1984ರ ಸಮಗ್ರ ಶಿಕ್ಷಣ ಕಾಯ್ದೆ ಅನ್ವಯ ಶಾಲೆಗಳಲ್ಲಿ ಸಮವಸ್ತ್ರ ಜಾರಿ ಮಾಡಲಾಗಿತ್ತು. ನಮ್ಮ ಸರ್ಕಾರದ ಅವಧಿಯಲ್ಲಿ ಅದನ್ನು ಅನುಷ್ಠಾನ ಮಾಡಲಾಯಿತು. ಹಿಜಾಬ್ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ. ಹಾಗಿದ್ದರೂ ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿರುವುದು ಖಂಡನೀಯ. ಮುಖ್ಯಮಂತ್ರಿ ಹೇಳಿಕೆ ಬಗ್ಗೆ ಕೋರ್ಟ್ ಗಮನ ಹರಿಸುತ್ತದೆ ಎಂಬ ವಿಶ್ವಾಸವಿದೆ ಎಂದೂ ಅವರು ಹೇಳಿದರು.