<p><strong>ದಾವಣಗೆರೆ</strong>: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಿದ್ದವು. ಆದರೂ, ಕ್ಷೇತ್ರದ ಮತದಾರರು ಶಾಮನೂರು ಕುಟುಂಬವನ್ನು ಆಶೀರ್ವದಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಮತಗಳು ಕಾಂಗ್ರೆಸ್ ಕೈತಪ್ಪಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.</p><p>ಪುತ್ರ ಸಮರ್ಥ್ ಶಾಮನೂರು ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಮನೂರು ಶಿವಶಂಕರಪ್ಪ ಅವರು 1994ರಲ್ಲಿ 1,300 ಮತಗಳ ಅಂತರದಿಂದ ಗೆದ್ದಿದ್ದರು. 2023ರಲ್ಲಿ 48,000 ಮತಗಳ ಭಾರಿ ಅಂತರದಲ್ಲಿ ವಿಜೇತರಾಗಿದ್ದರು. 5,708 ಮತಗಳ ಅಂತರದಿಂದ ಸಮರ್ಥ್ ಶಾಮನೂರು ಗೆದ್ದಿದ್ದಾರೆ. ಗೆಲುವಿನ ಅಂತರದ ಬಗ್ಗೆ ತಲೆಕೆಡಿಸಿಕೊಂಡಿಲ್ಲ’ ಎಂದರು.</p><p>‘ಈ ಹಿಂದಿನ ಚುನಾವಣೆಗಳಲ್ಲಿಯೂ ಅನೇಕ ಮುಸ್ಲಿಂ ನಾಯಕರು ಚುನಾವಣಾ ಕಣದಲ್ಲಿದ್ದರು. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೈಯದ್ ಸೈಫುಲ್ಲಾ 26,500 ಮತ ಪಡೆದಿದ್ದರು. ಯಾರೇ ಸ್ಪರ್ಧಿಸಿದರೂ ಶಾಮನೂರು ಕುಟುಂಬದ ಮೇಲಿನ ಅಭಿಮಾನ ಕಡಿಮೆಯಾಗಿಲ್ಲ. ಶಾಮನೂರು ಶಿವಶಂಕರಪ್ಪ ಅವರ ಮೇಲೆ ಮತದಾರರು ಇಟ್ಟಿರುವ ವಿಶ್ವಾಸ ಗೆಲುವಿನ ದಡ ಸೇರಿಸಿದೆ. ಕಿರಿಯ ವಯಸ್ಸಿನ ಸಮರ್ಥ್ಗೆ ಟಿಕೆಟ್ ನೀಡಿ ಅವಕಾಶ ಕಲ್ಪಿಸಿದ ಪಕ್ಷದ ವರಿಷ್ಠರು, ಕೆಲಸ ಮಾಡಿದ ಕಾರ್ಯಕರ್ತರು ಹಾಗೂ ಮತದಾರರಿಗೆ ಋಣಿಯಾಗಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<p><strong>ಮುಸ್ಲಿಮರು ಕಾಂಗ್ರೆಸ್ ಜೊತೆಗಿದ್ದಾರೆ: ಸಂಸದೆ</strong> <strong>ಪ್ರಭಾ ಮಲ್ಲಿಕಾರ್ಜುನ್</strong></p><p>‘ಶಾಮನೂರು ಕುಟುಂಬದ ವಿರುದ್ಧ ಮಾಡಿದ ಆರೋಪಗಳಿಗೆ ಫಲಿತಾಂಶವೇ ಉತ್ತರ ನೀಡಿದೆ. ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಂಡಿದ್ದೇವೆ’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.</p><p>‘ಮತ ಎಣಿಕೆಯ ಮೊದಲ ಕೆಲ ಸುತ್ತಿನಲ್ಲಿ ಬಿಜೆಪಿ ಪ್ರಾಬಲ್ಯದ ಮತಗಟ್ಟೆಗಳಿದ್ದವು. ಮುಸ್ಲಿಂ ಬಾಹುಳ್ಯದ ಮತಗಟ್ಟೆಗಳಲ್ಲಿ ಕಾಂಗ್ರೆಸ್ಗೆ ಮತಗಳು ಬಂದಿವೆ. ಕೆಪಿಸಿಸಿ, ಎಐಸಿಸಿ ನಾಯಕರು ಹಾಗೂ ಕಾಂಗ್ರೆಸ್ ಹಿತೈಷಿಗಳು ಸಮರ್ಥ್ಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಸೇವೆಯನ್ನು ಸಮರ್ಥ್ ಮುಂದುವರಿಸಲಿದ್ದಾರೆ’ ಎಂದರು.</p>.<div><blockquote>ಕಾಂಗ್ರೆಸ್ ಕಾರ್ಯಕರ್ತರ ಪರಿಶ್ರಮದಿಂದ ಗೆಲುವು ಸಾಧ್ಯವಾಗಿದೆ. ಹೊಸ ಜವಾಬ್ದಾರಿಯೊಂದು ಹೆಗಲೇರಿದೆ. ಶಾಮನೂರು ಶಿವಶಂಕರಪ್ಪ, ಪಕ್ಷದ ನಾಯಕರಿಗೆ ಗೆಲುವು ಸಮರ್ಪಿಸುವೆ. </blockquote><span class="attribution">- ಸಮರ್ಥ್ ಶಾಮನೂರು, ವಿಜೇತ ಅಭ್ಯರ್ಥಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ</strong>: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸಾಕಷ್ಟು ಗೊಂದಲಗಳು ಉಂಟಾಗಿದ್ದವು. ಆದರೂ, ಕ್ಷೇತ್ರದ ಮತದಾರರು ಶಾಮನೂರು ಕುಟುಂಬವನ್ನು ಆಶೀರ್ವದಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ಮತಗಳು ಕಾಂಗ್ರೆಸ್ ಕೈತಪ್ಪಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.</p><p>ಪುತ್ರ ಸಮರ್ಥ್ ಶಾಮನೂರು ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಾಮನೂರು ಶಿವಶಂಕರಪ್ಪ ಅವರು 1994ರಲ್ಲಿ 1,300 ಮತಗಳ ಅಂತರದಿಂದ ಗೆದ್ದಿದ್ದರು. 2023ರಲ್ಲಿ 48,000 ಮತಗಳ ಭಾರಿ ಅಂತರದಲ್ಲಿ ವಿಜೇತರಾಗಿದ್ದರು. 5,708 ಮತಗಳ ಅಂತರದಿಂದ ಸಮರ್ಥ್ ಶಾಮನೂರು ಗೆದ್ದಿದ್ದಾರೆ. ಗೆಲುವಿನ ಅಂತರದ ಬಗ್ಗೆ ತಲೆಕೆಡಿಸಿಕೊಂಡಿಲ್ಲ’ ಎಂದರು.</p><p>‘ಈ ಹಿಂದಿನ ಚುನಾವಣೆಗಳಲ್ಲಿಯೂ ಅನೇಕ ಮುಸ್ಲಿಂ ನಾಯಕರು ಚುನಾವಣಾ ಕಣದಲ್ಲಿದ್ದರು. ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸೈಯದ್ ಸೈಫುಲ್ಲಾ 26,500 ಮತ ಪಡೆದಿದ್ದರು. ಯಾರೇ ಸ್ಪರ್ಧಿಸಿದರೂ ಶಾಮನೂರು ಕುಟುಂಬದ ಮೇಲಿನ ಅಭಿಮಾನ ಕಡಿಮೆಯಾಗಿಲ್ಲ. ಶಾಮನೂರು ಶಿವಶಂಕರಪ್ಪ ಅವರ ಮೇಲೆ ಮತದಾರರು ಇಟ್ಟಿರುವ ವಿಶ್ವಾಸ ಗೆಲುವಿನ ದಡ ಸೇರಿಸಿದೆ. ಕಿರಿಯ ವಯಸ್ಸಿನ ಸಮರ್ಥ್ಗೆ ಟಿಕೆಟ್ ನೀಡಿ ಅವಕಾಶ ಕಲ್ಪಿಸಿದ ಪಕ್ಷದ ವರಿಷ್ಠರು, ಕೆಲಸ ಮಾಡಿದ ಕಾರ್ಯಕರ್ತರು ಹಾಗೂ ಮತದಾರರಿಗೆ ಋಣಿಯಾಗಿದ್ದೇನೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<p><strong>ಮುಸ್ಲಿಮರು ಕಾಂಗ್ರೆಸ್ ಜೊತೆಗಿದ್ದಾರೆ: ಸಂಸದೆ</strong> <strong>ಪ್ರಭಾ ಮಲ್ಲಿಕಾರ್ಜುನ್</strong></p><p>‘ಶಾಮನೂರು ಕುಟುಂಬದ ವಿರುದ್ಧ ಮಾಡಿದ ಆರೋಪಗಳಿಗೆ ಫಲಿತಾಂಶವೇ ಉತ್ತರ ನೀಡಿದೆ. ಕಾಂಗ್ರೆಸ್ ಭದ್ರಕೋಟೆಯನ್ನು ಉಳಿಸಿಕೊಂಡಿದ್ದೇವೆ’ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅಭಿಪ್ರಾಯಪಟ್ಟರು.</p><p>‘ಮತ ಎಣಿಕೆಯ ಮೊದಲ ಕೆಲ ಸುತ್ತಿನಲ್ಲಿ ಬಿಜೆಪಿ ಪ್ರಾಬಲ್ಯದ ಮತಗಟ್ಟೆಗಳಿದ್ದವು. ಮುಸ್ಲಿಂ ಬಾಹುಳ್ಯದ ಮತಗಟ್ಟೆಗಳಲ್ಲಿ ಕಾಂಗ್ರೆಸ್ಗೆ ಮತಗಳು ಬಂದಿವೆ. ಕೆಪಿಸಿಸಿ, ಎಐಸಿಸಿ ನಾಯಕರು ಹಾಗೂ ಕಾಂಗ್ರೆಸ್ ಹಿತೈಷಿಗಳು ಸಮರ್ಥ್ಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಶಾಮನೂರು ಶಿವಶಂಕರಪ್ಪ ಅವರ ಸೇವೆಯನ್ನು ಸಮರ್ಥ್ ಮುಂದುವರಿಸಲಿದ್ದಾರೆ’ ಎಂದರು.</p>.<div><blockquote>ಕಾಂಗ್ರೆಸ್ ಕಾರ್ಯಕರ್ತರ ಪರಿಶ್ರಮದಿಂದ ಗೆಲುವು ಸಾಧ್ಯವಾಗಿದೆ. ಹೊಸ ಜವಾಬ್ದಾರಿಯೊಂದು ಹೆಗಲೇರಿದೆ. ಶಾಮನೂರು ಶಿವಶಂಕರಪ್ಪ, ಪಕ್ಷದ ನಾಯಕರಿಗೆ ಗೆಲುವು ಸಮರ್ಪಿಸುವೆ. </blockquote><span class="attribution">- ಸಮರ್ಥ್ ಶಾಮನೂರು, ವಿಜೇತ ಅಭ್ಯರ್ಥಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>