<p><strong>ಬೆಂಗಳೂರು:</strong> ರಾಜ್ಯದಲ್ಲಿ ಬೌದ್ಧಿಕ ಹಕ್ಕು ಸ್ವತ್ತುಗಳ ಸೃಷ್ಟಿಗೆ ಉತ್ತೇಜನ ನೀಡುವ ಉದ್ದೇಶದಿಂದ ನಾಸ್ಕಾಂ, ಕರ್ನಾಟಕ ನಾವೀನ್ಯ ಮತ್ತು ತಂತ್ರಜ್ಞಾನ ಸೊಸೈಟಿ (ಕೈಟ್ಸ್) ಹಾಗೂ ರಾಜ್ಯ ಸರ್ಕಾರವು ಒಪ್ಪಂದ ಮಾಡಿಕೊಂಡಿವೆ.</p>.<p>ನಗರದಲ್ಲಿ ಗುರುವಾರ ನಡೆದ ಕಾರ್ಯಕ್ರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ನಾಸ್ಕಾಂ ಅಧ್ಯಕ್ಷ ರಾಜೇಶ್ ನಂಬಿಯಾರ್ ಅವರು, ‘ಬೌದ್ಧಿಕ ಹಕ್ಕು ಉತ್ತೇಜನಾ ಕಾರ್ಯಕ್ರಮ’ದ ಒಪ್ಪಂದ ಪತ್ರಕ್ಕೆ ಸಹಿ ಮಾಡಿದರು.</p>.<p>ಬೌದ್ಧಿಕ ಹಕ್ಕು ಪಡೆಯುವುದರ ಅಗತ್ಯದ ಬಗ್ಗೆ ಜಾಗೃತಿ ಮೂಡಿಸುವುದು, ಅಗತ್ಯವಿರುವ ಪ್ರಯೋಗಾಲಯ ಮತ್ತು ಅಧ್ಯಯನ ಸವಲತ್ತು ಒದಗಿಸುವುದು, ಬೌದ್ಧಿಕ ಹಕ್ಕಿಗಾಗಿ ಅರ್ಜಿ ಸಲ್ಲಿಸುವಲ್ಲಿ ನೆರವು ನೀಡುವುದು, ಈ ಎಲ್ಲ ಕೆಲಸಗಳಿಗೆ ನೀತಿರೂಪಣೆ ಮಟ್ಟದಲ್ಲಿ ಅಗತ್ಯವಿರುವ ನೆರವು ಒದಗಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶಗಳಾಗಿವೆ.</p>.<p>ರಾಜೇಶ್ ನಂಬಿಯಾರ್, ‘ರಾಜ್ಯ ಸರ್ಕಾರದೊಂದಿಗಿನ ಈ ಒಪ್ಪಂದಕ್ಕೆ ಸಹಿ ಹಾಕಿರುವುದು ಭಾರತೀಯರ ಬೌದ್ಧಿಕ ಹಕ್ಕುಗಳ ರಕ್ಷಣೆಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಇದು ಕರ್ನಾಟಕ ಮಾತ್ರವಲ್ಲದೆ, ಭಾರತಕ್ಕೂ ಜಾಗತಿಕ ಮಟ್ಟದಲ್ಲಿ ಮಹತ್ವದ ಸ್ಥಾನ ತಂದುಕೊಡಲಿದೆ’ ಎಂದರು.</p>.<p>ಪ್ರಿಯಾಂಕ್ ಖರ್ಗೆ, ‘ಉದ್ಯಮ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳಿಗೆ ಅಗತ್ಯವಿರುವ ಸವಲತ್ತು ಮತ್ತು ನೆರವನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರವು ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಸದಾ ನಿಲ್ಲಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಬೌದ್ಧಿಕ ಹಕ್ಕು ಸ್ವತ್ತುಗಳ ಸೃಷ್ಟಿಗೆ ಉತ್ತೇಜನ ನೀಡುವ ಉದ್ದೇಶದಿಂದ ನಾಸ್ಕಾಂ, ಕರ್ನಾಟಕ ನಾವೀನ್ಯ ಮತ್ತು ತಂತ್ರಜ್ಞಾನ ಸೊಸೈಟಿ (ಕೈಟ್ಸ್) ಹಾಗೂ ರಾಜ್ಯ ಸರ್ಕಾರವು ಒಪ್ಪಂದ ಮಾಡಿಕೊಂಡಿವೆ.</p>.<p>ನಗರದಲ್ಲಿ ಗುರುವಾರ ನಡೆದ ಕಾರ್ಯಕ್ರದಲ್ಲಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ನಾಸ್ಕಾಂ ಅಧ್ಯಕ್ಷ ರಾಜೇಶ್ ನಂಬಿಯಾರ್ ಅವರು, ‘ಬೌದ್ಧಿಕ ಹಕ್ಕು ಉತ್ತೇಜನಾ ಕಾರ್ಯಕ್ರಮ’ದ ಒಪ್ಪಂದ ಪತ್ರಕ್ಕೆ ಸಹಿ ಮಾಡಿದರು.</p>.<p>ಬೌದ್ಧಿಕ ಹಕ್ಕು ಪಡೆಯುವುದರ ಅಗತ್ಯದ ಬಗ್ಗೆ ಜಾಗೃತಿ ಮೂಡಿಸುವುದು, ಅಗತ್ಯವಿರುವ ಪ್ರಯೋಗಾಲಯ ಮತ್ತು ಅಧ್ಯಯನ ಸವಲತ್ತು ಒದಗಿಸುವುದು, ಬೌದ್ಧಿಕ ಹಕ್ಕಿಗಾಗಿ ಅರ್ಜಿ ಸಲ್ಲಿಸುವಲ್ಲಿ ನೆರವು ನೀಡುವುದು, ಈ ಎಲ್ಲ ಕೆಲಸಗಳಿಗೆ ನೀತಿರೂಪಣೆ ಮಟ್ಟದಲ್ಲಿ ಅಗತ್ಯವಿರುವ ನೆರವು ಒದಗಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶಗಳಾಗಿವೆ.</p>.<p>ರಾಜೇಶ್ ನಂಬಿಯಾರ್, ‘ರಾಜ್ಯ ಸರ್ಕಾರದೊಂದಿಗಿನ ಈ ಒಪ್ಪಂದಕ್ಕೆ ಸಹಿ ಹಾಕಿರುವುದು ಭಾರತೀಯರ ಬೌದ್ಧಿಕ ಹಕ್ಕುಗಳ ರಕ್ಷಣೆಯಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಇದು ಕರ್ನಾಟಕ ಮಾತ್ರವಲ್ಲದೆ, ಭಾರತಕ್ಕೂ ಜಾಗತಿಕ ಮಟ್ಟದಲ್ಲಿ ಮಹತ್ವದ ಸ್ಥಾನ ತಂದುಕೊಡಲಿದೆ’ ಎಂದರು.</p>.<p>ಪ್ರಿಯಾಂಕ್ ಖರ್ಗೆ, ‘ಉದ್ಯಮ ಸಂಸ್ಥೆಗಳು, ಶೈಕ್ಷಣಿಕ ಸಂಸ್ಥೆಗಳಿಗೆ ಅಗತ್ಯವಿರುವ ಸವಲತ್ತು ಮತ್ತು ನೆರವನ್ನು ಒದಗಿಸುವ ಮೂಲಕ ರಾಜ್ಯ ಸರ್ಕಾರವು ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಸದಾ ನಿಲ್ಲಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>