<p><strong>ಬೆಂಗಳೂರು:</strong> ‘ರೈತರ ಬಲವರ್ಧನೆಗೆ ಮತ್ತು ಆದಾಯ ಹೆಚ್ಚಿಸಲು ಕೃಷಿ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಹೀಗಾಗಿ, ರೈತರು ಟ್ರ್ಯಾಕ್ಟರ್ ರ್ಯಾಲಿ ಪ್ರತಿಭಟನೆ ಕೈಬಿಡಬೇಕು’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಮನವಿ ಮಾಡಿದರು.</p>.<p>ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಇದರಲ್ಲಿ ಯಾವುದೇ ಸಂಶಯಬೇಡ. ಈ ಬಗ್ಗೆ ಈಗಾಗಲೇ ಮನವರಿಕೆ ಮಾಡಿಕೊಡಲಾಗಿದೆ’ ಎಂದರು.</p>.<p>‘ಎಪಿಎಂಸಿ ರದ್ದುಪಡಿಸಿ, ಬೆಂಬಲ ಬೆಲೆ ರದ್ದುಪಡಿಸಲಾಗುವುದು ಎಂದು ಕಾಂಗ್ರೆಸ್ 2019ರಲ್ಲಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೇ ಹೇಳಿತ್ತು. ರೈತರ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನೀತಿ ಹೊಂದಿದೆ. ತನ್ನ ಅಸ್ತಿತ್ವ ಉಳಿಸಿ ಕೊಳ್ಳಲು ಇದೀಗ ಊಸರವಳ್ಳಿ ನಾಟಕವಾಡುತ್ತಿದೆ’ ಎಂದು ದೂರಿದರು.</p>.<p>‘ನಾವು ಎಪಿಎಂಸಿ ರದ್ದು ಮಾಡುತ್ತಿಲ್ಲ. ರೈತ ತನ್ನ ಬೆಳೆಯನ್ನು ತನಗೆ ಇಚ್ಛಿಸಿದ ಬೆಲೆಯಲ್ಲಿ ಮುಕ್ತವಾಗಿ ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಕೇಂದ್ರ ಸರ್ಕಾರ ಕಲ್ಪಿಸಿಕೊಟ್ಟಿದೆ. ಎಪಿಎಂಸಿಯಲ್ಲಿಯೂ ಮಾರಾಟ ಮಾಡಬಹುದಾಗಿದೆ. ಲಾಭ–ನಷ್ಟಕ್ಕೆ ವ್ಯಾಪಾರಸ್ಥರು ಹೊಣೆಯಾಗುತ್ತಾರೆಯೇ ಹೊರತು ರೈತರಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.</p>.<p><strong>‘ಟ್ರ್ಯಾಕ್ಟರ್ ಜಪ್ತಿ ಮಾಡಿದರೆ ಜೈಲಿಗೆ ಹೋಗಲೂ ಸಿದ್ಧ’</strong></p>.<p>ಮೈಸೂರು:ಟ್ರ್ಯಾಕ್ಟರ್ ಜಪ್ತಿ ಮಾಡಿದರೆ ಜೈಲಿಗೆ ಹೋಗಲೂ ಸಿದ್ಧ: ‘ಕೃಷಿ ಕಾಯ್ದೆಗಳನ್ನು ವಿರೋಧಿಸಿ ಗಣರಾಜ್ಯೋತ್ಸವ ದಿನ ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್ಯಾಲಿಗೆ ತಮ್ಮ ಪೂರ್ಣ ಬೆಂಬಲವಿದ್ದು, ರೈತರ ಬೆಂಬಲಕ್ಕೆ ನಿಲ್ಲುವಂತೆ ಕಾಂಗ್ರೆಸ್ ರೈತ ವಿಭಾಗಕ್ಕೆ ಸೂಚನೆ ಕೊಟ್ಟಿದ್ದಾಗಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>‘ಟ್ರ್ಯಾಕ್ಟರ್ ಜಪ್ತಿ ಮಾಡಿ ಕೇಸು ಹಾಕಿದರೆ ಜೈಲಿಗೆ ಹೋಗಲೂ ಸಿದ್ಧ. ಜೈಲ್ ಭರೋ ಶುರು ಮಾಡುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ನೋವು ಹೇಳಿಕೊಳ್ಳುವ ಹಕ್ಕು ಎಲ್ಲರಿಗೂ ಇದೆ. ರೈತರ ಬಾಯಿಮುಚ್ಚಿಸುವ ಕೆಲಸ ಆಗಬಾರದು’ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರೈತರ ಬಲವರ್ಧನೆಗೆ ಮತ್ತು ಆದಾಯ ಹೆಚ್ಚಿಸಲು ಕೃಷಿ ಕಾಯ್ದೆಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ. ಹೀಗಾಗಿ, ರೈತರು ಟ್ರ್ಯಾಕ್ಟರ್ ರ್ಯಾಲಿ ಪ್ರತಿಭಟನೆ ಕೈಬಿಡಬೇಕು’ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಮನವಿ ಮಾಡಿದರು.