‘ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುವ ಮೂಲಕ ಕಾಂಗ್ರೆಸ್, ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದೆ. ಆದರೆ, ಶಾಸಕ ಹರೀಶ್ ಪೂಂಜ ಅವರ ಉದ್ದೇಶ ಬೇರೇನೇ ಇದೆ. ನಾವು ಮಾತನಾಡುವ ವಿಷಯದಲ್ಲಿ ಸತ್ಯಾಂಶ ಇದ್ದು, ಪೂಂಜ ಒಪ್ಪಿಕೊಳ್ಳಲಿ. ಅದು ಬಿಟ್ಟು ಮೊಂಡು ವಾದ ಮಾಡುತ್ತಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದರು.