<p><strong>ನವದೆಹಲಿ:</strong> ‘ಕೇಂದ್ರದಿಂದ ರಾಜ್ಯಕ್ಕೆ ₹4,195 ಕೋಟಿ ಅನುದಾನ ಬಾಕಿಯಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೂಟಾಟಿಕೆ ಪ್ರದರ್ಶಿಸುತ್ತಿದ್ದಾರೆ’ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.</p>.<p>ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಆರ್ಥಿಕ ದುರುಪಯೋಗ, ಆಡಳಿತ ವೈಫಲ್ಯ, ಅಸಮರ್ಥತೆ ಒಪ್ಪಿಕೊಳ್ಳುವುದನ್ನು ಬಿಟ್ಟು ಕೇಂದ್ರದ ಮೇಲೆ ವೃಥಾ ಆರೋಪ ಹೊರಿಸುತ್ತಿದ್ದಾರೆ. ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ’ ಎಂದು ಟೀಕಿಸಿದರು. </p>.<p>‘ಪಿಎಂಎವೈ (ಗ್ರಾಮೀಣ), ಸ್ವಚ್ಛ ಭಾರತ ಮಿಷನ್ (ನಗರ), ಅಮೃತ್, ಪೋಷಣ್, ಸಮಗ್ರ ಶಿಕ್ಷಣ ಮುಂತಾದ ಅನೇಕ ಪ್ರಮುಖ ಯೋಜನೆಗಳು ಸೇರಿದಂತೆ ವಿವಿಧ ಕೇಂದ್ರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ಮಂಜೂರಾಗಿರುವ ₹5,000 ಕೋಟಿಗೂ ಹೆಚ್ಚು ಅನುದಾನವನ್ನು ರಾಜ್ಯ ಬಳಸಿಲ್ಲ. ಮೊದಲು ಅದನ್ನು ಬಳಸಲಿ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಕೇಂದ್ರದಿಂದ ರಾಜ್ಯಕ್ಕೆ ₹4,195 ಕೋಟಿ ಅನುದಾನ ಬಾಕಿಯಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೂಟಾಟಿಕೆ ಪ್ರದರ್ಶಿಸುತ್ತಿದ್ದಾರೆ’ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.</p>.<p>ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ತಮ್ಮ ಸರ್ಕಾರದ ಆರ್ಥಿಕ ದುರುಪಯೋಗ, ಆಡಳಿತ ವೈಫಲ್ಯ, ಅಸಮರ್ಥತೆ ಒಪ್ಪಿಕೊಳ್ಳುವುದನ್ನು ಬಿಟ್ಟು ಕೇಂದ್ರದ ಮೇಲೆ ವೃಥಾ ಆರೋಪ ಹೊರಿಸುತ್ತಿದ್ದಾರೆ. ಜನರಿಗೆ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ’ ಎಂದು ಟೀಕಿಸಿದರು. </p>.<p>‘ಪಿಎಂಎವೈ (ಗ್ರಾಮೀಣ), ಸ್ವಚ್ಛ ಭಾರತ ಮಿಷನ್ (ನಗರ), ಅಮೃತ್, ಪೋಷಣ್, ಸಮಗ್ರ ಶಿಕ್ಷಣ ಮುಂತಾದ ಅನೇಕ ಪ್ರಮುಖ ಯೋಜನೆಗಳು ಸೇರಿದಂತೆ ವಿವಿಧ ಕೇಂದ್ರ ಪ್ರಾಯೋಜಿತ ಯೋಜನೆಗಳ ಅಡಿಯಲ್ಲಿ ಮಂಜೂರಾಗಿರುವ ₹5,000 ಕೋಟಿಗೂ ಹೆಚ್ಚು ಅನುದಾನವನ್ನು ರಾಜ್ಯ ಬಳಸಿಲ್ಲ. ಮೊದಲು ಅದನ್ನು ಬಳಸಲಿ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>