ಕೋವಿಡ್ಗೆ ಸಂಬಂಧಪಟ್ಟಂತೆ ಭಾನುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷಗಳ ಸಭೆ ಕರೆಯಲಾಗಿದೆ. ಸಭೆಗೆ ಎಲ್ಲ ವಿರೋಧ ಪಕ್ಷಗಳು ಭಾಗವಹಿಸಿ ಸಲಹೆ ಮತ್ತು ಸೂಚನೆ ಕೊಡಬೇಕು. ಸರ್ವ ಪಕ್ಷಗಳ ಸಭೆ ಬರೋದಿಲ್ಲ ಎಂಬ ಕಾಂಗ್ರೆಸ್ ಪಕ್ಷದ ನಿರ್ಧಾರ ಸರಿಯಾದ ಕ್ರಮ ಅಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಪರಸ್ಪರ ವಿರೋಧಿಗಳು ನಿಜ. ಆದರೆ, ಇಬ್ಬರಿಗೂ ಕೊರೊನಾ ವಿರೋಧಿ ಆಗಿದೆ. ಹಾಗಾಗಿ, ರಾಜಕೀಯ ಪಕ್ಷಗಳು, ಧಾರ್ಮಿಕ ಮುಖಂಡರು ಸಾರ್ವಜನಿಕರು ಒಟ್ಟಾಗಿ ಸೇರಿಕೊಂಡು ಕೊರೊನಾ ಹಿಮ್ಮೆಟ್ಟಿಸುವ ಕಾರ್ಯ ಮಾಡಬೇಕಾಗಿದೆ. ವಿಪತ್ತಿನ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸರಿಯಾದ ಕ್ರಮ ಅಲ್ಲ ಎಂದು ಸಚಿವರು ಹೇಳಿದರು.