ಮುಂಬರುವ ಬಜೆಟ್ನಲ್ಲಿ ಇದನ್ನು ಪ್ರಕಟಿಸುವಂತೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನ ಶ್ರೇಣಿ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ನೀಡಿದರೆ ಸರ್ಕಾರಕ್ಕೆ ₹10,656 ಕೋಟಿ ಹೆಚ್ಚುವರಿಯಾಗಿ ಬೇಕಾಗುತ್ತದೆ. ಈಗ ಖಾಲಿ ಇರುವ ಹುದ್ದೆಗಳಿಂದಾಗಿ ಸರ್ಕಾರಕ್ಕೆ ವರ್ಷಕ್ಕೆ ಸುಮಾರು ₹8,531 ಕೋಟಿ ಉಳಿತಾಯವಾಗುತ್ತಿದೆ. ಸರ್ಕಾರಕ್ಕೆ ಹೆಚ್ಚುವರಿಯಾಗಿ ₹2,125 ಕೋಟಿ ಬೇಕಾಗಬಹುದು ಎಂದು ಷಡಾಕ್ಷರಿ ಅವರು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿದರು.