<p><strong>ಬೆಂಗಳೂರು:</strong> ‘ಬಿಜೆಪಿ ನಾಯಕ ಶ್ರೀರಾಮುಲು ಅವರನ್ನು ಕಾಂಗ್ರೆಸ್ಗೆ ಕರೆತಂದರೆ ನನ್ನನ್ನು ತುಳಿದಂತೆ ಆಗುವುದಿಲ್ಲ. ಅದೆಲ್ಲ ಊಹಾಪೋಹ. ಶ್ರೀರಾಮುಲು ಅವರ ರಾಜಕೀಯ ಕಾರ್ಯಕ್ಷೇತ್ರ ಬಳ್ಳಾರಿ. ನನ್ನದು ಬೆಳಗಾವಿ. ಹೀಗಾಗಿ ನಮಗೂ ಅವರಿಗೂ ಏನು ಸಂಬಂಧ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರಶ್ನಿಸಿದರು.</p>.<p>‘ಸತೀಶ ಜಾರಕಿಹೊಳಿ ಅವರನ್ನು ಮಣಿಸಲು ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ’ ಎಂಬ ಜನಾರ್ದನ ರೆಡ್ಡಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಅವರನ್ನು ಪಕ್ಷಕ್ಕೆ ಯಾರು ಕರೆ ತರುತ್ತಿದ್ದಾರೊ ಅವರನ್ನೇ ಈ ಬಗ್ಗೆ ಕೇಳಬೇಕು. ಅಷ್ಟಕ್ಕೂ ಶ್ರೀರಾಮುಲು ಅವರೇ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದು ಹೇಳಿದ್ದಾರೆ’ ಎಂದರು.</p>.<p>‘ಶ್ರೀರಾಮುಲು ಅವರನ್ನು ಕಾಂಗ್ರೆಸ್ ಸೇರ್ಪಡೆ ಮಾಡಲು ಪ್ರಯತ್ನ ನಡೆದಿದೆ’ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಚುನಾವಣೆಗೂ ಮೊದಲು ಈ ಪ್ರಯತ್ನ ಆಗಿರಬಹುದು. ಆದರೆ, ಈಗ ಅಂತಹ ಪ್ರಯತ್ನ ಇಲ್ಲ. ಅವರು ಕಾಂಗ್ರೆಸ್ಗೆ ಬರುವುದಾದರೆ ಸ್ವಾಗತಿಸುತ್ತೇನೆ’ ಎಂದರು.</p>.<p>ನೋಟಿಸ್ಗೆ ಮಹತ್ವ ಕೊಡಬೇಕಿಲ್ಲ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮತ್ತು ಸಚಿವ ಬೈರತಿ ಸುರೇಶ್ಗೆ ನೋಟಿಸ್ ಕೊಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸತೀಶ, ‘ಇ.ಡಿಯಲ್ಲಿ ಈ ಬಗ್ಗೆ ತನಿಖೆ ನಡೆಯುತ್ತಿದೆ. ನೋಟಿಸ್ ಹೊಸತಲ್ಲ’ ಎಂದರು.</p>.<p>‘ಈ ಪ್ರಕರಣ ರಾಜಕೀಯವಾಗಿಯೂ ಇದೆ. ಹಾಗೆಂದು, ಎಲ್ಲ ಸಂದರ್ಭಗಳಲ್ಲಿಯೂ ರಾಜಕೀಯ ಎಂದು ಹೇಳಲು ಆಗುವುದಿಲ್ಲ. ನೋಟಿಸ್ಗೆ ಉತ್ತರ ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬಿಜೆಪಿ ನಾಯಕ ಶ್ರೀರಾಮುಲು ಅವರನ್ನು ಕಾಂಗ್ರೆಸ್ಗೆ ಕರೆತಂದರೆ ನನ್ನನ್ನು ತುಳಿದಂತೆ ಆಗುವುದಿಲ್ಲ. ಅದೆಲ್ಲ ಊಹಾಪೋಹ. ಶ್ರೀರಾಮುಲು ಅವರ ರಾಜಕೀಯ ಕಾರ್ಯಕ್ಷೇತ್ರ ಬಳ್ಳಾರಿ. ನನ್ನದು ಬೆಳಗಾವಿ. ಹೀಗಾಗಿ ನಮಗೂ ಅವರಿಗೂ ಏನು ಸಂಬಂಧ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಪ್ರಶ್ನಿಸಿದರು.</p>.<p>‘ಸತೀಶ ಜಾರಕಿಹೊಳಿ ಅವರನ್ನು ಮಣಿಸಲು ಶ್ರೀರಾಮುಲು ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಲಾಗುತ್ತಿದೆ’ ಎಂಬ ಜನಾರ್ದನ ರೆಡ್ಡಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಅವರನ್ನು ಪಕ್ಷಕ್ಕೆ ಯಾರು ಕರೆ ತರುತ್ತಿದ್ದಾರೊ ಅವರನ್ನೇ ಈ ಬಗ್ಗೆ ಕೇಳಬೇಕು. ಅಷ್ಟಕ್ಕೂ ಶ್ರೀರಾಮುಲು ಅವರೇ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದು ಹೇಳಿದ್ದಾರೆ’ ಎಂದರು.</p>.<p>‘ಶ್ರೀರಾಮುಲು ಅವರನ್ನು ಕಾಂಗ್ರೆಸ್ ಸೇರ್ಪಡೆ ಮಾಡಲು ಪ್ರಯತ್ನ ನಡೆದಿದೆ’ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಚುನಾವಣೆಗೂ ಮೊದಲು ಈ ಪ್ರಯತ್ನ ಆಗಿರಬಹುದು. ಆದರೆ, ಈಗ ಅಂತಹ ಪ್ರಯತ್ನ ಇಲ್ಲ. ಅವರು ಕಾಂಗ್ರೆಸ್ಗೆ ಬರುವುದಾದರೆ ಸ್ವಾಗತಿಸುತ್ತೇನೆ’ ಎಂದರು.</p>.<p>ನೋಟಿಸ್ಗೆ ಮಹತ್ವ ಕೊಡಬೇಕಿಲ್ಲ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಮತ್ತು ಸಚಿವ ಬೈರತಿ ಸುರೇಶ್ಗೆ ನೋಟಿಸ್ ಕೊಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸತೀಶ, ‘ಇ.ಡಿಯಲ್ಲಿ ಈ ಬಗ್ಗೆ ತನಿಖೆ ನಡೆಯುತ್ತಿದೆ. ನೋಟಿಸ್ ಹೊಸತಲ್ಲ’ ಎಂದರು.</p>.<p>‘ಈ ಪ್ರಕರಣ ರಾಜಕೀಯವಾಗಿಯೂ ಇದೆ. ಹಾಗೆಂದು, ಎಲ್ಲ ಸಂದರ್ಭಗಳಲ್ಲಿಯೂ ರಾಜಕೀಯ ಎಂದು ಹೇಳಲು ಆಗುವುದಿಲ್ಲ. ನೋಟಿಸ್ಗೆ ಉತ್ತರ ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>