<p><strong>ನವದೆಹಲಿ:</strong> ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಗಣನೀಯ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆಯಿಂದ (ಎಸ್ಟಿಆರ್ಆರ್) ಭೂಮಿ ಕಳೆದುಕೊಂಡವರಿಗೆ ಇನ್ನೂ ಪರಿಹಾರ ನೀಡಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ದೂರಿದರು. </p>.<p>ಲೋಕಸಭೆಯಲ್ಲಿ ಗುರುವಾರ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ‘2021 ರಲ್ಲಿ ಈ ಯೋಜನೆಗಾಗಿ ಸುಮಾರು 2,200 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದಾಗ್ಯೂ, ಇಲ್ಲಿಯವರೆಗೆ ರೈತರಿಗೆ ಯಾವುದೇ ಪರಿಹಾರ ಬಿಡುಗಡೆ ಮಾಡಿಲ್ಲ. ಇದರಿಂದಾಗಿ, ಅವರು ತೀವ್ರ ಸಂಕಷ್ಟದಲ್ಲಿದ್ದಾರೆ‘ ಎಂದರು. </p>.<p>‘ದೀರ್ಘಕಾಲದಿಂದ ಬಾಕಿ ಇರುವ ಈ ಸಮಸ್ಯೆಯನ್ನು ಹೆದ್ದಾರಿ ಹಾಗೂ ಭೂಸಾರಿಗೆ ಸಚಿವಾಲಯ ಹಾಗೂ ಪ್ರಧಾನಿ ಸಚಿವಾಲಯವು ಆದಷ್ಟು ಬೇಗ ಪರಿಹರಿಸಬೇಕು‘ ಎಙಂದು ಅವರು ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬೆಂಗಳೂರು ನಗರದ ವಾಹನ ದಟ್ಟಣೆಯನ್ನು ಗಣನೀಯ ತಗ್ಗಿಸುವ ಉಪ ನಗರ ವರ್ತುಲ ರಸ್ತೆ ಯೋಜನೆಯಿಂದ (ಎಸ್ಟಿಆರ್ಆರ್) ಭೂಮಿ ಕಳೆದುಕೊಂಡವರಿಗೆ ಇನ್ನೂ ಪರಿಹಾರ ನೀಡಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್.ಮಂಜುನಾಥ್ ದೂರಿದರು. </p>.<p>ಲೋಕಸಭೆಯಲ್ಲಿ ಗುರುವಾರ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ‘2021 ರಲ್ಲಿ ಈ ಯೋಜನೆಗಾಗಿ ಸುಮಾರು 2,200 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದಾಗ್ಯೂ, ಇಲ್ಲಿಯವರೆಗೆ ರೈತರಿಗೆ ಯಾವುದೇ ಪರಿಹಾರ ಬಿಡುಗಡೆ ಮಾಡಿಲ್ಲ. ಇದರಿಂದಾಗಿ, ಅವರು ತೀವ್ರ ಸಂಕಷ್ಟದಲ್ಲಿದ್ದಾರೆ‘ ಎಂದರು. </p>.<p>‘ದೀರ್ಘಕಾಲದಿಂದ ಬಾಕಿ ಇರುವ ಈ ಸಮಸ್ಯೆಯನ್ನು ಹೆದ್ದಾರಿ ಹಾಗೂ ಭೂಸಾರಿಗೆ ಸಚಿವಾಲಯ ಹಾಗೂ ಪ್ರಧಾನಿ ಸಚಿವಾಲಯವು ಆದಷ್ಟು ಬೇಗ ಪರಿಹರಿಸಬೇಕು‘ ಎಙಂದು ಅವರು ಒತ್ತಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>