<p><strong>ಬೆಂಗಳೂರು</strong>: ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಅವರು ಮತ್ತು ಅವರ ಕುಟುಂಬದವರ ಪುನರ್ವಸತಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಸಂಜೆ ಅವರು ವರದಿ ಸಲ್ಲಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಮಾಜಿ ದೇವದಾಸಿಯರ ಮೂಲ ಹಂತದ ಸಮೀಕ್ಷೆಯಲ್ಲಿ ಹಲವರು ಸಮೀಕ್ಷಾ ವ್ಯಾಪ್ತಿಯಿಂದ ಹೊರಗೆ ಉಳಿದಿದ್ದರು. ಹೀಗಾಗಿ ಮರುಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆಯಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರಿಕೆ ವಹಿಸಲಾಗಿತ್ತು ಮತ್ತು ಸ್ವತಃ ನಾನೇ ಮೇಲ್ವಿಚಾರಣೆ ನಡೆಸಿದ್ದೆ’ ಎಂದು ತಿಳಿಸಿದರು.</p>.<p>‘ಮಾಜಿ ದೇವದಾಸಿ ಮಹಿಳೆಯರು, ಅವರ 1, 2 ಮತ್ತು 3ನೇ ತಲೆಮಾರಿನ ಮಕ್ಕಳ ಶಿಕ್ಷಣ, ವಿವಾಹ ಮತ್ತು ಅಂತರ್ಜಾತಿ ವಿವಾಹವನ್ನು ಪ್ರೋತ್ಸಾಹಿಸಬೇಕಿದೆ. ಈ ಮಕ್ಕಳು ಮತ್ತೆ ಈ ಅನಿಷ್ಟ ಪದ್ಧತಿಗೆ ಮರಳಬಾರದು. ಇದಕ್ಕಾಗಿ ಜಾಗೃತಿ ಮೂಡಿಸಬೇಕಿದೆ. ಈ ಎಲ್ಲ ಉದ್ದೇಶಗಳನ್ನು ಒಳಗೊಂಡು ಒಂದು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮರುಸಮೀಕ್ಷೆ ನಡೆದಿತ್ತು.</p>.<p>23395 – ಮರುಸಮೀಕ್ಷೆ ನಂತರ ಪತ್ತೆಯಾದ ಮಾಜಿ ದೇವದಾಸಿ ಮಹಿಳೆಯರ ಸಂಖ್ಯೆ</p><p>90092 – ಮಾಜಿ ದೇವದಾಸಿ ಮಹಿಳೆಯರ 1 2 ಮತ್ತು 3ನೇ ತಲೆಮಾರಿನ ಕುಟುಂಬದ ಸದಸ್ಯರ ಸಂಖ್ಯೆ </p>.<p><strong>ಬಾಗಲಕೋಟೆಯಲ್ಲಿ ಹೆಚ್ಚು... </strong></p><p>(ಜಿಲ್ಲೆ : ಮಾಜಿ ದೇವದಾಸಿ ಮಹಿಳೆಯರ ಸಂಖ್ಯೆ) </p><p>ಬಾಗಲಕೋಟೆ: 4189 </p><p>ವಿಜಯನಗರ: 3876 </p><p>ಬೆಳಗಾವಿ: 2649 </p><p>ಕೊಪ್ಪಳ : 2469 </p><p>ಬಳ್ಳಾರಿ: 2333</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಅವರು ಮತ್ತು ಅವರ ಕುಟುಂಬದವರ ಪುನರ್ವಸತಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಂಗಳವಾರ ಸಂಜೆ ಅವರು ವರದಿ ಸಲ್ಲಿಸಿದರು.</p>.<p>ಬಳಿಕ ಮಾತನಾಡಿದ ಅವರು, ‘ಮಾಜಿ ದೇವದಾಸಿಯರ ಮೂಲ ಹಂತದ ಸಮೀಕ್ಷೆಯಲ್ಲಿ ಹಲವರು ಸಮೀಕ್ಷಾ ವ್ಯಾಪ್ತಿಯಿಂದ ಹೊರಗೆ ಉಳಿದಿದ್ದರು. ಹೀಗಾಗಿ ಮರುಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆಯಲ್ಲಿ ಯಾವುದೇ ಲೋಪ ಆಗದಂತೆ ಎಚ್ಚರಿಕೆ ವಹಿಸಲಾಗಿತ್ತು ಮತ್ತು ಸ್ವತಃ ನಾನೇ ಮೇಲ್ವಿಚಾರಣೆ ನಡೆಸಿದ್ದೆ’ ಎಂದು ತಿಳಿಸಿದರು.</p>.<p>‘ಮಾಜಿ ದೇವದಾಸಿ ಮಹಿಳೆಯರು, ಅವರ 1, 2 ಮತ್ತು 3ನೇ ತಲೆಮಾರಿನ ಮಕ್ಕಳ ಶಿಕ್ಷಣ, ವಿವಾಹ ಮತ್ತು ಅಂತರ್ಜಾತಿ ವಿವಾಹವನ್ನು ಪ್ರೋತ್ಸಾಹಿಸಬೇಕಿದೆ. ಈ ಮಕ್ಕಳು ಮತ್ತೆ ಈ ಅನಿಷ್ಟ ಪದ್ಧತಿಗೆ ಮರಳಬಾರದು. ಇದಕ್ಕಾಗಿ ಜಾಗೃತಿ ಮೂಡಿಸಬೇಕಿದೆ. ಈ ಎಲ್ಲ ಉದ್ದೇಶಗಳನ್ನು ಒಳಗೊಂಡು ಒಂದು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮರುಸಮೀಕ್ಷೆ ನಡೆದಿತ್ತು.</p>.<p>23395 – ಮರುಸಮೀಕ್ಷೆ ನಂತರ ಪತ್ತೆಯಾದ ಮಾಜಿ ದೇವದಾಸಿ ಮಹಿಳೆಯರ ಸಂಖ್ಯೆ</p><p>90092 – ಮಾಜಿ ದೇವದಾಸಿ ಮಹಿಳೆಯರ 1 2 ಮತ್ತು 3ನೇ ತಲೆಮಾರಿನ ಕುಟುಂಬದ ಸದಸ್ಯರ ಸಂಖ್ಯೆ </p>.<p><strong>ಬಾಗಲಕೋಟೆಯಲ್ಲಿ ಹೆಚ್ಚು... </strong></p><p>(ಜಿಲ್ಲೆ : ಮಾಜಿ ದೇವದಾಸಿ ಮಹಿಳೆಯರ ಸಂಖ್ಯೆ) </p><p>ಬಾಗಲಕೋಟೆ: 4189 </p><p>ವಿಜಯನಗರ: 3876 </p><p>ಬೆಳಗಾವಿ: 2649 </p><p>ಕೊಪ್ಪಳ : 2469 </p><p>ಬಳ್ಳಾರಿ: 2333</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>