</p>.<p>ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಅವರು, ‘ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಇದರಲ್ಲಿ ಯಾವುದೇ ಸಂಶಯಬೇಡ. ಈ ಬಗ್ಗೆ ಈಗಾಗಲೇ ಮನವರಿಕೆ ಮಾಡಿಕೊಡಲಾಗಿದೆ’ ಎಂದರು.</p>.<p>‘ಎಪಿಎಂಸಿ ರದ್ದುಪಡಿಸಿ, ಬೆಂಬಲ ಬೆಲೆ ರದ್ದುಪಡಿಸಲಾಗುವುದು ಎಂದು ಕಾಂಗ್ರೆಸ್ 2019ರಲ್ಲಿ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೇ ಹೇಳಿತ್ತು. ರೈತರ ವಿಚಾರದಲ್ಲಿ ಕಾಂಗ್ರೆಸ್ ದ್ವಂದ್ವ ನೀತಿ ಹೊಂದಿದೆ. ತನ್ನ ಅಸ್ತಿತ್ವ ಉಳಿಸಿ ಕೊಳ್ಳಲು ಇದೀಗ ಊಸರವಳ್ಳಿ ನಾಟಕವಾಡುತ್ತಿದೆ’ ಎಂದು ದೂರಿದರು.</p>.<p>‘ನಾವು ಎಪಿಎಂಸಿ ರದ್ದು ಮಾಡುತ್ತಿಲ್ಲ. ರೈತ ತನ್ನ ಬೆಳೆಯನ್ನು ತನಗೆ ಇಚ್ಛಿಸಿದ ಬೆಲೆಯಲ್ಲಿ ಮುಕ್ತವಾಗಿ ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯವನ್ನು ಕೇಂದ್ರ ಸರ್ಕಾರ ಕಲ್ಪಿಸಿಕೊಟ್ಟಿದೆ. ಎಪಿಎಂಸಿಯಲ್ಲಿಯೂ ಮಾರಾಟ ಮಾಡಬಹುದಾಗಿದೆ. ಲಾಭ–ನಷ್ಟಕ್ಕೆ ವ್ಯಾಪಾರಸ್ಥರು ಹೊಣೆಯಾಗುತ್ತಾರೆಯೇ ಹೊರತು ರೈತರಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.</p>.<p><strong>‘ಟ್ರ್ಯಾಕ್ಟರ್ ಜಪ್ತಿ ಮಾಡಿದರೆ ಜೈಲಿಗೆ ಹೋಗಲೂ ಸಿದ್ಧ’</strong></p>.<p>ಮೈಸೂರು:ಟ್ರ್ಯಾಕ್ಟರ್ ಜಪ್ತಿ ಮಾಡಿದರೆ ಜೈಲಿಗೆ ಹೋಗಲೂ ಸಿದ್ಧ: ‘ಕೃಷಿ ಕಾಯ್ದೆಗಳನ್ನು ವಿರೋಧಿಸಿ ಗಣರಾಜ್ಯೋತ್ಸವ ದಿನ ರೈತರು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್ ರ್ಯಾಲಿಗೆ ತಮ್ಮ ಪೂರ್ಣ ಬೆಂಬಲವಿದ್ದು, ರೈತರ ಬೆಂಬಲಕ್ಕೆ ನಿಲ್ಲುವಂತೆ ಕಾಂಗ್ರೆಸ್ ರೈತ ವಿಭಾಗಕ್ಕೆ ಸೂಚನೆ ಕೊಟ್ಟಿದ್ದಾಗಿ ಡಿ.ಕೆ. ಶಿವಕುಮಾರ್ ಹೇಳಿದರು.</p>.<p>‘ಟ್ರ್ಯಾಕ್ಟರ್ ಜಪ್ತಿ ಮಾಡಿ ಕೇಸು ಹಾಕಿದರೆ ಜೈಲಿಗೆ ಹೋಗಲೂ ಸಿದ್ಧ. ಜೈಲ್ ಭರೋ ಶುರು ಮಾಡುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ನೋವು ಹೇಳಿಕೊಳ್ಳುವ ಹಕ್ಕು ಎಲ್ಲರಿಗೂ ಇದೆ. ರೈತರ ಬಾಯಿಮುಚ್ಚಿಸುವ ಕೆಲಸ ಆಗಬಾರದು’ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>