<p><strong>ಬೆಂಗಳೂರು:</strong> ರಾಜ್ಯದಲ್ಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಶಿಕ್ಷಕರನ್ನು ‘ಹೆಚ್ಚುವರಿ’ ಎಂದು ಗುರುತಿಸಿರುವ ಶಾಲಾ ಶಿಕ್ಷಣ ಇಲಾಖೆ, ಅವರನ್ನು 240ಕ್ಕಿಂತ ಹೆಚ್ಚು ಮಕ್ಕಳಿರುವ ಶಾಲೆಗಳಿಗೆ ಸಾಮೂಹಿಕವಾಗಿ ವರ್ಗಾವಣೆ ಮಾಡಲು ಮುಂದಾಗಿದೆ.</p>.<p>ಶಾಲಾ ಶಿಕ್ಷಣ ಇಲಾಖೆ ಪ್ರೌಢಶಾಲೆಗಳಲ್ಲಿನ ಸಿಬ್ಬಂದಿ ಸ್ತರವಿನ್ಯಾಸವನ್ನು ಮರುನಿಗದಿಪಡಿಸಿದ್ದು, ಪ್ರತಿ ಶಾಲೆಯಲ್ಲಿ ಮುಖ್ಯ ಶಿಕ್ಷಕರನ್ನು ಹೊರತುಪಡಿಸಿ ಏಳು ಶಿಕ್ಷಕರ ಹುದ್ದೆಗಳಿಗೆ ಮಾತ್ರ ಅವಕಾಶ ನೀಡಿದೆ. ಈ ಮಾನದಂಡದ ಪ್ರಕಾರ, 240ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳಲ್ಲಿರುವ ವಿಶೇಷ ಶಿಕ್ಷಕರನ್ನು ‘ಹೆಚ್ಚುವರಿ’ ಎಂದು ಪರಿಗಣಿಸಲಾಗಿದೆ. ಇಲಾಖೆಯ ಈ ನಿರ್ಧಾರದಿಂದಾಗಿ ಕಡಿಮೆ ಮಕ್ಕಳು ಇರುವ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಇರುವ ಎಲ್ಲ ವಿಶೇಷ ಶಿಕ್ಷಕರೂ ನಗರ ಪ್ರದೇಶದ ಶಾಲೆಗಳಿಗೆ ಸ್ಥಳಾಂತರಗೊಳ್ಳಲಿದ್ದಾರೆ. </p>.<p>ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ನಾಟಕ, ನೃತ್ಯ, ವೃತ್ತಿಶಿಕ್ಷಣದಂತಹ ವಿಷಯಗಳನ್ನು ಕಲಿಸಲು ವಿಶೇಷ ಶಿಕ್ಷಕರನ್ನು ಸರ್ಕಾರ ನೇಮಕ ಮಾಡಿದೆ. ಈ ವಿಶೇಷ ಶಿಕ್ಷಕರು ಸರ್ಕಾರಿ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಜ್ಞಾನದ ಜತೆಗೆ ವಿದ್ಯಾರ್ಥಿಗಳ ಸೃಜನಶೀಲತೆ, ಕಲಾತ್ಮಕ ಕೌಶಲ, ಜೀವನ ಕೌಶಲಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿದ್ದಾರೆ.</p>.<p>ಚಿತ್ರಕಲೆ, ಸಂಗೀತ, ಮತ್ತು ನಾಟಕದಂತಹ ವಿಷಯಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಸುಧಾರಿಸುವುದರ ಜತೆಗೆ, ಅವರ ಸಾಮಾಜಿಕ ಮತ್ತು ಭಾವನಾತ್ಮಕ ಬೆಳವಣಿಗೆಗೆ ಸಹಾಯ ಮಾಡುತ್ತವೆ. ಇಂತಹ ಕಲೆಗಳು ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ, ಸಹಕಾರ, ಮತ್ತು ಸ್ವಯಂ-ಅಭಿವ್ಯಕ್ತಿಯ ಕೌಶಲಗಳನ್ನು ಕಲಿಸುತ್ತವೆ. ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಲು, ವಿಶೇಷ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡಬೇಕು ಎಂದು ರಾಷ್ಟ್ರೀಯ ಶಿಕ್ಷಣ ನೀತಿಗಳಲ್ಲೂ ಉಲ್ಲೇಖಿಸಲಾಗಿದೆ.</p>.<p>‘ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೂ ಕಲೆ ಮತ್ತು ಸಂಸ್ಕೃತಿಯ ಶಿಕ್ಷಣ ಅಗತ್ಯ. ಕೇಂದ್ರೀಯ ವಿದ್ಯಾಲಯಗಳು, ನವೋದಯ ವಿದ್ಯಾಲಯಗಳು ಮತ್ತು ಸಿಬಿಎಸ್ಇ, ಐಸಿಎಸ್ಇ ಪಠ್ಯಕ್ರಮ ಅನುಸರಿಸುವ ಖಾಸಗಿ ಶಾಲೆಗಳು ವಿಶೇಷ ಶಿಕ್ಷಕರನ್ನು ನೇಮಿಸಿಕೊಂಡಿವೆ. ಸರ್ಕಾರದ ಈ ನಿರ್ಧಾರದಿಂದ ಸರ್ಕಾರಿ ಶಾಲೆಗಳ ಗ್ರಾಮೀಣ ಮಕ್ಕಳು ಅವಕಾಶ ವಂಚಿತರಾಗಲಿದ್ದಾರೆ’ ಎನ್ನುತ್ತಾರೆ ರಂಗ ಶಿಕ್ಷಕ ಬಸವರಾಜು. </p>.<div><blockquote>ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸ್ತರವಿನ್ಯಾಸವನ್ನು ಹಿಂದಿನಂತೆ ಮರುನಿಗದಿ ಮಾಡಬೇಕು. ವಿಶೇಷ ಶಿಕ್ಷಕರ ಸಾಮೂಹಿಕ ವರ್ಗಾವಣೆ ನಿರ್ಧಾರವನ್ನು ಹಿಂಪಡೆಯಬೇಕು</blockquote><span class="attribution"> ಬಸವರಾಜ ಹೊರಟ್ಟಿ, ಸಭಾಪತಿ, ವಿಧಾನಪರಿಷತ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಶಿಕ್ಷಕರನ್ನು ‘ಹೆಚ್ಚುವರಿ’ ಎಂದು ಗುರುತಿಸಿರುವ ಶಾಲಾ ಶಿಕ್ಷಣ ಇಲಾಖೆ, ಅವರನ್ನು 240ಕ್ಕಿಂತ ಹೆಚ್ಚು ಮಕ್ಕಳಿರುವ ಶಾಲೆಗಳಿಗೆ ಸಾಮೂಹಿಕವಾಗಿ ವರ್ಗಾವಣೆ ಮಾಡಲು ಮುಂದಾಗಿದೆ.</p>.<p>ಶಾಲಾ ಶಿಕ್ಷಣ ಇಲಾಖೆ ಪ್ರೌಢಶಾಲೆಗಳಲ್ಲಿನ ಸಿಬ್ಬಂದಿ ಸ್ತರವಿನ್ಯಾಸವನ್ನು ಮರುನಿಗದಿಪಡಿಸಿದ್ದು, ಪ್ರತಿ ಶಾಲೆಯಲ್ಲಿ ಮುಖ್ಯ ಶಿಕ್ಷಕರನ್ನು ಹೊರತುಪಡಿಸಿ ಏಳು ಶಿಕ್ಷಕರ ಹುದ್ದೆಗಳಿಗೆ ಮಾತ್ರ ಅವಕಾಶ ನೀಡಿದೆ. ಈ ಮಾನದಂಡದ ಪ್ರಕಾರ, 240ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳಲ್ಲಿರುವ ವಿಶೇಷ ಶಿಕ್ಷಕರನ್ನು ‘ಹೆಚ್ಚುವರಿ’ ಎಂದು ಪರಿಗಣಿಸಲಾಗಿದೆ. ಇಲಾಖೆಯ ಈ ನಿರ್ಧಾರದಿಂದಾಗಿ ಕಡಿಮೆ ಮಕ್ಕಳು ಇರುವ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಇರುವ ಎಲ್ಲ ವಿಶೇಷ ಶಿಕ್ಷಕರೂ ನಗರ ಪ್ರದೇಶದ ಶಾಲೆಗಳಿಗೆ ಸ್ಥಳಾಂತರಗೊಳ್ಳಲಿದ್ದಾರೆ. </p>.