<p><strong>ಬೆಂಗಳೂರು:</strong> ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದಾಗ ಒಂದು ಸಮುದಾಯಕ್ಕೆ ನೋವಾಗುತ್ತದೆ. ಹಾಗೆಯೇ, ಹಿಜಾಬ್ ತೆಗೆಸಿದಾಗ ಮತ್ತೊಂದು ಸಮುದಾಯಕ್ಕೂ ನೋವಾಗುತ್ತದೆ ಎಂದು ಬಿಜೆಪಿ ನಾಯಕರು ಏಕೆ ಯೋಚಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ರದ್ದು ಮಾಡಿದ್ದರಿಂದ ಶೇ 95ರಷ್ಟು ಹಿಂದೂ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕರ್ನಾಟಕದ ಒಂದೂವರೆ ಲಕ್ಷ ಮಕ್ಕಳು ಸೇರಿದಂತೆ ವೈದ್ಯರಾಗುವ ಕನಸು ಕಂಡು, ಪರೀಕ್ಷೆ ಬರೆದಿದ್ದ ದೇಶದ ಸುಮಾರು 25 ಲಕ್ಷ ಮಕ್ಕಳು ಪರಿತಪಿಸುತ್ತಿದ್ದಾರೆ. ಕೇಂದ್ರ ಮಾಡಿದ ಅನ್ಯಾಯದ ವಿರುದ್ಧ ಬಿಜೆಪಿ ನಾಯಕರು ಧ್ವನಿ ಎತ್ತದೇ ಮೌನವಾಗಿದ್ದಾರೆ’ ಎಂದು ದೂರಿದರು.</p>.<p>‘ಎರಡು ವರ್ಷಗಳ ಕಠಿಣ ಅಭ್ಯಾಸ ಮಾಡಿ, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಕನಸುಗಳನ್ನೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕೊಂದಿದ್ದಾರೆ. ಅದನ್ನು ಪ್ರಶ್ನಿಸಿ, ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವ ಬದಲು ರಾಜ್ಯ ಬಿಜೆಪಿ ನಾಯಕರು ಹಿಜಾಬ್ನಂತಹ ಧಾರ್ಮಿಕ ವಿಷಯಗಳನ್ನು ಕೆದಕುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಮೇಲೆ ರಾಜಸ್ಥಾನ, ಗುಜರಾತ್ನಲ್ಲಿ ಬಿಜೆಪಿ ಮುಖಂಡರನ್ನು ಬಂಧಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರು ಹಾಗೂ ಅಲ್ಪ ಸಂಖ್ಯಾತರು ಓದಿನಲ್ಲಿ ಸಾಧನೆ ಮಾಡುತ್ತಿರುವುದನ್ನು ಅವರಿಗೆ ಸಹಿಸಲು ಆಗುತ್ತಿಲ್ಲ’ ಎಂದು ಟೀಕಿಸಿದರು.</p>.<p>‘ಶಿಕ್ಷಣವೇ ಒಂದು ಧರ್ಮ. ಎಲ್ಲ ವಿದ್ಯಾರ್ಥಿಗಳನ್ನೂ ಒಂದೇ ರೀತಿ ನೋಡಬೇಕು ಎನ್ನುವುದು ಸಿದ್ದರಾಮಯ್ಯ ಅವರ ಆಶಯ. ಶಿಕ್ಷಣ ಸಚಿವರಾಗಿದ್ದ ಬಿ.ಸಿ.ನಾಗೇಶ್, ಎಸ್.ಸುರೇಶ್ ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿಕ್ಷಣದ ಆಶಯಗಳನ್ನೇ ಹಾಳು ಮಾಡಿದರು’ ಎಂದು ಆರೋಪಿಸಿದರು.</p>.<p><strong>ಕೇಸರಿ ಶಾಲಿಗೆ ಉದ್ಯೋಗ ಸಿಗುತ್ತ?: ಪ್ರಿಯಾಂಕ್ ಖರ್ಗೆ</strong></p><p>‘ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡರೆ, ಗೋ ರಕ್ಷಣೆ, ಧರ್ಮ ರಕ್ಷಣೆ ಮಾಡಿದರೆ ಉದ್ಯೋಗ ಸಿಗುತ್ತದೆಯೇ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.</p><p>ಬಿಜೆಪಿ ನಾಯಕರ ಮಕ್ಕಳಿಗೆ ಹನುಮಾನ್ ಚಾಲೀಸಾ ಬರುತ್ತದೆಯೇ? ಬಡವರ ಮಕ್ಕಳಲ್ಲಿ ಕೋಮು ಭಾವನೆ ಬಿತ್ತುವ ಅವರು ತಮ್ಮ ಮಕ್ಕಳನ್ನು ವಿದೇಶಗಳಲ್ಲಿ ಓದಿಸುತ್ತಾರೆ ಎಂದು ಟೀಕಿಸಿದರು.</p><p>‘ಎಲ್ಲ ಧರ್ಮಗಳ ಆಚರಣೆಗೂ ಸಂವಿಧಾನ ಅವಕಾಶ ನೀಡಿದೆ. ಕೆಲವರು ಆದೇಶವನ್ನು ಅರ್ಥ ಮಾಡಿಕೊಳ್ಳದೆ ಟೀಕೆ ಮಾಡುತ್ತಾರೆ. ಮುಸ್ಲಿಮರು ಜನಿವಾರ, ಕುಂಕುಮ, ವಿಭೂತಿ ಹಾಕುತ್ತಾರಾ? ಹಿಂದೂಗಳು ಕುಂಕುಮ ಇಡುವುದನ್ನು<br>ನಿಷೇಧಿಸಲು ಆಗುತ್ತದೆಯೇ’ ಎಂದು ಪ್ರಶ್ನಿಸಿದರು.</p>.<p><strong>ನೀಟ್ ವಿರುದ್ಧ ಬಿಜೆಪಿ ಹೋರಾಡಲಿ: ದಿನೇಶ್</strong></p><p>‘ಕೋಮುವಾದದ ವಾತಾವರಣ ನಿರ್ಮಾಣ ಮಾಡುವುದೇ ಬಿಜೆಪಿ ಕಾರ್ಯಸೂಚಿಯಾಗಿದ್ದು, ಆ ಪಕ್ಷದವರಿಗೆ ವಿದ್ಯಾರ್ಥಿಗಳ ಮೇಲೆ ಕಾಳಜಿ ಇದ್ದರೆ ನೀಟ್ ಪರೀಕ್ಷೆ ವಿರುದ್ಧ ಹೋರಾಟ ಮಾಡಲಿ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p><p>‘ಹಿಜಾಬ್ ಅಂದರೆ ಒಂದು ಸ್ಕಾರ್ಫ್ ಅಷ್ಟೆ. ಅದಕ್ಕೆ ವಿಶೇಷ ಅರ್ಥ<br>ನೀಡಬೇಕಾಗಿಲ್ಲ. ವಿದ್ಯಾರ್ಥಿಗಳು ವಿಭೂತಿ, ಕುಂಕುಮ ಇಟ್ಟುಕೊಂಡು ಬಂದರೆ ಅದು ತಪ್ಪೆಂದು ಹೇಳಲು ಸಾಧ್ಯವಿಲ್ಲ. 2022ಕ್ಕಿಂತ ಮೊದಲು ಈ ಬಗ್ಗೆ ಯಾವುದೇ ರೀತಿಯ ಸಮಸ್ಯೆಗಳು ಆಗಿರಲಿಲ್ಲ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಸಮಸ್ಯೆಯಾಗಿದೆ. ನಾವು ಯಾವುದೇ ಒಂದು ಸಮುದಾಯದವರನ್ನು ಓಲೈಕೆ ಮಾಡುವ ಕೆಲಸ ಮಾಡುತ್ತಿಲ್ಲ’ ಎಂದು ಹೇಳಿದರು.</p>.<div><blockquote>ವಿದ್ಯಾರ್ಥಿಗಳು ಜನಿವಾರ, ಹಿಜಾಬ್, ರುದ್ರಾಕ್ಷಿ ಸೇರಿ ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸ ಬಹುದು. ಕೇಸರಿ ಶಾಲಿಗೆ ಅವಕಾಶವಿಲ್ಲ</blockquote><span class="attribution"> ಸಿದ್ದರಾಮಯ್ಯ, ಮುಖ್ಯಮಂತ್ರಿ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-51-2139863681</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದಾಗ ಒಂದು ಸಮುದಾಯಕ್ಕೆ ನೋವಾಗುತ್ತದೆ. ಹಾಗೆಯೇ, ಹಿಜಾಬ್ ತೆಗೆಸಿದಾಗ ಮತ್ತೊಂದು ಸಮುದಾಯಕ್ಕೂ ನೋವಾಗುತ್ತದೆ ಎಂದು ಬಿಜೆಪಿ ನಾಯಕರು ಏಕೆ ಯೋಚಿಸುವುದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದರು.