<p>ವರ್ಷದ ಮೊದಲ ಹಬ್ಬ ಸಂಕ್ರಾಂತಿಗೆ ಇನ್ನೊಂದು ವಾರ ಉಳಿದಿದೆ. ಅದೇ ರೀತಿ ಗಣರಾಜ್ಯೋತ್ಸವವೂ ಸನ್ನಿಹಿತವಾಗಿದೆ. ಹೀಗಾಗಿ ಬೆಂಗಳೂರಿನಿಂದ ಬೇರೆ ಬೇರೆ ಊರುಗಳಿಗೆ ತೆರಳುವವರಿಗೆ ಅನುಕೂಲವಾಗಲು ವಿಶೇಷ ರೈಲುಗಳು ಸಂಚರಿಸುತ್ತಿವೆ. ನೈರುತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. </p><p>ಸದ್ಯ ಎರಡು ಮಾರ್ಗದಲ್ಲಿ ಸಂಕ್ರಾಂತಿ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ, ವಿಶೇಷ ರೈಲು ಸಂಚರಿಸಲಿವೆ. ಹಾಗಾದರೆ ಆ ಎರಡು ಮಾರ್ಗ ಯಾವುವು, ಯಾವ ಸಮಯಕ್ಕೆ ರೈಲುಗಳು ಓಡಾಡಲಿವೆ ಎಂಬುದನ್ನು ತಿಳಿಯೋಣ. </p>.ಸಂಕ್ರಾಂತಿ: ಯಶವಂತಪುರ – ತಾಳಗುಪ್ಪ ವಿಶೇಷ ರೈಲು.<p>ಮುಖ್ಯವಾಗಿ ಈ ವಿಶೇಷ ರೈಲುಗಳು ಬೆಂಗಳೂರಿನಿಂದ ಆರಂಭವಾಗುತ್ತವೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ರೈಲ್ವೆ ಇಲಾಖೆ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><h2><strong>ಯಶವಂತಪುರ– ತಾಳಗುಪ್ಪ</strong></h2><p>ಜ.13 ಮತ್ತು ಜ.23ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 4.45ಕ್ಕೆ ತಾಳಗುಪ್ಪ ತಲುಪಲಿದೆ. </p><p>ಜ.14 ಮತ್ತು 24ರಂದು ಬೆಳಿಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.</p><p><strong>ರೈಲು ಸಂಚಾರಿಸುವ ಮಾರ್ಗ</strong></p><p>ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ವಿಶೇಷ ರೈಲುಗಳು ನಿಲುಗಡೆ ಹೊಂದಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p><h2><strong>ಬೆಂಗಳೂರು–ವಿಜಯಪುರ</strong></h2><p>ಈ ಮಾರ್ಗದಲ್ಲಿ ಪ್ರಮುಖವಾಗಿ ಸಂಕ್ರಾಂತಿ ಹಾಗೂ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಜನದಟ್ಟಣೆಯನ್ನು ನಿಯಂತ್ರಿಸಲು ಎಸ್ಎಂವಿಟಿ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.</p><p>ಜನವರಿ 13 ಮತ್ತು 23ರಂದು ರಾತ್ರಿ 7.15ಕ್ಕೆ ಎಸ್ಎಂವಿಟಿಯಿಂದ ಹೊರಡುವ ರೈಲು ಮರುದಿನ ಬೆಳಿಗ್ಗೆ 7ಕ್ಕೆ ವಿಜಯಪುರ ತಲುಪಲಿದೆ. </p><p>ವಿಜಯಪುರದಿಂದ ಜ.18 ಮತ್ತು 26ರಂದು ಸಂಜೆ 5.30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 6.30ಕ್ಕೆ ಎಸ್ಎಂವಿಟಿಗೆ ತಲುಪಲಿದೆ.