<p>ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ನಾಟಕ, ನೃತ್ಯ, ವೃತ್ತಿಶಿಕ್ಷಣದಂತಹ ವಿಷಯಗಳನ್ನು ಕಲಿಸಲು ವಿಶೇಷ ಶಿಕ್ಷಕರನ್ನು ಸರ್ಕಾರ ನೇಮಕ ಮಾಡಿದೆ. ಈ ವಿಶೇಷ ಶಿಕ್ಷಕರು ಸರ್ಕಾರಿ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಜ್ಞಾನದ ಜತೆಗೆ ವಿದ್ಯಾರ್ಥಿಗಳ ಸೃಜನಶೀಲತೆ, ಕಲಾತ್ಮಕ ಕೌಶಲ, ಜೀವನ ಕೌಶಲಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿದ್ದಾರೆ.</p>.<p>ಚಿತ್ರಕಲೆ, ಸಂಗೀತ, ಮತ್ತು ನಾಟಕದಂತಹ ವಿಷಯಗಳು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯವನ್ನು ಸುಧಾರಿಸುವುದರ ಜತೆಗೆ, ಅವರ ಸಾಮಾಜಿಕ ಮತ್ತು ಭಾವನಾತ್ಮಕ ಬೆಳವಣಿಗೆಗೆ ಸಹಾಯ ಮಾಡುತ್ತವೆ. ಇಂತಹ ಕಲೆಗಳು ವಿದ್ಯಾರ್ಥಿಗಳಿಗೆ ಒತ್ತಡ ನಿರ್ವಹಣೆ, ಸಹಕಾರ, ಮತ್ತು ಸ್ವಯಂ-ಅಭಿವ್ಯಕ್ತಿಯ ಕೌಶಲಗಳನ್ನು ಕಲಿಸುತ್ತವೆ. ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಲು, ವಿಶೇಷ ಶಿಕ್ಷಕರ ನೇಮಕಾತಿಗೆ ಆದ್ಯತೆ ನೀಡಬೇಕು ಎಂದು ರಾಷ್ಟ್ರೀಯ ಶಿಕ್ಷಣ ನೀತಿಗಳಲ್ಲೂ ಉಲ್ಲೇಖಿಸಲಾಗಿದೆ.</p>.<p>‘ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದ್ದರೂ ಕಲೆ ಮತ್ತು ಸಂಸ್ಕೃತಿಯ ಶಿಕ್ಷಣ ಅಗತ್ಯ. ಕೇಂದ್ರೀಯ ವಿದ್ಯಾಲಯಗಳು, ನವೋದಯ ವಿದ್ಯಾಲಯಗಳು ಮತ್ತು ಸಿಬಿಎಸ್ಇ, ಐಸಿಎಸ್ಇ ಪಠ್ಯಕ್ರಮ ಅನುಸರಿಸುವ ಖಾಸಗಿ ಶಾಲೆಗಳು ವಿಶೇಷ ಶಿಕ್ಷಕರನ್ನು ನೇಮಿಸಿಕೊಂಡಿವೆ. ಸರ್ಕಾರದ ಈ ನಿರ್ಧಾರದಿಂದ ಸರ್ಕಾರಿ ಶಾಲೆಗಳ ಗ್ರಾಮೀಣ ಮಕ್ಕಳು ಅವಕಾಶ ವಂಚಿತರಾಗಲಿದ್ದಾರೆ’ ಎನ್ನುತ್ತಾರೆ ರಂಗ ಶಿಕ್ಷಕ ಬಸವರಾಜು. </p>.<div><blockquote>ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರ ಸ್ತರವಿನ್ಯಾಸವನ್ನು ಹಿಂದಿನಂತೆ ಮರುನಿಗದಿ ಮಾಡಬೇಕು. ವಿಶೇಷ ಶಿಕ್ಷಕರ ಸಾಮೂಹಿಕ ವರ್ಗಾವಣೆ ನಿರ್ಧಾರವನ್ನು ಹಿಂಪಡೆಯಬೇಕು</blockquote><span class="attribution"> ಬಸವರಾಜ ಹೊರಟ್ಟಿ, ಸಭಾಪತಿ, ವಿಧಾನಪರಿಷತ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>