<p><strong>ಶ್ರೀರಂಗಪಟ್ಟಣ:</strong> ತಾಲ್ಲೂಕಿನ ವಿರಿಜಾ ನಾಲೆಗೆ ರಾಸಾಯನಿಕ ಮಿಶ್ರಿತ ಕೊಳಚೆ ನೀರು ಸೇರುತ್ತಿದ್ದು, ನಾಲೆಯಲ್ಲಿ ಸಾವಿರಾರು ಮೀನುಗಳು ಮೃತಪಟ್ಟಿವೆ.</p>.<p>ತಾಲ್ಲೂಕಿನ ಕಾರೇಕುರ ಗ್ರಾಮದಿಂದ ಬೊಮ್ಮೂರು ಅಗ್ರಹಾರ ತಿರುವಿನವರೆಗೂ ಮೀನುಗಳು ನೀರಿನಲ್ಲಿ ತೇಲುತ್ತಿವೆ. ಮಳ್ಳಿ ಮೀನು, ಕೊರಮ, ಸಾಮಾನ್ಯ ಗೆಂಡೆ ಜಾತಿಯ ಮೀನುಗಳು ಸತ್ತಿದ್ದು, ಇವು ಕೊಕ್ಕರೆ, ನೀರುಕಾಗೆಗೆ ಆಹಾರವಾಗುತ್ತಿವೆ.</p>.<p>ಮೂರು ದಿನಗಳಿಂದ ಮೀನುಗಳು ನಾಲೆಯಲ್ಲಿ ತೇಲುತ್ತಿವೆ ಎಂದು ರೈತರು ಹೇಳಿದ್ದಾರೆ.</p>.<p>ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸತ್ತಿರುವುದರಿಂದ ಮೂರು ದಿನಗಳಿಂದ ನೀರು ದುರ್ವಾಸನೆ ಬೀರುತ್ತಿದೆ. ನಾಲೆಗೆ ಇಳಿದರೆ ತುರಿಕೆ ಉಂಟಾಗುತ್ತಿದೆ. ಹೀಗಾಗಿ, ಈ ನೀರನ್ನು ಜಾನುವಾರುಗಳಿಗೆ ಕುಡಿಸಲು ರೈತರು ಹಿಂದೇಟು ಹಾಕುತ್ತಿದ್ದಾರೆ.</p>.<p><strong>ಕೈಗಾರಿಕೆಗಳ ತ್ಯಾಜ್ಯ: </strong>ಮೈಸೂರಿನ ಹೆಬ್ಬಾಳ ಮತ್ತು ಬೆಳಗೊಳ ಕೈಗಾರಿಕಾ ಪ್ರದೇಶದ ರಾಸಾಯನಿಕ ತ್ಯಾಜ್ಯ ವಿರಿಜಾ ನಾಲೆಗೆ ಸೇರುತ್ತಿದೆ. ಈ ತ್ಯಾಜ್ಯದಲ್ಲಿ ಸೀಸ, ಕ್ಯಾಡ್ಮಿಯಂ ಇತರ ಅಪಾಯಕಾರಿ ರಾಸಾಯನಿಕಗಳಿದ್ದು, ಜಲಚರಗಳಿಗೆ ಮಾರಕವಾಗಿದೆ. ಕೃಷಿ ಜಮೀನಿಗೂ ಇದೇ ನೀರು ಹರಿಯುತ್ತಿದ್ದು, ಬೆಳೆಗಳಿಗೂ ಅಪಾಯವಾಗುವ ಸಾಧ್ಯತೆ ಇದೆ. ಈ ತ್ಯಾಜ್ಯವನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಪತ್ರ ಬರೆದಿದ್ದರೂ ಕ್ರಮ ವಹಿಸಿಲ್ಲ. ಹಾಗಾಗಿ ಮುಡಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ವಿರಿಜಾ ನಾಲೆಗೆ ಅನೇಕ ವರ್ಷಗಳಿಂದ ಮೈಸೂರಿನ ಕೊಳಚೆ ನೀರು ಹರಿಯುತ್ತಿದೆ. ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ‘ ಎಂದು ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಮ್ಮೇಗೌಡ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.</p>.<p>**</p>.<p>ಕೆಸರೆಯಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ದುರಸ್ತಿಯಲ್ಲಿದೆ. ಹೀಗಾಗಿ, ಸಮಸ್ಯೆ ಉಂಟಾಗಿರಬಹುದು. ಅಷ್ಟಕ್ಕೂ ಇದು ಪಾಲಿಕೆ, ಕೆಐಡಿಬಿಎ ವ್ಯಾಪ್ತಿಗೆ ಬರುತ್ತದೆ<br /><em><strong>– ಸುರೇಶ್ ಬಾಬು,ಸೂಪರಿಂಟೆಂಡಿಂಗ್ ಎಂಜಿನಿಯರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ತಾಲ್ಲೂಕಿನ ವಿರಿಜಾ ನಾಲೆಗೆ ರಾಸಾಯನಿಕ ಮಿಶ್ರಿತ ಕೊಳಚೆ ನೀರು ಸೇರುತ್ತಿದ್ದು, ನಾಲೆಯಲ್ಲಿ ಸಾವಿರಾರು ಮೀನುಗಳು ಮೃತಪಟ್ಟಿವೆ.