<p><strong>ಬೆಂಗಳೂರು:</strong> ಕೇಂದ್ರ ಸರ್ಕಾರದ ನೌಕರರಿಗೆ ಸರಿಸಮಾನವಾದ ವೇತನ ಜಾರಿಗೊಳಿಸಲು ‘ಅಧಿಕಾರಿಗಳ ವೇತನ ಸಮಿತಿ’ಯೊಂದನ್ನು ರಚಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ.</p>.<p>ಮುಂಬರುವ ಬಜೆಟ್ನಲ್ಲಿ ಇದನ್ನು ಪ್ರಕಟಿಸುವಂತೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನ ಶ್ರೇಣಿ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ನೀಡಿದರೆ ಸರ್ಕಾರಕ್ಕೆ ₹10,656 ಕೋಟಿ ಹೆಚ್ಚುವರಿಯಾಗಿ ಬೇಕಾಗುತ್ತದೆ. ಈಗ ಖಾಲಿ ಇರುವ ಹುದ್ದೆಗಳಿಂದಾಗಿ ಸರ್ಕಾರಕ್ಕೆ ವರ್ಷಕ್ಕೆ ಸುಮಾರು ₹8,531 ಕೋಟಿ ಉಳಿತಾಯವಾಗುತ್ತಿದೆ. ಸರ್ಕಾರಕ್ಕೆ ಹೆಚ್ಚುವರಿಯಾಗಿ ₹2,125 ಕೋಟಿ ಬೇಕಾಗಬಹುದು ಎಂದು ಷಡಾಕ್ಷರಿ ಅವರು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿದರು.</p>.<p>ರಾಷ್ಟ್ರದ ಜಿಎಸ್ಡಿಪಿ ಅವಲೋಕಿಸಿದರೆ ರಾಜ್ಯವು ಆರ್ಥಿಕ ಬೆಳವಣಿಗೆಯಲ್ಲಿ ರಾಷ್ಟ್ರದಲ್ಲೇ 6ನೇ ಸ್ಥಾನದಲ್ಲಿದೆ. ಇದರಲ್ಲಿ ರಾಜ್ಯ ಸರ್ಕಾರಿ ನೌಕರರ ಸೇವೆ ಮತ್ತು ಪಾತ್ರ ಮುಖ್ಯವಾಗಿದೆ. ಒಟ್ಟು 28 ರಾಜ್ಯಗಳಲ್ಲಿ ಕೇಂದ್ರ ಮಾದರಿಯ ವೇತನ ಪದ್ಧತಿ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.</p>.<p>ಕೇಂದ್ರವು 2016 ರಲ್ಲಿ 7 ನೇ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿ ತನ್ನ ನೌಕರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಿದೆ. ರಾಜ್ಯದಲ್ಲಿ 2016ರಲ್ಲಿ ವೇತನ ಆಯೋಗ ರಚಿಸದೇ ಒಂದು ವರ್ಷ ತಡವಾಗಿ ಅಂದರೆ 2017 ರಲ್ಲಿ 6 ನೇ ವೇತನ ಆಯೋಗವನ್ನು ರಚಿಸಲಾಯಿತು. ಆಯೋಗ ನೀಡಿದ ಶಿಫಾರಸು ಆಧರಿಸಿ 2017 ರ ಜುಲೈನಿಂದ ಅನ್ವಯಿಸಿ, 2018 ರ ಏಪ್ರಿಲ್ 1 ರಿಂದ ಆರ್ಥಿಕ ಲಾಭ ದೊರೆಯುವಂತೆ ವೇತನ, ಭತ್ಯೆ ಪರಿಷ್ಕರಿಸಲಾಗಿತ್ತು. ಇದರಲ್ಲಿ ಕೇಂದ್ರ ಮಾದರಿ ವೇತನ ಬೇಡಿಕೆ ಪರಿಗಣಿಸಿರಲಿಲ್ಲ ಎಂದು ಹೇಳಿದ್ದಾರೆ.</p>.<p><em>6.10 ಕೋಟಿ</em></p>.<p><em>ರಾಜ್ಯದ ಜನಸಂಖ್ಯೆ</em></p>.<p><em>7.63 ಲಕ್ಷ</em></p>.<p><em>ಮಂಜೂರಾದ ಹುದ್ದೆಗಳು</em></p>.<p><em>5,12,720</em></p>.<p><em>ಭರ್ತಿಯಾಗಿರುವ ಹುದ್ದೆಗಳು</em></p>.<p><em>2,50,363</em></p>.