<p><strong>ಬೆಂಗಳೂರು:</strong> ಹಳ್ಳಿಗಳು ಮತ್ತು ಕೊಳೆಗೇರಿಗಳಲ್ಲಿ ಕೋವಿಡ್ ಪೀಡಿತರಿಗೆ ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ (ಹೋಮ್ ಐಸೋಲೇಷನ್) ಅವಕಾಶ ಕಲ್ಪಿಸದೇ ಇರಲು ಸರ್ಕಾರ ನಿರ್ಧರಿಸಿದೆ. ಅಂಥ ಪ್ರದೇಶಗಳ ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ.</p>.<p>ರಾಜ್ಯ ಕೋವಿಡ್ ಕಾರ್ಯಪಡೆಯ ಸಭೆಯ ಬಳಿಕ ಅದರ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ವಿಷಯ ತಿಳಿಸಿದರು. ಹಳ್ಳಿಗಳಲ್ಲಿ ಮತ್ತು ಕೊಳೆಗೇರಿಗಳಲ್ಲಿ ಸೋಂಕು ಹರಡದಂತೆ ನೋಡಿಕೊಳ್ಳಲು ಹಾಗೂ ಗುಣಮಟ್ಟದ ಚಿಕಿತ್ಸೆ, ಆಹಾರ, ಔಷಧಿ ನೀಡಲು ಇದರಿಂದ ಸುಲಭವಾಗಲಿದೆ’ ಎಂದರು.</p>.<p>‘ಗ್ರಾಮೀಣ ಭಾಗ ಹಾಗೂ ಕೊಳೆಗೇರಿಗಳಿಗೆ ಆರೋಗ್ಯ ಸಿಬ್ಬಂದಿ ತೆರಳಿ ಪರೀಕ್ಷೆ ಮಾಡಬೇಕು. ಪ್ರತಿ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುತ್ತಿದೆ. ಜಿಲ್ಲಾಧಿಕಾರಿಗಳಿಗೆ ಈ ಹೊಣೆ ನೀಡಲಾಗಿದೆ’ ಎಂದರು.</p>.<p class="Subhead">ಶಾಲೆ, ಮೈದಾನದಲ್ಲಿ ಲಸಿಕೆ: ಆಸ್ಪತ್ರೆಯಲ್ಲಿ ಲಸಿಕೆ ನೀಡುವ ಬದಲು ಶಾಲಾ ಕಟ್ಟಡ, ಮೈದಾನ, ಕ್ರೀಡಾಂಗಣಗಳಲ್ಲಿ ವ್ಯವಸ್ಥೆ ಮಾಡಲಾಗುವುದು. ಸೋಂಕು ಹರಡುವಿಕೆ ತಪ್ಪಿಸಲು ಈ ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದರು.</p>.<p>ಮೊದಲ ಡೋಸ್ ಕೋವ್ಯಾಕ್ಸಿನ್ ನೀಡಲಾಗದು. 2ನೇ ಡೋಸ್ ಮಾತ್ರ ಕೋವ್ಯಾಕ್ಸಿನ್ ನೀಡಲಾಗುವುದು. ಮೊದಲ ಡೋಸ್ ಪಡೆದು 6 ವಾರದ ನಂತರ 2ನೇ ಡೋಸ್ ಪಡೆಯಲು ಅರ್ಹರು. 45 ದಾಟಿದವರಿಗೆ ಮೊದಲನೇ ಡೋಸ್ ಕೋವಿಶೀಲ್ಡ್ ನೀಡಲಾಗುವುದು, ಮೊದಲ ಡೋಸ್ ಪಡೆದು 12 ವಾರ ಆದವರಿಗಷ್ಟೆ ಎರಡನೇ ಡೋಸ್ ನೀಡಲಾಗುವುದು’ ಎಂದರು.</p>.<p>ಅಂಚೆ ಇಲಾಖೆ, ಕೃಷಿ ಇಲಾಖೆ, ಡೆಲಿವರಿ ಬಾಯ್ಸ್, ಬ್ಯಾಂಕ್ ಸಿಬ್ಬಂದಿ, ಇಂಟರ್ನೆಟ್ ಪ್ರೊವೈಡರ್ಸ್ ಹೀಗೆ ಅಗತ್ಯ ವಲಯಗಳಲ್ಲಿ ಇರುವವರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾಗುವುದು. ಲಸಿಕೆ ದಾಸ್ತಾನು ನೋಡಿಕೊಂಡು 18-44 ವರ್ಷದವರಿಗೆ ಲಸಿಕೆ ಕೊಡಲಾಗುವುದು. ಇದಕ್ಕಾಗಿ ಪ್ರತ್ಯೇಕ ಆ್ಯಪ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಅದನ್ನು ಕೋವಿನ್ ಪೋರ್ಟಲ್ಗೆ ಜೋಡಣೆ<br />ಮಾಡಿಸಿದ ಬಳಿಕ ಲಸಿಕೆ ಕೊಡುವುದನ್ನು ಆರಂಭಿಸಲಾಗುವುದು’ ಎಂದರು.</p>.<p class="Subhead"><strong>ಟೆಂಡರ್ ಅಂತಿಮ:</strong> ‘2 ಕೋಟಿ ಡೋಸ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್ ಅಂತಿಮಗೊಳಿಸಲಾಗಿದೆ. ತಲಾ 50 ಲಕ್ಷ ಡೋಸ್ನಂತೆ ನಾಲ್ಕು ಕಂಪನಿಗಳಿಂದ ಖರೀದಿಸಲಾಗುವುದು ಎಂದರು.</p>.<p>ಲಸಿಕೆ ಖರೀದಿಗಾಗಿ ₹ 843 ಕೋಟಿ ಬೇಕಾಗಲಿದ್ದು, ಕಾರ್ಯಪಡೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.</p>.<p><strong>ಪ್ರತಿ ವಾರ 400 ಜನರಿಗೆ ಶಿಲೀಂಧ್ರ ಸೋಂಕು: </strong>ರಾಜ್ಯದಲ್ಲಿ ಪ್ರತಿವಾರ ಸುಮಾರು 400 ಜನರಲ್ಲಿ ಶಿಲೀಂಧ್ರ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಾಂತ್ರಿಕ ತಜ್ಞರ ಸಮಿತಿ ಅಂದಾಜಿಸಿದೆ.</p>.<p>ಈ ಕುರಿತು ವಿವರ ನೀಡಿದ ಕಾರ್ಯಪಡೆ ಅಧ್ಯಕ್ಷ ಅಶ್ವತ್ಥನಾರಾಯಣ ಅವರು, ‘ಕೋವಿಡ್ನಿಂದ ಗುಣಮುಖರಾದವರಲ್ಲಿ, ಮುಖ್ಯವಾಗಿ ಮಧುಮೇಹಿಗಳಲ್ಲಿ ಈ ಶಿಲೀಂಧ್ರ ಸೋಂಕು (ಬ್ಲ್ಯಾಕ್ ಫಂಗಸ್) ಕಾಣಿಸಿಕೊಳ್ಳುತ್ತಿದೆ. ಈ ರೋಗಿಗಳಿಗೆ ಚಿಕಿತ್ಸೆ ನೀಡಲು ವಾರಕ್ಕೆ ‘ಲಿಪೋಸೋಮಲ್ ಆಂಫೊಟೆರಿಸಿನ್ ಬಿ ಔಷಧಿಯ 20 ಸಾವಿರ ವೈಲ್ಸ್ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ’ ಎಂದರು.</p>.<p>ರೋಗಿಗಳ ಸಂಖ್ಯೆ ದಿಢೀರ್ ಹೆಚ್ಚಳವಾಗಿದ್ದರಿಂದಾಗಿ ಔಷಧಕ್ಕೂ ಬೇಡಿಕೆ ಹೆಚ್ಚಾಗಿದೆ. ಇದರಿಂದಾಗಿ ಔಷಧ ಕೊರತೆ ಉಂಟಾಗಿದೆ ಎಂದೂ ಹೇಳಿದರು.</p>.<p>*<br />ಆಮ್ಲಜನಕ ಬಳಕೆ, ತಯಾರಿಕೆ, ಘಟಕಗಳ ಸ್ಥಾಪನೆ, ಮೂಲಸೌಕರ್ಯ ಸ್ಥಾಪನೆ, ನಿರ್ವಹಣೆ ಅಂಶಗಳ ಬಗ್ಗೆ 3-4 ದಿನಗಳಲ್ಲಿ ನೂತನ ಆಮ್ಲಜನಕ ನೀತಿ ರೂಪಿಸಲಾಗುವುದು.<br /><em><strong>-ಡಾ. ಸಿ.ಎನ್. ಅಶ್ವತ್ಥನಾರಾಯಣ, ರಾಜ್ಯ ಕೋವಿಡ್ ಕಾರ್ಯಪಡೆಯ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹಳ್ಳಿಗಳು ಮತ್ತು ಕೊಳೆಗೇರಿಗಳಲ್ಲಿ ಕೋವಿಡ್ ಪೀಡಿತರಿಗೆ ಮನೆಯಲ್ಲೇ ಪ್ರತ್ಯೇಕ ವಾಸಕ್ಕೆ (ಹೋಮ್ ಐಸೋಲೇಷನ್) ಅವಕಾಶ ಕಲ್ಪಿಸದೇ ಇರಲು ಸರ್ಕಾರ ನಿರ್ಧರಿಸಿದೆ. ಅಂಥ ಪ್ರದೇಶಗಳ ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಗಳಿಗೆ ಸ್ಥಳಾಂತರಿಸಲು ತೀರ್ಮಾನಿಸಲಾಗಿದೆ.</p>.<p>ರಾಜ್ಯ ಕೋವಿಡ್ ಕಾರ್ಯಪಡೆಯ ಸಭೆಯ ಬಳಿಕ ಅದರ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ವಿಷಯ ತಿಳಿಸಿದರು. ಹಳ್ಳಿಗಳಲ್ಲಿ ಮತ್ತು ಕೊಳೆಗೇರಿಗಳಲ್ಲಿ ಸೋಂಕು ಹರಡದಂತೆ ನೋಡಿಕೊಳ್ಳಲು ಹಾಗೂ ಗುಣಮಟ್ಟದ ಚಿಕಿತ್ಸೆ, ಆಹಾರ, ಔಷಧಿ ನೀಡಲು ಇದರಿಂದ ಸುಲಭವಾಗಲಿದೆ’ ಎಂದರು.</p>.<p>‘ಗ್ರಾಮೀಣ ಭಾಗ ಹಾಗೂ ಕೊಳೆಗೇರಿಗಳಿಗೆ ಆರೋಗ್ಯ ಸಿಬ್ಬಂದಿ ತೆರಳಿ ಪರೀಕ್ಷೆ ಮಾಡಬೇಕು. ಪ್ರತಿ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸುತ್ತಿದೆ. ಜಿಲ್ಲಾಧಿಕಾರಿಗಳಿಗೆ ಈ ಹೊಣೆ ನೀಡಲಾಗಿದೆ’ ಎಂದರು.</p>.<p class="Subhead">ಶಾಲೆ, ಮೈದಾನದಲ್ಲಿ ಲಸಿಕೆ: ಆಸ್ಪತ್ರೆಯಲ್ಲಿ ಲಸಿಕೆ ನೀಡುವ ಬದಲು ಶಾಲಾ ಕಟ್ಟಡ, ಮೈದಾನ, ಕ್ರೀಡಾಂಗಣಗಳಲ್ಲಿ ವ್ಯವಸ್ಥೆ ಮಾಡಲಾಗುವುದು. ಸೋಂಕು ಹರಡುವಿಕೆ ತಪ್ಪಿಸಲು ಈ ಚಿಂತನೆ ನಡೆಸಲಾಗಿದೆ ಎಂದು ಅವರು ಹೇಳಿದರು.</p>.<p>ಮೊದಲ ಡೋಸ್ ಕೋವ್ಯಾಕ್ಸಿನ್ ನೀಡಲಾಗದು. 2ನೇ ಡೋಸ್ ಮಾತ್ರ ಕೋವ್ಯಾಕ್ಸಿನ್ ನೀಡಲಾಗುವುದು. ಮೊದಲ ಡೋಸ್ ಪಡೆದು 6 ವಾರದ ನಂತರ 2ನೇ ಡೋಸ್ ಪಡೆಯಲು ಅರ್ಹರು. 45 ದಾಟಿದವರಿಗೆ ಮೊದಲನೇ ಡೋಸ್ ಕೋವಿಶೀಲ್ಡ್ ನೀಡಲಾಗುವುದು, ಮೊದಲ ಡೋಸ್ ಪಡೆದು 12 ವಾರ ಆದವರಿಗಷ್ಟೆ ಎರಡನೇ ಡೋಸ್ ನೀಡಲಾಗುವುದು’ ಎಂದರು.</p>.<p>ಅಂಚೆ ಇಲಾಖೆ, ಕೃಷಿ ಇಲಾಖೆ, ಡೆಲಿವರಿ ಬಾಯ್ಸ್, ಬ್ಯಾಂಕ್ ಸಿಬ್ಬಂದಿ, ಇಂಟರ್ನೆಟ್ ಪ್ರೊವೈಡರ್ಸ್ ಹೀಗೆ ಅಗತ್ಯ ವಲಯಗಳಲ್ಲಿ ಇರುವವರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾಗುವುದು. ಲಸಿಕೆ ದಾಸ್ತಾನು ನೋಡಿಕೊಂಡು 18-44 ವರ್ಷದವರಿಗೆ ಲಸಿಕೆ ಕೊಡಲಾಗುವುದು. ಇದಕ್ಕಾಗಿ ಪ್ರತ್ಯೇಕ ಆ್ಯಪ್ ಅಭಿವೃದ್ಧಿಪಡಿಸಲಾಗುತ್ತಿದ್ದು, ಅದನ್ನು ಕೋವಿನ್ ಪೋರ್ಟಲ್ಗೆ ಜೋಡಣೆ<br />ಮಾಡಿಸಿದ ಬಳಿಕ ಲಸಿಕೆ ಕೊಡುವುದನ್ನು ಆರಂಭಿಸಲಾಗುವುದು’ ಎಂದರು.