<p><strong>ಬೆಂಗಳೂರು</strong>: ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಶಾಲಾ ಶಿಕ್ಷಣ ಇಲಾಖೆ, ಎಸ್ಎಸ್ಎಲ್ಸಿ ಎರಡನೇ ಪೂರ್ವಸಿದ್ಧತಾ ಪರೀಕ್ಷೆಯ ಸಮಯವನ್ನು ಬದಲಾವಣೆ ಮಾಡಿದೆ.</p>.<p>ಇದೇ ಜ.27ರಿಂದ ಫೆ.2ರವರೆಗೆ ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳು ಬೆಳಿಗ್ಗೆ 10ರ ಬದಲಿಗೆ 11ರಿಂದ ಆರಂಭವಾಗಲಿವೆ. ಎಲ್ಲ ವಿದ್ಯಾರ್ಥಿಗಳು ಅಂದು ಬೆಳಿಗ್ಗೆ 9ಕ್ಕೆ ತರಗತಿಗಳಿಗೆ ಹಾಜರಾಗುವುದನ್ನು ಕಡ್ಡಾಯ ಮಾಡಲಾಗಿದೆ. 9ರಿಂದ 10.30ರವರೆಗೆ ತರಗತಿ ನಡೆಸಲಾಗುತ್ತದೆ.</p>.<p>ಆಯಾ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಆಯಾ ದಿನ ಬೆಳಿಗ್ಗೆ 9.30ಕ್ಕೆ ಶಾಲಾ ಲಾಗಿನ್ನಿಂದ ಡೌನ್ಲೋಡ್ ಮಾಡಬೇಕು. 10 ಗಂಟೆಯ ಒಳಗೆ ಮುದ್ರಣ ಮಾಡಿಕೊಳ್ಳಬೇಕು. 10.30ರ ಒಳಗೆ ಸಿದ್ಧವಾಗಬೇಕು. 10.50ಕ್ಕೆ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.</p>.<p>ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆಯಾ ಶಾಲೆಯ ಮುಖ್ಯ ಶಿಕ್ಷಕರು, ನೋಡಲ್ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಜಿಲ್ಲಾ ಉಪ ನಿರ್ದೇಶಕರನ್ನು ಹೊಣೆ ಮಾಡಲಾಗುವುದು. ಪ್ರತಿ ಪ್ರಕರಣಕ್ಕೂ ಪ್ರತ್ಯೇಕ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಶಾಲಾ ಶಿಕ್ಷಣ ಇಲಾಖೆ, ಎಸ್ಎಸ್ಎಲ್ಸಿ ಎರಡನೇ ಪೂರ್ವಸಿದ್ಧತಾ ಪರೀಕ್ಷೆಯ ಸಮಯವನ್ನು ಬದಲಾವಣೆ ಮಾಡಿದೆ.</p>.<p>ಇದೇ ಜ.27ರಿಂದ ಫೆ.2ರವರೆಗೆ ಎರಡನೇ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗಳು ಬೆಳಿಗ್ಗೆ 10ರ ಬದಲಿಗೆ 11ರಿಂದ ಆರಂಭವಾಗಲಿವೆ. ಎಲ್ಲ ವಿದ್ಯಾರ್ಥಿಗಳು ಅಂದು ಬೆಳಿಗ್ಗೆ 9ಕ್ಕೆ ತರಗತಿಗಳಿಗೆ ಹಾಜರಾಗುವುದನ್ನು ಕಡ್ಡಾಯ ಮಾಡಲಾಗಿದೆ. 9ರಿಂದ 10.30ರವರೆಗೆ ತರಗತಿ ನಡೆಸಲಾಗುತ್ತದೆ.</p>.<p>ಆಯಾ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಆಯಾ ದಿನ ಬೆಳಿಗ್ಗೆ 9.30ಕ್ಕೆ ಶಾಲಾ ಲಾಗಿನ್ನಿಂದ ಡೌನ್ಲೋಡ್ ಮಾಡಬೇಕು. 10 ಗಂಟೆಯ ಒಳಗೆ ಮುದ್ರಣ ಮಾಡಿಕೊಳ್ಳಬೇಕು. 10.30ರ ಒಳಗೆ ಸಿದ್ಧವಾಗಬೇಕು. 10.50ಕ್ಕೆ ಪರೀಕ್ಷಾ ಕೊಠಡಿಗಳಿಗೆ ಕಳುಹಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.</p>.<p>ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆಯಾ ಶಾಲೆಯ ಮುಖ್ಯ ಶಿಕ್ಷಕರು, ನೋಡಲ್ ಶಿಕ್ಷಕರು, ಕ್ಷೇತ್ರ ಶಿಕ್ಷಣಾಧಿಕಾರಿ, ಜಿಲ್ಲಾ ಉಪ ನಿರ್ದೇಶಕರನ್ನು ಹೊಣೆ ಮಾಡಲಾಗುವುದು. ಪ್ರತಿ ಪ್ರಕರಣಕ್ಕೂ ಪ್ರತ್ಯೇಕ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>