ಭಾನುವಾರ ತಡರಾತ್ರಿ ಸಚಿವರಾದ ಆರ್. ಅಶೋಕ ಮತ್ತು ಬಸವರಾಜ ಬೊಮ್ಮಾಯಿ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಮಾಡಿ ಚರ್ಚಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸಾರಿಗೆ ವ್ಯವಸ್ಥೆಯನ್ನು ಸರಿಪಡಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನೂ ಸರ್ಕಾರ ಕೈಗೊಳ್ಳಲಿದೆ. ಅಡ್ಡಿಪಡಿಸಿದರೆ ಕಠಿಣ ಕ್ರಮ ನಿಶ್ಚಿತ‘ ಎಂದರು.