<p><strong>ಬೆಂಗಳೂರು:</strong> ‘ಮುಂಗಾರು ಅವಧಿಯಲ್ಲಿನ ಬರಗಾಲ ಘೋಷಣೆಯನ್ನು ರಾಜ್ಯ ಸರ್ಕಾರ ಸಕಾಲದಲ್ಲಿ ಮಾಡದಿರುವುದೇ ಕೇಂದ್ರದಿಂದ ಪರಿಹಾರ ಬಿಡುಗಡೆ ವಿಳಂಬವಾಗಲು ಕಾರಣ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ದೂರಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಬೇಗ ಬರ ಘೋಷಣೆ ಮಾಡಿದ್ದರೆ, ಕೇಂದ್ರವೂ ಇನ್ನಷ್ಟು ಮುಂಚಿತವಾಗಿ ಅಧ್ಯಯನ ತಂಡ ಕಳುಹಿಸುತ್ತಿತ್ತು. ಈಗಲೂ ಹಿಂಗಾರು ಅವಧಿಯ ಬರಗಾಲದ ಕುರಿತೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದರು.</p>.<p>ಬರ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ಸರಿಯಾಗಿ ಕ್ರಮ ಕೈಗೊಂಡಿಲ್ಲ. ಪ್ರತಿ ರೈತರಿಗೆ ₹ 2,000 ಮಾತ್ರ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ಬಂದ ಹಣದಲ್ಲೇ ಪರಿಹಾರ ನೀಡಲಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.</p>.<p><strong>ಸಂಸತ್ತಿಗೆ ಹೋಗಬೇಕಿತ್ತು:</strong></p>.<p>‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡರ ಎದುರು ಕೈಕಟ್ಟಿ ನಿಂತುಕೊಂಡು ಉತ್ತರ ಕೊಡಬೇಕಿತ್ತೆ? ಕೃಷ್ಣ ಅವರು ಬುದ್ಧಿವಂತರಾಗಿದ್ದರೆ ಸಂಸತ್ತಿಗೆ ಹೋಗಬೇಕಿತ್ತು’ ಎಂದು ಅಶೋಕ ಹೇಳಿದರು.</p>.<p>‘ಕೇಂದ್ರ ಹಣಕಾಸು ಸಚಿವರನ್ನು ಸಂತೆ ಭಾಷಣಕ್ಕೆ ಕರೆಯುವುದಲ್ಲ. ದೆಹಲಿಗೆ ಹೋಗಿ ರಾಜ್ಯ ಸರ್ಕಾರದ ಮನವಿಯನ್ನು ಅವರಿಗೆ ಸಲ್ಲಿಸಬೇಕಿತ್ತು’ ಎಂದರು.</p>.<p>ಎನ್ಡಿಎ ಸರ್ಕಾರದ ಅವಧಿಯಲ್ಲಿ ತೆರಿಗೆ ಪಾಲು ಮತ್ತು ಅನುದಾನದ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಕಾಂಗ್ರೆಸ್ನವರ ಆರೋಪದಲ್ಲಿ ಹುರುಳಿಲ್ಲ. ಎನ್ಡಿಎ ಸರ್ಕಾರದ ಅವಧಿಯಲ್ಲೇ ರಾಜ್ಯಕ್ಕೆ ಹೆಚ್ಚು ಅನುದಾನ, ನೆರವು ದೊರಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮುಂಗಾರು ಅವಧಿಯಲ್ಲಿನ ಬರಗಾಲ ಘೋಷಣೆಯನ್ನು ರಾಜ್ಯ ಸರ್ಕಾರ ಸಕಾಲದಲ್ಲಿ ಮಾಡದಿರುವುದೇ ಕೇಂದ್ರದಿಂದ ಪರಿಹಾರ ಬಿಡುಗಡೆ ವಿಳಂಬವಾಗಲು ಕಾರಣ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ದೂರಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯ ಸರ್ಕಾರ ಬೇಗ ಬರ ಘೋಷಣೆ ಮಾಡಿದ್ದರೆ, ಕೇಂದ್ರವೂ ಇನ್ನಷ್ಟು ಮುಂಚಿತವಾಗಿ ಅಧ್ಯಯನ ತಂಡ ಕಳುಹಿಸುತ್ತಿತ್ತು. ಈಗಲೂ ಹಿಂಗಾರು ಅವಧಿಯ ಬರಗಾಲದ ಕುರಿತೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದರು.</p>.<p>ಬರ ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ಸರಿಯಾಗಿ ಕ್ರಮ ಕೈಗೊಂಡಿಲ್ಲ. ಪ್ರತಿ ರೈತರಿಗೆ ₹ 2,000 ಮಾತ್ರ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ಬಂದ ಹಣದಲ್ಲೇ ಪರಿಹಾರ ನೀಡಲಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.</p>.<p><strong>ಸಂಸತ್ತಿಗೆ ಹೋಗಬೇಕಿತ್ತು:</strong></p>.<p>‘ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡರ ಎದುರು ಕೈಕಟ್ಟಿ ನಿಂತುಕೊಂಡು ಉತ್ತರ ಕೊಡಬೇಕಿತ್ತೆ? ಕೃಷ್ಣ ಅವರು ಬುದ್ಧಿವಂತರಾಗಿದ್ದರೆ ಸಂಸತ್ತಿಗೆ ಹೋಗಬೇಕಿತ್ತು’ ಎಂದು ಅಶೋಕ ಹೇಳಿದರು.</p>.<p>‘ಕೇಂದ್ರ ಹಣಕಾಸು ಸಚಿವರನ್ನು ಸಂತೆ ಭಾಷಣಕ್ಕೆ ಕರೆಯುವುದಲ್ಲ. ದೆಹಲಿಗೆ ಹೋಗಿ ರಾಜ್ಯ ಸರ್ಕಾರದ ಮನವಿಯನ್ನು ಅವರಿಗೆ ಸಲ್ಲಿಸಬೇಕಿತ್ತು’ ಎಂದರು.</p>.<p>ಎನ್ಡಿಎ ಸರ್ಕಾರದ ಅವಧಿಯಲ್ಲಿ ತೆರಿಗೆ ಪಾಲು ಮತ್ತು ಅನುದಾನದ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ಕಾಂಗ್ರೆಸ್ನವರ ಆರೋಪದಲ್ಲಿ ಹುರುಳಿಲ್ಲ. ಎನ್ಡಿಎ ಸರ್ಕಾರದ ಅವಧಿಯಲ್ಲೇ ರಾಜ್ಯಕ್ಕೆ ಹೆಚ್ಚು ಅನುದಾನ, ನೆರವು ದೊರಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>