ಪ್ರಕರಣವೇನು?: ಕಳೆದ ವರ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸ ಹಾಗೂ ದೆಹಲಿಯ ಕರ್ನಾಟಕ ಭವನ, ಸಫ್ದರ್ ಜಂಗ್ ಫ್ಲ್ಯಾಟ್ಗಳ ಮೇಲೆ ಐ.ಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಹಣ, ಡೈರಿ ಸೇರಿದಂತೆ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಇದರನ್ವಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರ ಆಪ್ತರೂ ಆಗಿರುವ ಸಚಿನ್ ನಾರಾಯಣ್ ವಿರುದ್ಧ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ.