‘ಅನುದಾನಿತ ಶಾಲೆ–ಕಾಲೇಜುಗಳಲ್ಲಿ ಇದೇ ಮಾರ್ಚ್ವರೆಗೆ ಖಾಲಿ ಇರುವ ಹುದ್ದೆಗಳನ್ನು ತುಂಬಲು ಅನುಮತಿ ನೀಡಬೇಕು. ವಸತಿ ಶಾಲೆಗಳಲ್ಲಿ ಆರರಿಂದ 12ನೇ ತರಗತಿವರೆಗೆ ಮಕ್ಕಳ ಪ್ರವೇಶಕ್ಕೆ ನಿಗದಿಪಡಿಸಿದ ಪೋಷಕರ ಆದಾಯ ಮಿತಿಯನ್ನು ಎಸ್.ಸಿ, ಎಸ್.ಟಿ ಹಾಗೂ ಹಿಂದುಳಿದ 2 ಎ ವರ್ಗಕ್ಕೆ ₹ 4 ಲಕ್ಷ ಮತ್ತು ಇತರ ಹಿಂದುಳಿದ ವರ್ಗಗಳಿಗೆ ₹ 3 ಲಕ್ಷಕ್ಕೆ ಏರಿಸಬೇಕು. ಖಾಸಗಿ ಶಾಲೆಗಳಿಗೆ ಆರ್ಟಿಇ ಅಡಿ ಬಾಕಿ ಉಳಿಸಿಕೊಂಡಿರುವ ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು’ ಎಂದೂ ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.