ಪ್ರತಿಭಟನೆ ವೇಳೆ ಬಿಜೆಪಿ ಮುಖಂಡರ ಭಾಷಣ ಮುಗಿಯುತ್ತಿದ್ದಂತೆಯೇ ಮೆಸ್ಕಾಂ ಕಚೇರಿಗೆ ಬೀಗ ಹಾಕಲು ಮುಂದಾದ ಪ್ರತಿಭಟನಾಕಾರರು ಮೆಸ್ಕಾಂ ಪ್ರವೇಶ ದ್ವಾರಕ್ಕೆ ನುಗ್ಗಿದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಈ ವೇಳೆ ನಡೆದ ತಳ್ಳಾಟದ ವೇಳೆ ಕೆಲವರು ಮೆಸ್ಕಾಂ ಕಚೇರಿಗೆ ಕಲ್ಕು ತೂರಿದ್ದಾರೆ. ಆಗ ಮೆಸ್ಕಾಂ ಕಚೇರಿಯ ಕಿಟಕಿ ಗಾಜು ಪುಡಿಯಾಗಿದೆ.
ಹೆಚ್ಚಿನ ಸಂಖ್ಯೆಯ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದರು.
ಕಲ್ಕು ತೂರಾಟಕ್ಕೆ ಸಂಬಂಧಿಸಿದಂತೆ ಮುರುಗೇಶ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು ಕರೆದೊಯ್ದರು.
ಬಿಜೆಪಿ ನಗರ ಘಟಕದ ಅಧ್ಯಕ್ಷ ಜಗದೀಶ್, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್.ಅರುಣ್, ಮೇಯರ್ ಶಿವಕುಮಾರ್, ಬಿಜೆಪಿ ಮುಖಂಡೆಅದ ಸಂತೋಷ್ ಬಳ್ಳೇಕೆರೆ, ಎಸ್. ದತ್ತಾತ್ರಿ, ಮಹಾನಗರ ಪಾಲಿಕೆ ಸದಸ್ಯರಾದ ಸುವರ್ಣ ಶಂಕರ್, ಸುರೇಖಾ ಮುರುಳೀಧರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು.