<p><strong>ಬೆಂಗಳೂರು</strong>: ‘ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ವಿಳಂಬವಾಗಲು ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನೇರ ಕಾರಣರಾಗಿದ್ದಾರೆ’ ಎಂದು ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಹೈಕೋರ್ಟ್ಗೆ ಅರುಹಿದರು.</p><p>ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರಜ್ವಲ್ ರೇವಣ್ಣ ಅವರು, ಎರಡನೇ ಬಾರಿಗೆ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p><p>ವಿಚಾರಣೆ ವೇಳೆ, ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಆದ ಪದಾಂಕಿತ ಹಿರಿಯ ವಕೀಲ ಕೆ.ರವಿವರ್ಮ ಕುಮಾರ್, ‘ಪ್ರಕರಣವನ್ನು ವಿಚಾರಣೆಗೆ ಅಣಿಗೊಳಿಸಲು ಪ್ರಜ್ವಲ್ ನ್ಯಾಯಾಲಯಕ್ಕೆ ಅವಕಾಶವನ್ನೇ ನೀಡಿಲ್ಲ. ಅವರ ಈ ನಡತೆಯಿಂದಾಗಿ ವಿಚಾರಣೆ ಮಂದಗತಿಯಲ್ಲಿ ಸಾಗುತ್ತಿದೆ’ ಎಂದು ಆರೋಪಿಸಿದರು.</p><p>‘ಅಷ್ಟಕ್ಕೂ, ವಿಚಾರಣಾ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದ ಬಳಿಕವಷ್ಟೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬೇಕು. ಆದರೆ, ಪ್ರಜ್ವಲ್ ಈ ಪ್ರಕ್ರಿಯೆ ಅನುಸರಿಸದೇ ನೇರವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದಕ್ಕೆ ಯಾವುದೇ ವಿಶೇಷ ಕಾರಣ ನೀಡಿಲ್ಲ. ಹೀಗಾಗಿ, ಈ ಹಂತದಲ್ಲಿ ಆರೋಪಿಗೆ ಜಾಮೀನು ನೀಡಬಾರದು’ ಎಂದು ಪ್ರತಿಪಾದಿಸಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಮನೆ ಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ವಿಳಂಬವಾಗಲು ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ನೇರ ಕಾರಣರಾಗಿದ್ದಾರೆ’ ಎಂದು ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಹೈಕೋರ್ಟ್ಗೆ ಅರುಹಿದರು.</p><p>ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರಜ್ವಲ್ ರೇವಣ್ಣ ಅವರು, ಎರಡನೇ ಬಾರಿಗೆ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.</p><p>ವಿಚಾರಣೆ ವೇಳೆ, ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಆದ ಪದಾಂಕಿತ ಹಿರಿಯ ವಕೀಲ ಕೆ.ರವಿವರ್ಮ ಕುಮಾರ್, ‘ಪ್ರಕರಣವನ್ನು ವಿಚಾರಣೆಗೆ ಅಣಿಗೊಳಿಸಲು ಪ್ರಜ್ವಲ್ ನ್ಯಾಯಾಲಯಕ್ಕೆ ಅವಕಾಶವನ್ನೇ ನೀಡಿಲ್ಲ. ಅವರ ಈ ನಡತೆಯಿಂದಾಗಿ ವಿಚಾರಣೆ ಮಂದಗತಿಯಲ್ಲಿ ಸಾಗುತ್ತಿದೆ’ ಎಂದು ಆರೋಪಿಸಿದರು.</p><p>‘ಅಷ್ಟಕ್ಕೂ, ವಿಚಾರಣಾ ನ್ಯಾಯಾಲಯ ಜಾಮೀನು ಅರ್ಜಿ ತಿರಸ್ಕರಿಸಿದ ಬಳಿಕವಷ್ಟೇ ಹೈಕೋರ್ಟ್ಗೆ ಅರ್ಜಿ ಸಲ್ಲಿಸಬೇಕು. ಆದರೆ, ಪ್ರಜ್ವಲ್ ಈ ಪ್ರಕ್ರಿಯೆ ಅನುಸರಿಸದೇ ನೇರವಾಗಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದಕ್ಕೆ ಯಾವುದೇ ವಿಶೇಷ ಕಾರಣ ನೀಡಿಲ್ಲ. ಹೀಗಾಗಿ, ಈ ಹಂತದಲ್ಲಿ ಆರೋಪಿಗೆ ಜಾಮೀನು ನೀಡಬಾರದು’ ಎಂದು ಪ್ರತಿಪಾದಿಸಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 2ಕ್ಕೆ ಮುಂದೂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>