ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿರುವ ‘ನಿಖಿಲ್ ಗೋಬ್ಯಾಕ್’ ಅಭಿಯಾನದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ನಿಖಿಲ್ ರಾಜಕೀಯಕ್ಕೆ ಬರಬೇಕು ಎನ್ನುವವರೂ ಇರುವಂತೆ, ಬರಬಾರದೆನ್ನುವರೂ ಇರುವುದರಿಂದ ಇದಕ್ಕೆ ಹೆಚ್ಚಿನ ಮಹತ್ವ ಕೊಡಬೇಕಾಗಿಲ್ಲ. ಓಟು ಹಾಕುವವರು ಎಲ್ಲೋ ಇದ್ದರೆ, ಸಾಮಾಜಿಕ ಜಾಲತಾಣದಲ್ಲಿ ಇಂಥದನ್ನು ಹರಡುವವರು ಇನ್ನೆಲ್ಲೋ ಇರುತ್ತಾರೆ. ನಮ್ಮ ಪಕ್ಷದ ಮೇಲೆ ವಿಶ್ವಾಸ ಇರುವವರು ನಮಗೆ ಓಟು ಕೊಡುತ್ತಾರೆ’ ಎಂದರು.