</p>.<p>ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ರದ್ದು ಮಾಡಿದ್ದರಿಂದ ಶೇ 95ರಷ್ಟು ಹಿಂದೂ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕರ್ನಾಟಕದ ಒಂದೂವರೆ ಲಕ್ಷ ಮಕ್ಕಳು ಸೇರಿದಂತೆ ವೈದ್ಯರಾಗುವ ಕನಸು ಕಂಡು, ಪರೀಕ್ಷೆ ಬರೆದಿದ್ದ ದೇಶದ ಸುಮಾರು 25 ಲಕ್ಷ ಮಕ್ಕಳು ಪರಿತಪಿಸುತ್ತಿದ್ದಾರೆ. ಕೇಂದ್ರ ಮಾಡಿದ ಅನ್ಯಾಯದ ವಿರುದ್ಧ ಬಿಜೆಪಿ ನಾಯಕರು ಧ್ವನಿ ಎತ್ತದೇ ಮೌನವಾಗಿದ್ದಾರೆ’ ಎಂದು ದೂರಿದರು.</p>.<p>‘ಎರಡು ವರ್ಷಗಳ ಕಠಿಣ ಅಭ್ಯಾಸ ಮಾಡಿ, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಕನಸುಗಳನ್ನೇ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಕೊಂದಿದ್ದಾರೆ. ಅದನ್ನು ಪ್ರಶ್ನಿಸಿ, ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವ ಬದಲು ರಾಜ್ಯ ಬಿಜೆಪಿ ನಾಯಕರು ಹಿಜಾಬ್ನಂತಹ ಧಾರ್ಮಿಕ ವಿಷಯಗಳನ್ನು ಕೆದಕುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಮೇಲೆ ರಾಜಸ್ಥಾನ, ಗುಜರಾತ್ನಲ್ಲಿ ಬಿಜೆಪಿ ಮುಖಂಡರನ್ನು ಬಂಧಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರು ಹಾಗೂ ಅಲ್ಪ ಸಂಖ್ಯಾತರು ಓದಿನಲ್ಲಿ ಸಾಧನೆ ಮಾಡುತ್ತಿರುವುದನ್ನು ಅವರಿಗೆ ಸಹಿಸಲು ಆಗುತ್ತಿಲ್ಲ’ ಎಂದು ಟೀಕಿಸಿದರು.</p>.<p>‘ಶಿಕ್ಷಣವೇ ಒಂದು ಧರ್ಮ. ಎಲ್ಲ ವಿದ್ಯಾರ್ಥಿಗಳನ್ನೂ ಒಂದೇ ರೀತಿ ನೋಡಬೇಕು ಎನ್ನುವುದು ಸಿದ್ದರಾಮಯ್ಯ ಅವರ ಆಶಯ. ಶಿಕ್ಷಣ ಸಚಿವರಾಗಿದ್ದ ಬಿ.ಸಿ.ನಾಗೇಶ್, ಎಸ್.ಸುರೇಶ್ ಕುಮಾರ್, ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಶಿಕ್ಷಣದ ಆಶಯಗಳನ್ನೇ ಹಾಳು ಮಾಡಿದರು’ ಎಂದು ಆರೋಪಿಸಿದರು.</p>.<p><strong>ಕೇಸರಿ ಶಾಲಿಗೆ ಉದ್ಯೋಗ ಸಿಗುತ್ತ?: ಪ್ರಿಯಾಂಕ್ ಖರ್ಗೆ</strong></p><p>‘ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡರೆ, ಗೋ ರಕ್ಷಣೆ, ಧರ್ಮ ರಕ್ಷಣೆ ಮಾಡಿದರೆ ಉದ್ಯೋಗ ಸಿಗುತ್ತದೆಯೇ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.</p><p>ಬಿಜೆಪಿ ನಾಯಕರ ಮಕ್ಕಳಿಗೆ ಹನುಮಾನ್ ಚಾಲೀಸಾ ಬರುತ್ತದೆಯೇ? ಬಡವರ ಮಕ್ಕಳಲ್ಲಿ ಕೋಮು ಭಾವನೆ ಬಿತ್ತುವ ಅವರು ತಮ್ಮ ಮಕ್ಕಳನ್ನು ವಿದೇಶಗಳಲ್ಲಿ ಓದಿಸುತ್ತಾರೆ ಎಂದು ಟೀಕಿಸಿದರು.</p><p>‘ಎಲ್ಲ ಧರ್ಮಗಳ ಆಚರಣೆಗೂ ಸಂವಿಧಾನ ಅವಕಾಶ ನೀಡಿದೆ. ಕೆಲವರು ಆದೇಶವನ್ನು ಅರ್ಥ ಮಾಡಿಕೊಳ್ಳದೆ ಟೀಕೆ ಮಾಡುತ್ತಾರೆ. ಮುಸ್ಲಿಮರು ಜನಿವಾರ, ಕುಂಕುಮ, ವಿಭೂತಿ ಹಾಕುತ್ತಾರಾ? ಹಿಂದೂಗಳು ಕುಂಕುಮ ಇಡುವುದನ್ನು<br>ನಿಷೇಧಿಸಲು ಆಗುತ್ತದೆಯೇ’ ಎಂದು ಪ್ರಶ್ನಿಸಿದರು.</p>.<p><strong>ನೀಟ್ ವಿರುದ್ಧ ಬಿಜೆಪಿ ಹೋರಾಡಲಿ: ದಿನೇಶ್</strong></p><p>‘ಕೋಮುವಾದದ ವಾತಾವರಣ ನಿರ್ಮಾಣ ಮಾಡುವುದೇ ಬಿಜೆಪಿ ಕಾರ್ಯಸೂಚಿಯಾಗಿದ್ದು, ಆ ಪಕ್ಷದವರಿಗೆ ವಿದ್ಯಾರ್ಥಿಗಳ ಮೇಲೆ ಕಾಳಜಿ ಇದ್ದರೆ ನೀಟ್ ಪರೀಕ್ಷೆ ವಿರುದ್ಧ ಹೋರಾಟ ಮಾಡಲಿ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.</p><p>‘ಹಿಜಾಬ್ ಅಂದರೆ ಒಂದು ಸ್ಕಾರ್ಫ್ ಅಷ್ಟೆ. ಅದಕ್ಕೆ ವಿಶೇಷ ಅರ್ಥ<br>ನೀಡಬೇಕಾಗಿಲ್ಲ. ವಿದ್ಯಾರ್ಥಿಗಳು ವಿಭೂತಿ, ಕುಂಕುಮ ಇಟ್ಟುಕೊಂಡು ಬಂದರೆ ಅದು ತಪ್ಪೆಂದು ಹೇಳಲು ಸಾಧ್ಯವಿಲ್ಲ. 2022ಕ್ಕಿಂತ ಮೊದಲು ಈ ಬಗ್ಗೆ ಯಾವುದೇ ರೀತಿಯ ಸಮಸ್ಯೆಗಳು ಆಗಿರಲಿಲ್ಲ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ಸಮಸ್ಯೆಯಾಗಿದೆ. ನಾವು ಯಾವುದೇ ಒಂದು ಸಮುದಾಯದವರನ್ನು ಓಲೈಕೆ ಮಾಡುವ ಕೆಲಸ ಮಾಡುತ್ತಿಲ್ಲ’ ಎಂದು ಹೇಳಿದರು.</p>.<div><blockquote>ವಿದ್ಯಾರ್ಥಿಗಳು ಜನಿವಾರ, ಹಿಜಾಬ್, ರುದ್ರಾಕ್ಷಿ ಸೇರಿ ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸ ಬಹುದು. ಕೇಸರಿ ಶಾಲಿಗೆ ಅವಕಾಶವಿಲ್ಲ</blockquote><span class="attribution"> ಸಿದ್ದರಾಮಯ್ಯ, ಮುಖ್ಯಮಂತ್ರಿ</span></div>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-51-2139863681</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>