<p><strong>ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ):</strong> ‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಆರೋಗ್ಯ ಸುಧಾರಿಸಲೆಂದು ಪ್ರಾರ್ಥಿಸಿ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲು ತಾಲ್ಲೂಕಿನ 360 ಗ್ರಾಮಗಳ ಗಣೇಶೋತ್ಸವ ಪೂಜಾ ಸಮಿತಿಗಳಿಗೆ ಬಸ್ ತಿಮ್ಮೇಗೌಡ ಚಾರಿಟಬಲ್ ಟ್ರಸ್ಟ್ನಿಂದ ತಲಾ ₹5 ಸಾವಿರ ಧನಸಹಾಯ ನೀಡಲಾಗುವುದು’ ಎಂದು ಟ್ರಸ್ಟ್ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ಬಸ್ ಸಂತೋಷ್ ಕುಮಾರ್ ತಿಳಿಸಿದರು.</p>.<p>ಪಟ್ಟಣದ ಬಸವೇಶ್ವರ ನಗರದಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿ ದೇಣಿಗೆ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಜೆಡಿಎಸ್ ಸದೃಢವಾಗಿ ಬೆಳೆದು ಅಧಿಕಾರಕ್ಕೆ ಬರಬೇಕಾದರೆ ದೇವೇಗೌಡರು ಆರೋಗ್ಯವಂತರಾಗಿರಬೇಕು. ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಿರುವ ವಿಘ್ನ ನಿವಾರಕನ ಮೂರ್ತಿಗಳಿಗೆ ದೇವೇಗೌಡರ ಹೆಸರಿನಲ್ಲಿ ಅರ್ಚನೆ, ವಿಶೇಷ ಪೂಜೆ ಸಲ್ಲಿಸುವಂತಾಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ):</strong> ‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಆರೋಗ್ಯ ಸುಧಾರಿಸಲೆಂದು ಪ್ರಾರ್ಥಿಸಿ ಗಣೇಶ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲು ತಾಲ್ಲೂಕಿನ 360 ಗ್ರಾಮಗಳ ಗಣೇಶೋತ್ಸವ ಪೂಜಾ ಸಮಿತಿಗಳಿಗೆ ಬಸ್ ತಿಮ್ಮೇಗೌಡ ಚಾರಿಟಬಲ್ ಟ್ರಸ್ಟ್ನಿಂದ ತಲಾ ₹5 ಸಾವಿರ ಧನಸಹಾಯ ನೀಡಲಾಗುವುದು’ ಎಂದು ಟ್ರಸ್ಟ್ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ಬಸ್ ಸಂತೋಷ್ ಕುಮಾರ್ ತಿಳಿಸಿದರು.</p>.<p>ಪಟ್ಟಣದ ಬಸವೇಶ್ವರ ನಗರದಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿಗೆ ಪೂಜೆ ಸಲ್ಲಿಸಿ ದೇಣಿಗೆ ವಿತರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಜೆಡಿಎಸ್ ಸದೃಢವಾಗಿ ಬೆಳೆದು ಅಧಿಕಾರಕ್ಕೆ ಬರಬೇಕಾದರೆ ದೇವೇಗೌಡರು ಆರೋಗ್ಯವಂತರಾಗಿರಬೇಕು. ತಾಲ್ಲೂಕಿನ ಎಲ್ಲಾ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಿರುವ ವಿಘ್ನ ನಿವಾರಕನ ಮೂರ್ತಿಗಳಿಗೆ ದೇವೇಗೌಡರ ಹೆಸರಿನಲ್ಲಿ ಅರ್ಚನೆ, ವಿಶೇಷ ಪೂಜೆ ಸಲ್ಲಿಸುವಂತಾಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>