<p><em>ಖಾಲಿ ಇರುವ ಹುದ್ದೆಗಳು</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೇಂದ್ರ ಸರ್ಕಾರದ ನೌಕರರಿಗೆ ಸರಿಸಮಾನವಾದ ವೇತನ ಜಾರಿಗೊಳಿಸಲು ‘ಅಧಿಕಾರಿಗಳ ವೇತನ ಸಮಿತಿ’ಯೊಂದನ್ನು ರಚಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದೆ.</p>.<p>ಮುಂಬರುವ ಬಜೆಟ್ನಲ್ಲಿ ಇದನ್ನು ಪ್ರಕಟಿಸುವಂತೆ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ನೇತೃತ್ವದ ನಿಯೋಗ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನ ಶ್ರೇಣಿ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೆ ನೀಡಿದರೆ ಸರ್ಕಾರಕ್ಕೆ ₹10,656 ಕೋಟಿ ಹೆಚ್ಚುವರಿಯಾಗಿ ಬೇಕಾಗುತ್ತದೆ. ಈಗ ಖಾಲಿ ಇರುವ ಹುದ್ದೆಗಳಿಂದಾಗಿ ಸರ್ಕಾರಕ್ಕೆ ವರ್ಷಕ್ಕೆ ಸುಮಾರು ₹8,531 ಕೋಟಿ ಉಳಿತಾಯವಾಗುತ್ತಿದೆ. ಸರ್ಕಾರಕ್ಕೆ ಹೆಚ್ಚುವರಿಯಾಗಿ ₹2,125 ಕೋಟಿ ಬೇಕಾಗಬಹುದು ಎಂದು ಷಡಾಕ್ಷರಿ ಅವರು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿದರು.</p>.<p>ರಾಷ್ಟ್ರದ ಜಿಎಸ್ಡಿಪಿ ಅವಲೋಕಿಸಿದರೆ ರಾಜ್ಯವು ಆರ್ಥಿಕ ಬೆಳವಣಿಗೆಯಲ್ಲಿ ರಾಷ್ಟ್ರದಲ್ಲೇ 6ನೇ ಸ್ಥಾನದಲ್ಲಿದೆ. ಇದರಲ್ಲಿ ರಾಜ್ಯ ಸರ್ಕಾರಿ ನೌಕರರ ಸೇವೆ ಮತ್ತು ಪಾತ್ರ ಮುಖ್ಯವಾಗಿದೆ. ಒಟ್ಟು 28 ರಾಜ್ಯಗಳಲ್ಲಿ ಕೇಂದ್ರ ಮಾದರಿಯ ವೇತನ ಪದ್ಧತಿ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.</p>.<p>ಕೇಂದ್ರವು 2016 ರಲ್ಲಿ 7 ನೇ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿ ತನ್ನ ನೌಕರರ ವೇತನ ಮತ್ತು ಭತ್ಯೆಗಳನ್ನು ಪರಿಷ್ಕರಿಸಿದೆ. ರಾಜ್ಯದಲ್ಲಿ 2016ರಲ್ಲಿ ವೇತನ ಆಯೋಗ ರಚಿಸದೇ ಒಂದು ವರ್ಷ ತಡವಾಗಿ ಅಂದರೆ 2017 ರಲ್ಲಿ 6 ನೇ ವೇತನ ಆಯೋಗವನ್ನು ರಚಿಸಲಾಯಿತು. ಆಯೋಗ ನೀಡಿದ ಶಿಫಾರಸು ಆಧರಿಸಿ 2017 ರ ಜುಲೈನಿಂದ ಅನ್ವಯಿಸಿ, 2018 ರ ಏಪ್ರಿಲ್ 1 ರಿಂದ ಆರ್ಥಿಕ ಲಾಭ ದೊರೆಯುವಂತೆ ವೇತನ, ಭತ್ಯೆ ಪರಿಷ್ಕರಿಸಲಾಗಿತ್ತು. ಇದರಲ್ಲಿ ಕೇಂದ್ರ ಮಾದರಿ ವೇತನ ಬೇಡಿಕೆ ಪರಿಗಣಿಸಿರಲಿಲ್ಲ ಎಂದು ಹೇಳಿದ್ದಾರೆ.</p>.<p><em>6.10 ಕೋಟಿ</em></p>.<p><em>ರಾಜ್ಯದ ಜನಸಂಖ್ಯೆ</em></p>.<p><em>7.63 ಲಕ್ಷ</em></p>.<p><em>ಮಂಜೂರಾದ ಹುದ್ದೆಗಳು</em></p>.<p><em>5,12,720</em></p>.<p><em>ಭರ್ತಿಯಾಗಿರುವ ಹುದ್ದೆಗಳು</em></p>.<p><em>2,50,363</em></p>.<p><em>ಖಾಲಿ ಇರುವ ಹುದ್ದೆಗಳು</em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>