</p>.<p class="Subhead"><strong>ಟೆಂಡರ್ ಅಂತಿಮ:</strong> ‘2 ಕೋಟಿ ಡೋಸ್ ಲಸಿಕೆ ಖರೀದಿಗೆ ಜಾಗತಿಕ ಟೆಂಡರ್ ಅಂತಿಮಗೊಳಿಸಲಾಗಿದೆ. ತಲಾ 50 ಲಕ್ಷ ಡೋಸ್ನಂತೆ ನಾಲ್ಕು ಕಂಪನಿಗಳಿಂದ ಖರೀದಿಸಲಾಗುವುದು ಎಂದರು.</p>.<p>ಲಸಿಕೆ ಖರೀದಿಗಾಗಿ ₹ 843 ಕೋಟಿ ಬೇಕಾಗಲಿದ್ದು, ಕಾರ್ಯಪಡೆ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.</p>.<p><strong>ಪ್ರತಿ ವಾರ 400 ಜನರಿಗೆ ಶಿಲೀಂಧ್ರ ಸೋಂಕು: </strong>ರಾಜ್ಯದಲ್ಲಿ ಪ್ರತಿವಾರ ಸುಮಾರು 400 ಜನರಲ್ಲಿ ಶಿಲೀಂಧ್ರ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಾಂತ್ರಿಕ ತಜ್ಞರ ಸಮಿತಿ ಅಂದಾಜಿಸಿದೆ.</p>.<p>ಈ ಕುರಿತು ವಿವರ ನೀಡಿದ ಕಾರ್ಯಪಡೆ ಅಧ್ಯಕ್ಷ ಅಶ್ವತ್ಥನಾರಾಯಣ ಅವರು, ‘ಕೋವಿಡ್ನಿಂದ ಗುಣಮುಖರಾದವರಲ್ಲಿ, ಮುಖ್ಯವಾಗಿ ಮಧುಮೇಹಿಗಳಲ್ಲಿ ಈ ಶಿಲೀಂಧ್ರ ಸೋಂಕು (ಬ್ಲ್ಯಾಕ್ ಫಂಗಸ್) ಕಾಣಿಸಿಕೊಳ್ಳುತ್ತಿದೆ. ಈ ರೋಗಿಗಳಿಗೆ ಚಿಕಿತ್ಸೆ ನೀಡಲು ವಾರಕ್ಕೆ ‘ಲಿಪೋಸೋಮಲ್ ಆಂಫೊಟೆರಿಸಿನ್ ಬಿ ಔಷಧಿಯ 20 ಸಾವಿರ ವೈಲ್ಸ್ ಪೂರೈಸುವಂತೆ ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದೆ’ ಎಂದರು.</p>.<p>ರೋಗಿಗಳ ಸಂಖ್ಯೆ ದಿಢೀರ್ ಹೆಚ್ಚಳವಾಗಿದ್ದರಿಂದಾಗಿ ಔಷಧಕ್ಕೂ ಬೇಡಿಕೆ ಹೆಚ್ಚಾಗಿದೆ. ಇದರಿಂದಾಗಿ ಔಷಧ ಕೊರತೆ ಉಂಟಾಗಿದೆ ಎಂದೂ ಹೇಳಿದರು.</p>.<p>*<br />ಆಮ್ಲಜನಕ ಬಳಕೆ, ತಯಾರಿಕೆ, ಘಟಕಗಳ ಸ್ಥಾಪನೆ, ಮೂಲಸೌಕರ್ಯ ಸ್ಥಾಪನೆ, ನಿರ್ವಹಣೆ ಅಂಶಗಳ ಬಗ್ಗೆ 3-4 ದಿನಗಳಲ್ಲಿ ನೂತನ ಆಮ್ಲಜನಕ ನೀತಿ ರೂಪಿಸಲಾಗುವುದು.<br /><em><strong>-ಡಾ. ಸಿ.ಎನ್. ಅಶ್ವತ್ಥನಾರಾಯಣ, ರಾಜ್ಯ ಕೋವಿಡ್ ಕಾರ್ಯಪಡೆಯ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>