</p><p><strong>ರೈಲು ಸಂಚರಿಸುವ ಮಾರ್ಗ</strong></p><p>ಬಾಣಸವಾಡಿ, ತುಮಕೂರು, ಅರಸಿಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವರ್ಷದ ಮೊದಲ ಹಬ್ಬ ಸಂಕ್ರಾಂತಿಗೆ ಇನ್ನೊಂದು ವಾರ ಉಳಿದಿದೆ. ಅದೇ ರೀತಿ ಗಣರಾಜ್ಯೋತ್ಸವವೂ ಸನ್ನಿಹಿತವಾಗಿದೆ. ಹೀಗಾಗಿ ಬೆಂಗಳೂರಿನಿಂದ ಬೇರೆ ಬೇರೆ ಊರುಗಳಿಗೆ ತೆರಳುವವರಿಗೆ ಅನುಕೂಲವಾಗಲು ವಿಶೇಷ ರೈಲುಗಳು ಸಂಚರಿಸುತ್ತಿವೆ. ನೈರುತ್ಯ ರೈಲ್ವೆ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. </p><p>ಸದ್ಯ ಎರಡು ಮಾರ್ಗದಲ್ಲಿ ಸಂಕ್ರಾಂತಿ ಹಾಗೂ ಗಣರಾಜ್ಯೋತ್ಸವದ ಪ್ರಯುಕ್ತ, ವಿಶೇಷ ರೈಲು ಸಂಚರಿಸಲಿವೆ. ಹಾಗಾದರೆ ಆ ಎರಡು ಮಾರ್ಗ ಯಾವುವು, ಯಾವ ಸಮಯಕ್ಕೆ ರೈಲುಗಳು ಓಡಾಡಲಿವೆ ಎಂಬುದನ್ನು ತಿಳಿಯೋಣ. </p>.ಸಂಕ್ರಾಂತಿ: ಯಶವಂತಪುರ – ತಾಳಗುಪ್ಪ ವಿಶೇಷ ರೈಲು.<p>ಮುಖ್ಯವಾಗಿ ಈ ವಿಶೇಷ ರೈಲುಗಳು ಬೆಂಗಳೂರಿನಿಂದ ಆರಂಭವಾಗುತ್ತವೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ನಿರ್ಧಾರವನ್ನು ರೈಲ್ವೆ ಇಲಾಖೆ ತೆಗೆದುಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><h2><strong>ಯಶವಂತಪುರ– ತಾಳಗುಪ್ಪ</strong></h2><p>ಜ.13 ಮತ್ತು ಜ.23ರಂದು ರಾತ್ರಿ 10.45ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಿಗ್ಗೆ 4.45ಕ್ಕೆ ತಾಳಗುಪ್ಪ ತಲುಪಲಿದೆ. </p><p>ಜ.14 ಮತ್ತು 24ರಂದು ಬೆಳಿಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.</p><p><strong>ರೈಲು ಸಂಚಾರಿಸುವ ಮಾರ್ಗ</strong></p><p>ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ವಿಶೇಷ ರೈಲುಗಳು ನಿಲುಗಡೆ ಹೊಂದಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p><h2><strong>ಬೆಂಗಳೂರು–ವಿಜಯಪುರ</strong></h2><p>ಈ ಮಾರ್ಗದಲ್ಲಿ ಪ್ರಮುಖವಾಗಿ ಸಂಕ್ರಾಂತಿ ಹಾಗೂ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಜನದಟ್ಟಣೆಯನ್ನು ನಿಯಂತ್ರಿಸಲು ಎಸ್ಎಂವಿಟಿ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ.</p><p>ಜನವರಿ 13 ಮತ್ತು 23ರಂದು ರಾತ್ರಿ 7.15ಕ್ಕೆ ಎಸ್ಎಂವಿಟಿಯಿಂದ ಹೊರಡುವ ರೈಲು ಮರುದಿನ ಬೆಳಿಗ್ಗೆ 7ಕ್ಕೆ ವಿಜಯಪುರ ತಲುಪಲಿದೆ. </p><p>ವಿಜಯಪುರದಿಂದ ಜ.18 ಮತ್ತು 26ರಂದು ಸಂಜೆ 5.30ಕ್ಕೆ ವಿಜಯಪುರದಿಂದ ಹೊರಟು ಮರುದಿನ ಬೆಳಿಗ್ಗೆ 6.30ಕ್ಕೆ ಎಸ್ಎಂವಿಟಿಗೆ ತಲುಪಲಿದೆ.</p><p><strong>ರೈಲು ಸಂಚರಿಸುವ ಮಾರ್ಗ</strong></p><p>ಬಾಣಸವಾಡಿ, ತುಮಕೂರು, ಅರಸಿಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಬಾದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>