ಬೆಲೆ ಏರಿಕೆ ಕುರಿತು ಸದನದಲ್ಲಿ ಪ್ರತಿಪಕ್ಷಗಳು ಸುದೀರ್ಘ ಚರ್ಚೆ ನಡೆಸಿವೆ. ಪ್ರತಿ ಪಕ್ಷಗಳಿಗೆ ಮುಖ್ಯಮಂತ್ರಿ ಸದನದಲ್ಲೇ ಸೂಕ್ತ ಉತ್ತರ ನೀಡಿದ್ದಾರೆ. ವಾಸ್ತವಿಕವಾಗಿ ಬೆಲೆ ಏರಿಕೆ ಏಕೆ ಅನಿವಾರ್ಯವಾಗಿತ್ತು ಎಂದು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಬೆಲೆ ನಿಯಂತ್ರಣಕ್ಕೆ ಬರಲಿದೆ. ಪೆಟ್ರೋಲ್, ಡೀಸೆಲ್ ದರ ಇಳಿಕೆ ಕುರಿತು ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದರು.