ಅರಣ್ಯದ ಅಂಚಿನ ಗ್ರಾಮಗಳಲ್ಲಿ ಮತ್ತು ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಮನಸೋಇಚ್ಛೆ ಪ್ಲಾಸ್ಟಿಕ್, ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಉಳಿದ ಆಹಾರ ಪದಾರ್ಥಗಳನ್ನು ಚಾರಣಿಗರು ಎಸೆಯುತ್ತಿದ್ದಾರೆ. ಇದರಿಂದ ವನ್ಯಜೀವಿಗಳಿಗೂ ಅಪಾಯ ಉಂಟಾಗುತ್ತಿದೆ. ಅಪಾರ ಸಂಖ್ಯೆಯ ಜನರನ್ನು ನಿಯಂತ್ರಿಸುವುದು ಮತ್ತು ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ಸವಾಲಾಗಿದೆ ಎಂದಿದ್ದಾರೆ.