ನವೋದ್ಯಮಿಗಳಿಗೆ ಹೆಚ್ಚಿನ ಅವಕಾಶ ನೀಡಿ, ಪ್ರೋತ್ಸಾಹಿಸುವ ಉದ್ದೇಶದಿಂದ ಕೈಗಾರಿಕಾ ಪುನರ್ಸ್ಥಾಪನೆ ನಿಯಮ ಜಾರಿಗೆ ತರಲಾಗಿದೆ. ಕನಿಷ್ಠ ದಂಡವನ್ನು ವಿಧಿಸಿ, ಕೈಗಾರಿಕೆಗಳ ಸ್ಥಾಪನೆಗೆ ಮತ್ತಷ್ಟು ಕಾಲಾವಕಾಶ ಒದಗಿಸಲಾಗಿದೆ. ಇದರಿಂದ ಉದ್ಯಮಿಗಳಿಗೂ ಅನುಕೂಲವಾಗಿದೆ, ಸಂಸ್ಥೆಗೂ ಲಾಭವಾಗಿದೆ. ಸಂಸ್ಥೆಯಲ್ಲಿ ಆರ್ಥಿಕ ಶಿಸ್ತು ತರಲಾಗಿದ್ದು, ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕಿದ್ದರಿಂದ 2022-23ನೇ ಸಾಲಿನಲ್ಲಿ ಲಾಭಾಂಶದ ಹೆಚ್ಚಳವಾಗಲು ಕಾರಣವಾಗಿದೆ ಎಂದು ವಿವರಿಸಿದ್ದಾರೆ.