‘ಪ್ರಕರಣ ಸಂಬಂಧ ಬಂಗಾರಪೇಟೆಯ ಶಾಲೆಯೊಂದರಲ್ಲಿ ಎಸ್ಎಸ್ಎಲ್ಸಿ ಕಲಿಯುತ್ತಿರುವ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿದೆ. ಆದರೆ, ಅವರಿಗೆ ಪ್ರಶ್ನೆಪತ್ರಿಕೆ ಹೇಗೆ ದೊರೆಯಿತು ಎಂಬ ಬಗ್ಗೆ ಗೊತ್ತಾಗಿಲ್ಲ. ವಿಚಾರಣೆಗೆ ಹಾಜರಾದವರು ಕೂಡಾ ತಮಗೆ ಸಾಮಾಜಿಕ ಜಾಲತಾಣದಲ್ಲಿಯೇ ಸಿಕ್ಕಿತು ಎಂದು ತಿಳಿಸಿದ್ದಾರೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.