ಬೆಂಗಳೂರು:‘ಪರ್ಸೆಂಟೇಜ್ ಯಾಕೆ ಕೊಡುತ್ತೀರಿ? ಕಮಿಷನ್ ಕೇಳಿದರೆ ಕಾಮಗಾರಿ ಮಾಡುವುದಿಲ್ಲವೆಂದು ಒಂದು ವರ್ಷ ಕೆಲಸ ನಿಲ್ಲಿಸಿ. ಆಗ ತಂತಾನೆ ಎಲ್ಲವೂ ಸರಿಯಾಗುತ್ತದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಗುತ್ತಿಗೆದಾರರಿಗೆ ಕಿವಿಮಾತು ಹೇಳಿದರು.
‘ಟೆಂಡರ್ನಲ್ಲಿ ಭಾಗವಹಿಸುವುದನ್ನು ಕೈಬಿಟ್ಟು ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು. ಬೀದಿಗಿಳಿದು ದಾಖಲೆಗಳನ್ನು ಜನರಮುಂದಿಡಿ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
‘ದಾಖಲೆ ನೀಡಿದರೆ ತನಿಖೆ ನಡೆಸುವುದಾಗಿ ಸರ್ಕಾರ ಹೇಳುತ್ತಿದೆ. ತನಿಖೆಗೆ ವಹಿಸಿದರೆ ದಾಖಲೆ ಕೊಡು ತ್ತೇವೆಂದು ಗುತ್ತಿಗೆದಾರರು ಹೇಳುತ್ತಾರೆ. ಇದರಿಂದ ಪ್ರಯೋಜನವಾಗುವುದಿಲ್ಲ’ ಎಂದರು.