ಈ ಕುರಿತಂತೆ ಶನಿವಾರ ಮಾಧ್ಯಮಗಳಿಗೆ ಲಿಖಿತ ಸ್ಪಷ್ಟನೆ ಬಿಡುಗಡೆ ಮಾಡಿರುವ ಅವರು, ‘ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ 10 ಶಾಸಕರು ನೀಡಿರುವ ರಾಜೀನಾಮೆ ವಿಷಯಕ್ಕೆ ಸಂಬಂಧಿಸಿದಂತೆ, ಸಭಾಧ್ಯಕ್ಷರು ಯಾವುದೇ ಕ್ರಮ ಕೈಗೊಳ್ಳದೆ ಯಥಾಸ್ಥಿತಿ ಕಾಪಾಡಬೇಕು ಎಂದು ನ್ಯಾಯಪೀಠ ಶುಕ್ರವಾರ (ಜು.12) ಆದೇಶಿಸಿದೆ. ಈ ಆದೇಶದ ವ್ಯಾಪ್ತಿಯಲ್ಲಿ ವಿಪ್ ಜಾರಿಗೊಳಿಸಿರುವ ವಿಚಾರವೂ ಒಳಗೊಂಡಿರುತ್ತದೆ’ ಎಂದು ವಿವರಿಸಿದ್ದಾರೆ.