ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಮೋಹನ್ ಗೌಡ, ‘ಪ್ರಾಚೀನ ದೇವಸ್ಥಾನಗಳ ರಕ್ಷಣೆ, ದೇವಸ್ಥಾನಗಳನ್ನು ಸರ್ಕಾರದ ವ್ಯಾಪ್ತಿಗೆ ಸೇರಿಸುವುದು ಹಾಗೂ ಭಕ್ತರಿಗೆ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತು ಚರ್ಚಿಸಲು ಈ ಅಧಿವೇಶನ ಆಯೋಜಿಸಲಾಗುತ್ತಿದೆ. ರಾಜ್ಯದಲ್ಲಿರುವ ಒಂದು ಸಾವಿರಕ್ಕೂ ಹೆಚ್ಚು ದೇವಾಲಯಗಳ ಅರ್ಚಕರು, ಧಾರ್ಮಿಕ ಚಿಂತಕರು, ನ್ಯಾಯವಾದಿಗಳು ಹಾಗೂ ದೇವಾಲಯಗಳ ರಕ್ಷಣಾ ಹೋರಾಟಗಾರರು ಭಾಗವಹಿಸಲಿದ್ದಾರೆ’ ಎಂದು ಮಾಹಿತಿ ನೀಡಿದರು.