ಕೋಟಿ ನಿಗದಿ ಮಾಡಿದ್ದರು.</p><p>ಜಾತಿ ಆಧಾರಿತ ಮಠಗಳಿಗೆ ಅನುದಾನ ನೀಡುವ ಪದ್ಧತಿ ಆರಂಭಿಸಿದ್ದ ಬಿ.ಎಸ್. ಯಡಿಯೂರಪ್ಪ ಅವರು ಮಠಗಳ ಮೂಲಕ ಆ ಸಮುದಾಯದ ಒಲವು ಗಳಿಸಲು ಪ್ರಯತ್ನಿಸಿದ್ದರು. ಆಗ 2009–10 ರಲ್ಲಿ ವಿಶೇಷ ಅನುದಾನದಡಿ ಮಠಗಳಿಗೆ ₹20 ಕೋಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಮುಖ್ಯಮಂತ್ರಿ ವಿಶೇಷ ಅನುದಾನ’ದ ಅಡಿ 2023–24 ನೇ ಸಾಲಿಗೆ ವಿವಿಧ ಮಠಗಳು ಮತ್ತು ದೇವಸ್ಥಾನಗಳಿಗೆ ₹20 ಕೋಟಿ ಸಹಾಯಾನುದಾನ ಪ್ರಕಟಿಸಿದ್ದಾರೆ.</p><p>ಬಿಜೆಪಿ ಸರ್ಕಾರ ಇದ್ದಾಗ ಅದರಲ್ಲೂ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲ ಸಮುದಾಯಗಳ ಮಠಗಳಿಗೂ ಪ್ರತಿ ಬಜೆಟ್ನಲ್ಲೂ ಅನುದಾನ ನೀಡುತ್ತಲೇ ಬಂದಿದ್ದರು. ಈ ಕ್ರಮ ಸಾಕಷ್ಟು ಟೀಕೆಗೂ ಗುರಿಯಾಗಿತ್ತು. ಆದರೆ, ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಮಠಗಳಿಗೂ ಅನುದಾನ ನೀಡಲು ಮುಂದಾಗಿದ್ದಾರೆ. ತಮ್ಮ ಹಿಂದಿನ ಅವಧಿಯಲ್ಲಿ ಮಠಗಳಿಗೆ ಅನುದಾನ ನೀಡಿರಲಿಲ್ಲ.</p><p>2013–2018 ರ ಅವಧಿಯ ಬಜೆಟ್ಗಳ ವೆಚ್ಚ ಅಂದಾಜಿನ ದಾಖಲೆಗಳನ್ನು ಪರಿಶೀಲಿಸಿದಾಗ ಸಿದ್ದರಾಮಯ್ಯ ಅವರು ಮಠಗಳಿಗೆ ಅನುದಾನ ನೀಡಿರುವುದಕ್ಕೆ ಎಲ್ಲಿಯೂ ಉಲ್ಲೇಖವಿಲ್ಲ. ಆದರೆ, ಕೆಲವು ದೇವಸ್ಥಾನಗಳಿಗೆ ಅನುದಾನ ನೀಡಿರುವ ಮಾಹಿತಿ ಸಿಗುತ್ತದೆ. ವಿಶೇಷ ಅನುದಾನದಡಿ ನೀಡುವ ಮೊಬಲಗು, ಮುಖ್ಯಮಂತ್ರಿಯವರ ವಿವೇಚನಾ ಅಧಿಕಾರವನ್ನು ಒಳಗೊಂಡಿರುತ್ತದೆ.</p><p>ಬಸವರಾಜ ಬೊಮ್ಮಾಯಿ ಅವರು ಫೆಬ್ರುವರಿಯಲ್ಲಿ ಮಂಡಿಸಿದ್ದ ಚುನಾವಣಾ ಪೂರ್ವ ಬಜೆಟ್ನಲ್ಲಿ ವಿವಿಧ ಮಠಗಳು ಮತ್ತು ದೇವಸ್ಥಾನಗಳಿಗೆ ₹200 ಕೋಟಿ ನಿಗದಿ ಮಾಡಿದ್ದರು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಹೊಸ ಬಜೆಟ್ ಮಂಡಿಸಿದ ಸಿದ್ದರಾಮಯ್ಯ, ಇಷ್ಟು ಬೃಹತ್ ಮೊತ್ತದ ಅನುದಾನವನ್ನು ಕಡಿತ ಮಾಡಿದ್ದಾರೆ. </p>.<p>ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದರೆ, 2008–2013 ಮತ್ತು 2020– 2023(ಬೊಮ್ಮಾಯಿ ಬಜೆಟ್ವರೆಗೆ) ರಲ್ಲಿ ಮಠ ಮಂದಿರಗಳಿಗೆ ಸಾಕಷ್ಟು ಅನುದಾನ ನೀಡಲಾಗಿದೆ. </p><p>ರಾಜ್ಯದ ಪ್ರಮುಖ ಮಠಗಳಾದ ಆದಿಚುಂಚನಗಿರಿ, ಸಿದ್ದಗಂಗಾ ಹಾಗೂ ಕಾಗಿನೆಲೆ ಕನಕ ಗುರುಪೀಠ, ಕೂಡಲಸಂಗಮದ ಪಂಚಮಸಾಲಿ ಪೀಠ ಸೇರಿದಂತೆ ಹಲವು ಮಠಗಳು ಸರ್ಕಾರದ ಅನುದಾನ ಪಡೆಯುತ್ತಿವೆ. 2020–21 ರಲ್ಲಿ ಯಡಿಯೂರಪ್ಪ ಅವರು ಕೋವಿಡ್ ಸಮಸ್ಯೆ ಇದ್ದರೂ ₹47.37 ಕೋಟಿ ವಿಶೇಷ ಅನುದಾನ ನೀಡಿದ್ದರು. 2021–22 ರಲ್ಲಿ ₹21.18, 2022–23 ರಲ್ಲಿ ₹20 ಕೋಟಿ ನಿಗದಿ ಮಾಡಿದ್ದರು.</p><p>ಜಾತಿ ಆಧಾರಿತ ಮಠಗಳಿಗೆ ಅನುದಾನ ನೀಡುವ ಪದ್ಧತಿ ಆರಂಭಿಸಿದ್ದ ಬಿ.ಎಸ್. ಯಡಿಯೂರಪ್ಪ ಅವರು ಮಠಗಳ ಮೂಲಕ ಆ ಸಮುದಾಯದ ಒಲವು ಗಳಿಸಲು ಪ್ರಯತ್ನಿಸಿದ್ದರು. ಆಗ 2009–10 ರಲ್ಲಿ ವಿಶೇಷ ಅನುದಾನದಡಿ ಮಠಗಳಿಗೆ ₹20 ಕೋಟಿ ನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>