<p><strong>ಬೆಂಗಳೂರು:</strong> ನಗರದಲ್ಲಿ ಬೀದಿ ವ್ಯಾಪರಿಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ಅವರಿಗೆ ಗುರುತಿನ ಚೀಟಿಗಳನ್ನು ವಿತರಿಸಬೇಕು ಎಂದು ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘದ (ಕೆಪಿಬಿವಿಎಸ್) ಅಧ್ಯಕ್ಷ ಬಾಬು ಆಗ್ರಹಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಗುರುತಿನ ಚೀಟಿಗಳು ಮುದ್ರಣಗೊಂಡಿವೆ. ಆದರೂ ಬೀದಿ ವ್ಯಾಪಾರಿಗಳಿಗೆ ವಿತರಿಸಿಲ್ಲ. ಪೊಲೀಸರು ಕಾನೂನುಬಾಹಿರವಾಗಿ ದಂಡ ವಿಧಿಸುತ್ತಿದ್ದಾರೆ. ಹಲವೆಡೆ ಎತ್ತಂಗಡಿಯನ್ನೂ ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಗಾಂಧಿ ಬಜಾರ್ನ ಹೂವಿನ ವ್ಯಾಪಾರಿ ವನಜಾಕ್ಷಿ ಮಾತನಾಡಿ, ‘ನಗರದ ಎಲ್ಲ ಮಾರುಕಟ್ಟೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಮಹಿಳಾ ವ್ಯಾಪಾರಿಗಳಿಗೆ ಉಚಿತವಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸಿಕೊಡಬೇಕು’ ಎಂದು ಒತ್ತಾಯಿಸಿದರು. </p>.<p>ಮಳೆ, ಚಳಿ, ಬಿಸಿಲುಗಳಿಂದ ರಕ್ಷಿಸಿಕೊಳ್ಳಲು ಛತ್ರಿ, ಟೆಂಟ್, ಟಾರ್ಪಲ್ಗಳನ್ನು ಅಳವಡಿಸಿಕೊಳ್ಳಲು ಪಾಲಿಕೆ ಅವಕಾಶ ನೀಡಬೇಕು. ಇಲ್ಲವಾದಲ್ಲಿ ರಕ್ಷಣಾ ಸಾಮಗ್ರಿಗಳನ್ನು ವಿತರಿಸಬೇಕು ಎಂದು ಶಿವಾಜಿನಗರ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಜಮೀರ್ ಆಗ್ರಹಿಸಿದರು.</p>.<p>ಬೀದಿ ವ್ಯಾಪಾರಿಗಳ ರಕ್ಷಣೆಗಾಗಿ ಪಟ್ಟಣ ವ್ಯಾಪಾರ ಸಮಿತಿ ರಚನೆಯಾಗಬೇಕು. ಅವರ ಮೇಲಿನ ಕಿರುಕುಳ ತಡೆದು, ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಕೆಪಿಬಿವಿಎಸ್ನ ಕಾನೂನು ಸಲಹಾ ಅಧಿಕಾರಿ ವಿನಯ್ ಶ್ರೀನಿವಾಸ್ ತಿಳಿಸಿದರು.</p>.<p>‘ಡಿಸೆಂಬರ್ ಅಂತ್ಯದೊಳಗೆ ನಮ್ಮ ಎಲ್ಲ ಹಕ್ಕೊತ್ತಾಯಗಳನ್ನು ಈಡೇರಿಸದಿದ್ದಲ್ಲಿ, ಜನವರಿಯಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು’ ಎಂದು ಬೀದಿ ವ್ಯಾಪಾರಿಗಳು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಬೀದಿ ವ್ಯಾಪರಿಗಳಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಬೇಕು. ಅವರಿಗೆ ಗುರುತಿನ ಚೀಟಿಗಳನ್ನು ವಿತರಿಸಬೇಕು ಎಂದು ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘದ (ಕೆಪಿಬಿವಿಎಸ್) ಅಧ್ಯಕ್ಷ ಬಾಬು ಆಗ್ರಹಿಸಿದರು.</p>.<p>ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಗಾಗಲೇ ಗುರುತಿನ ಚೀಟಿಗಳು ಮುದ್ರಣಗೊಂಡಿವೆ. ಆದರೂ ಬೀದಿ ವ್ಯಾಪಾರಿಗಳಿಗೆ ವಿತರಿಸಿಲ್ಲ. ಪೊಲೀಸರು ಕಾನೂನುಬಾಹಿರವಾಗಿ ದಂಡ ವಿಧಿಸುತ್ತಿದ್ದಾರೆ. ಹಲವೆಡೆ ಎತ್ತಂಗಡಿಯನ್ನೂ ಮಾಡಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಗಾಂಧಿ ಬಜಾರ್ನ ಹೂವಿನ ವ್ಯಾಪಾರಿ ವನಜಾಕ್ಷಿ ಮಾತನಾಡಿ, ‘ನಗರದ ಎಲ್ಲ ಮಾರುಕಟ್ಟೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಮಹಿಳಾ ವ್ಯಾಪಾರಿಗಳಿಗೆ ಉಚಿತವಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸಿಕೊಡಬೇಕು’ ಎಂದು ಒತ್ತಾಯಿಸಿದರು. </p>.<p>ಮಳೆ, ಚಳಿ, ಬಿಸಿಲುಗಳಿಂದ ರಕ್ಷಿಸಿಕೊಳ್ಳಲು ಛತ್ರಿ, ಟೆಂಟ್, ಟಾರ್ಪಲ್ಗಳನ್ನು ಅಳವಡಿಸಿಕೊಳ್ಳಲು ಪಾಲಿಕೆ ಅವಕಾಶ ನೀಡಬೇಕು. ಇಲ್ಲವಾದಲ್ಲಿ ರಕ್ಷಣಾ ಸಾಮಗ್ರಿಗಳನ್ನು ವಿತರಿಸಬೇಕು ಎಂದು ಶಿವಾಜಿನಗರ ಪಟ್ಟಣ ವ್ಯಾಪಾರ ಸಮಿತಿ ಸದಸ್ಯ ಜಮೀರ್ ಆಗ್ರಹಿಸಿದರು.</p>.<p>ಬೀದಿ ವ್ಯಾಪಾರಿಗಳ ರಕ್ಷಣೆಗಾಗಿ ಪಟ್ಟಣ ವ್ಯಾಪಾರ ಸಮಿತಿ ರಚನೆಯಾಗಬೇಕು. ಅವರ ಮೇಲಿನ ಕಿರುಕುಳ ತಡೆದು, ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು ಎಂದು ಕೆಪಿಬಿವಿಎಸ್ನ ಕಾನೂನು ಸಲಹಾ ಅಧಿಕಾರಿ ವಿನಯ್ ಶ್ರೀನಿವಾಸ್ ತಿಳಿಸಿದರು.</p>.<p>‘ಡಿಸೆಂಬರ್ ಅಂತ್ಯದೊಳಗೆ ನಮ್ಮ ಎಲ್ಲ ಹಕ್ಕೊತ್ತಾಯಗಳನ್ನು ಈಡೇರಿಸದಿದ್ದಲ್ಲಿ, ಜನವರಿಯಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಲಾಗುವುದು’ ಎಂದು ಬೀದಿ ವ್ಯಾಪಾರಿಗಳು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>