<p><strong>ಬೆಂಗಳೂರು:</strong> ಹುಬ್ಬಳ್ಳಿ ಮತ್ತು ಧಾರವಾಡದ ಮಧ್ಯೆ ‘ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ (ಎಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್: ಇ–ಆರ್ಟಿ)’ ವ್ಯವಸ್ಥೆಯ ಪ್ರಾಯೋಗಿಕ ಸಂಚಾರ ಸಂಬಂಧ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಹಿ ಹಾಕಿದೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಎಚ್ಇಎಸ್ಎಸ್ಎಜಿ, ಎಚ್ಇಎಸ್ಎಸ್ ಇಂಡಿಯಾ ಮತ್ತು ಎಸ್ಎಸ್ಜಿ ಎಜಿ ಸಂಸ್ಥೆಗಳು ‘ಇ–ಆರ್ಟಿ’ ವ್ಯವಸ್ಥೆಯ ಪ್ರಾತ್ಯಕ್ಷಿಕೆಯನ್ನು ನೀಡಿದವು. </p>.<p>ಇ–ಆರ್ಟಿ ಕುರಿತ ಅಧ್ಯಯನಕ್ಕಾಗಿ ಸ್ವಿಡ್ಜರ್ಲೆಂಡ್ಗೆ ಭೇಟಿ ನೀಡಿದ್ದ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಯೋಜನೆಯ ಕಾರ್ಯಸಾಧ್ಯತೆಯನ್ನು ಸಭೆಯಲ್ಲಿ ವಿವರಿಸಿದರು. </p>.<p>ಹುಬ್ಬಳ್ಳಿ–ಧಾರವಾಡದ ಪ್ರಾಯೋಗಿಕ ಯೋಜನೆ ಯಶಸ್ವಿಯಾದರೆ, ರಾಜ್ಯದ ಎರಡನೇ ಹಂತದ ನಗರಗಳಲ್ಲೂ ಜಾರಿಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.</p>.<p>ಈ ಸಂಬಂಧ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಗೆ ಸೂಚಿಸಿದ ಸಿದ್ದರಾಮಯ್ಯ ಅವರು, ಮೂರು ತಿಂಗಳ ಒಳಗೆ ವಿಸ್ತೃತ ಯೋಜನಾ ವರದಿ ಸಲ್ಲಿಸುವಂತೆ ಸೂಚಿಸಿದರು.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಭೆಯಲ್ಲಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹುಬ್ಬಳ್ಳಿ ಮತ್ತು ಧಾರವಾಡದ ಮಧ್ಯೆ ‘ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ (ಎಲೆಕ್ಟ್ರಿಕ್ ರ್ಯಾಪಿಡ್ ಟ್ರಾನ್ಸಿಟ್: ಇ–ಆರ್ಟಿ)’ ವ್ಯವಸ್ಥೆಯ ಪ್ರಾಯೋಗಿಕ ಸಂಚಾರ ಸಂಬಂಧ ಒಪ್ಪಂದಕ್ಕೆ ರಾಜ್ಯ ಸರ್ಕಾರ ಸಹಿ ಹಾಕಿದೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಎಚ್ಇಎಸ್ಎಸ್ಎಜಿ, ಎಚ್ಇಎಸ್ಎಸ್ ಇಂಡಿಯಾ ಮತ್ತು ಎಸ್ಎಸ್ಜಿ ಎಜಿ ಸಂಸ್ಥೆಗಳು ‘ಇ–ಆರ್ಟಿ’ ವ್ಯವಸ್ಥೆಯ ಪ್ರಾತ್ಯಕ್ಷಿಕೆಯನ್ನು ನೀಡಿದವು. </p>.<p>ಇ–ಆರ್ಟಿ ಕುರಿತ ಅಧ್ಯಯನಕ್ಕಾಗಿ ಸ್ವಿಡ್ಜರ್ಲೆಂಡ್ಗೆ ಭೇಟಿ ನೀಡಿದ್ದ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಯೋಜನೆಯ ಕಾರ್ಯಸಾಧ್ಯತೆಯನ್ನು ಸಭೆಯಲ್ಲಿ ವಿವರಿಸಿದರು. </p>.<p>ಹುಬ್ಬಳ್ಳಿ–ಧಾರವಾಡದ ಪ್ರಾಯೋಗಿಕ ಯೋಜನೆ ಯಶಸ್ವಿಯಾದರೆ, ರಾಜ್ಯದ ಎರಡನೇ ಹಂತದ ನಗರಗಳಲ್ಲೂ ಜಾರಿಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಸಚಿವ ಸಂತೋಷ್ ಲಾಡ್ ತಿಳಿಸಿದರು.</p>.<p>ಈ ಸಂಬಂಧ ಒಪ್ಪಂದಕ್ಕೆ ಸಹಿ ಹಾಕಲು ಒಪ್ಪಿಗೆ ಸೂಚಿಸಿದ ಸಿದ್ದರಾಮಯ್ಯ ಅವರು, ಮೂರು ತಿಂಗಳ ಒಳಗೆ ವಿಸ್ತೃತ ಯೋಜನಾ ವರದಿ ಸಲ್ಲಿಸುವಂತೆ ಸೂಚಿಸಿದರು.</p>.<p>ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸಭೆಯಲ್ಲಿ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>