</p>.<p>ತಾಲ್ಲೂಕಿನ ಕಾರೇಕುರ ಗ್ರಾಮದಿಂದ ಬೊಮ್ಮೂರು ಅಗ್ರಹಾರ ತಿರುವಿನವರೆಗೂ ಮೀನುಗಳು ನೀರಿನಲ್ಲಿ ತೇಲುತ್ತಿವೆ. ಮಳ್ಳಿ ಮೀನು, ಕೊರಮ, ಸಾಮಾನ್ಯ ಗೆಂಡೆ ಜಾತಿಯ ಮೀನುಗಳು ಸತ್ತಿದ್ದು, ಇವು ಕೊಕ್ಕರೆ, ನೀರುಕಾಗೆಗೆ ಆಹಾರವಾಗುತ್ತಿವೆ.</p>.<p>ಮೂರು ದಿನಗಳಿಂದ ಮೀನುಗಳು ನಾಲೆಯಲ್ಲಿ ತೇಲುತ್ತಿವೆ ಎಂದು ರೈತರು ಹೇಳಿದ್ದಾರೆ.</p>.<p>ಸಾವಿರಾರು ಸಂಖ್ಯೆಯಲ್ಲಿ ಮೀನುಗಳು ಸತ್ತಿರುವುದರಿಂದ ಮೂರು ದಿನಗಳಿಂದ ನೀರು ದುರ್ವಾಸನೆ ಬೀರುತ್ತಿದೆ. ನಾಲೆಗೆ ಇಳಿದರೆ ತುರಿಕೆ ಉಂಟಾಗುತ್ತಿದೆ. ಹೀಗಾಗಿ, ಈ ನೀರನ್ನು ಜಾನುವಾರುಗಳಿಗೆ ಕುಡಿಸಲು ರೈತರು ಹಿಂದೇಟು ಹಾಕುತ್ತಿದ್ದಾರೆ.</p>.<p><strong>ಕೈಗಾರಿಕೆಗಳ ತ್ಯಾಜ್ಯ: </strong>ಮೈಸೂರಿನ ಹೆಬ್ಬಾಳ ಮತ್ತು ಬೆಳಗೊಳ ಕೈಗಾರಿಕಾ ಪ್ರದೇಶದ ರಾಸಾಯನಿಕ ತ್ಯಾಜ್ಯ ವಿರಿಜಾ ನಾಲೆಗೆ ಸೇರುತ್ತಿದೆ. ಈ ತ್ಯಾಜ್ಯದಲ್ಲಿ ಸೀಸ, ಕ್ಯಾಡ್ಮಿಯಂ ಇತರ ಅಪಾಯಕಾರಿ ರಾಸಾಯನಿಕಗಳಿದ್ದು, ಜಲಚರಗಳಿಗೆ ಮಾರಕವಾಗಿದೆ. ಕೃಷಿ ಜಮೀನಿಗೂ ಇದೇ ನೀರು ಹರಿಯುತ್ತಿದ್ದು, ಬೆಳೆಗಳಿಗೂ ಅಪಾಯವಾಗುವ ಸಾಧ್ಯತೆ ಇದೆ. ಈ ತ್ಯಾಜ್ಯವನ್ನು ತಡೆಯಲು ಕ್ರಮ ಕೈಗೊಳ್ಳುವಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಪತ್ರ ಬರೆದಿದ್ದರೂ ಕ್ರಮ ವಹಿಸಿಲ್ಲ. ಹಾಗಾಗಿ ಮುಡಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಯೊಬ್ಬರು ತಿಳಿಸಿದರು.</p>.<p>‘ವಿರಿಜಾ ನಾಲೆಗೆ ಅನೇಕ ವರ್ಷಗಳಿಂದ ಮೈಸೂರಿನ ಕೊಳಚೆ ನೀರು ಹರಿಯುತ್ತಿದೆ. ಅದನ್ನು ನಿಯಂತ್ರಿಸಲು ಸಾಧ್ಯವಿಲ್ಲ‘ ಎಂದು ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಮ್ಮೇಗೌಡ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.</p>.<p>**</p>.<p>ಕೆಸರೆಯಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ದುರಸ್ತಿಯಲ್ಲಿದೆ. ಹೀಗಾಗಿ, ಸಮಸ್ಯೆ ಉಂಟಾಗಿರಬಹುದು. ಅಷ್ಟಕ್ಕೂ ಇದು ಪಾಲಿಕೆ, ಕೆಐಡಿಬಿಎ ವ್ಯಾಪ್ತಿಗೆ ಬರುತ್ತದೆ<br /><em><strong>– ಸುರೇಶ್ ಬಾಬು,ಸೂಪರಿಂಟೆಂಡಿಂಗ್ ಎಂಜಿನಿಯರ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>