<p><strong>ದೊಡ್ಡಬಳ್ಳಾಪುರ:</strong> ದೊಡ್ಡಬೆಳವಂಗಲದಲ್ಲಿ ಶುಕ್ರವಾರ ಕ್ರಿಕೆಟ್ ಟೂರ್ನಿ ವೇಳೆ ಚಾಕು ಇರಿದು ಯುವಕರಿಬ್ಬರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಕುಂಟೆ ಗ್ರಾಮದ ಕಾಂಗ್ರೆಸ್ ಮುಖಂಡನ ಪುತ್ರ ವಿನಯ್ ಹಾಗೂ ಆತನ ನಾಲ್ವರು ಸ್ನೇಹಿತರ ವಿರುದ್ಧ ಪ್ರಕರಣ ದಾಖಲಾಗಿದೆ. </p>.<p>ಚಾಕು ಇರಿತದಿಂದ ಮೃತಪಟ್ಟ ಬಿ.ಇ ಪದವೀಧರ ಭರತ್ಕುಮಾರ್ ಅವರ ತಂದೆ ಶಿವಪ್ರಕಾಶ್ ನೀಡಿದ ದೂರಿನ ಮೇರೆಗೆ ಹುಲಿಕುಂಟೆ ನಿವಾಸಿಗಳಾದ ವಿನಯ್, ಅನಿಲ್, ತ್ರೀಮೂರ್ತಿ, ಕೋರಿ, ದೀಪು ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. </p>.<p>ಐವರೂ ಆರೋಪಿಗಳು ತಲೆಮರೆಸಿಕೊಂಡಿದ್ದು, ಇದುವರೆಗೂ ಅವರ ಸುಳಿವು ದೊರೆತಿಲ್ಲ. ಆರೋಪಿಗಳಿಗಾಗಿ ಪೊಲೀಸರ ತಂಡಗಳು ಹುಡುಕಾಟ ನಡೆಸಿವೆ. ಶೀಘ್ರ ಆರೋಪಿಗಳನ್ನು ಬಂಧಿಸದಿದ್ದರೆ ಪೊಲೀಸ್ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. </p>.<p class="Subhead">ದೊಡ್ಡಬೆಳವಂಗಲ ಬಂದ್: ‘ಆರೋಪಿಗಳನ್ನು ಬಂಧಿಸುವವರೆಗೂ ಮೃತ ಯುವಕರ ಅಂತ್ಯಕ್ರಿಯೆ ನಡೆಸುವುದಿಲ್ಲ’ ಎಂದು ಗ್ರಾಮಸ್ಥರು ಶನಿವಾರ ದಾಬಸ್ಪೇಟೆ- ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ:</strong> ದೊಡ್ಡಬೆಳವಂಗಲದಲ್ಲಿ ಶುಕ್ರವಾರ ಕ್ರಿಕೆಟ್ ಟೂರ್ನಿ ವೇಳೆ ಚಾಕು ಇರಿದು ಯುವಕರಿಬ್ಬರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಲಿಕುಂಟೆ ಗ್ರಾಮದ ಕಾಂಗ್ರೆಸ್ ಮುಖಂಡನ ಪುತ್ರ ವಿನಯ್ ಹಾಗೂ ಆತನ ನಾಲ್ವರು ಸ್ನೇಹಿತರ ವಿರುದ್ಧ ಪ್ರಕರಣ ದಾಖಲಾಗಿದೆ. </p>.<p>ಚಾಕು ಇರಿತದಿಂದ ಮೃತಪಟ್ಟ ಬಿ.ಇ ಪದವೀಧರ ಭರತ್ಕುಮಾರ್ ಅವರ ತಂದೆ ಶಿವಪ್ರಕಾಶ್ ನೀಡಿದ ದೂರಿನ ಮೇರೆಗೆ ಹುಲಿಕುಂಟೆ ನಿವಾಸಿಗಳಾದ ವಿನಯ್, ಅನಿಲ್, ತ್ರೀಮೂರ್ತಿ, ಕೋರಿ, ದೀಪು ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. </p>.<p>ಐವರೂ ಆರೋಪಿಗಳು ತಲೆಮರೆಸಿಕೊಂಡಿದ್ದು, ಇದುವರೆಗೂ ಅವರ ಸುಳಿವು ದೊರೆತಿಲ್ಲ. ಆರೋಪಿಗಳಿಗಾಗಿ ಪೊಲೀಸರ ತಂಡಗಳು ಹುಡುಕಾಟ ನಡೆಸಿವೆ. ಶೀಘ್ರ ಆರೋಪಿಗಳನ್ನು ಬಂಧಿಸದಿದ್ದರೆ ಪೊಲೀಸ್ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. </p>.<p class="Subhead">ದೊಡ್ಡಬೆಳವಂಗಲ ಬಂದ್: ‘ಆರೋಪಿಗಳನ್ನು ಬಂಧಿಸುವವರೆಗೂ ಮೃತ ಯುವಕರ ಅಂತ್ಯಕ್ರಿಯೆ ನಡೆಸುವುದಿಲ್ಲ’ ಎಂದು ಗ್ರಾಮಸ್ಥರು ಶನಿವಾರ ದಾಬಸ್ಪೇಟೆ- ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>