‘ಪರಿಷತ್ನಲ್ಲಿ ಡಿ. 15ರಂದು ನಡೆದ ಘಟನೆಯಿಂದಾಗಿ ಲೋಕಸಭಾಧ್ಯಕ್ಷರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ರಾಜ್ಯ– ದೇಶದ ಗಣ್ಯರು, ಹಿರಿಯರು, ಮಾಧ್ಯಮದವರು ಖೇದ ವ್ಯಕ್ತಪಡಿಸಿದ್ದಾರೆ. ವಿಧಾನ ಪರಿಷತ್ ಬೇಕೊ, ಬೇಡವೊ ಎಂಬುದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಜವಾಬ್ದಾರಿಯುತ ವ್ಯಕ್ತಿಗಳಾದ ನಾವು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಎತ್ತಿ ಹಿಡಿಯುವ ಕಾರ್ಯ ಮಾಡಬೇಕು. ಆದರೆ, ಈ ಘಟನೆಯಿಂದಾಗಿ ಪ್ರಜಾಪ್ರಭುತ್ವದ ಮೌಲ್ಯದಲ್ಲಿ ಕುಸಿತ ಉಂಟಾಗಿದೆ. ಈ ಬಗ್ಗೆ ನಾವೆಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ’ ಎಂದರು.