ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಜೆಡಿಎಸ್‌–ಬಿಜೆಪಿ ಸಂಸದರು ಸುಮ್ಮನೆ ಕುಳಿತಿಲ್ಲ: ದೇವೇಗೌಡ

ಗೋದಾವರಿ–ಕಾವೇರಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆ ಅನ್ಯಾಯದ ವಿರುದ್ಧ ಹೋರಾಟ
Published : 15 ಫೆಬ್ರುವರಿ 2025, 8:16 IST
Last Updated : 15 ಫೆಬ್ರುವರಿ 2025, 8:16 IST
ಫಾಲೋ ಮಾಡಿ
Comments
‘ಎಲ್ಲರೂ ಹೋರಾಡುತ್ತಿದ್ದೇವೆ’
‘ಗೋದಾವರಿ–ಕಾವೇರಿ ಜೋಡಣೆ, ಕಳಸಾ–ಬಂಡೂರಿ–ಮಹದಾಯಿ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ ನಷ್ಟವಾಗಿದೆ. ಇದು ರಾಜ್ಯದ ಸಮಸ್ಯೆ. ಇದರಲ್ಲಿ ಜೆಡಿಎಸ್–ಬಿಜೆಪಿ ಸಂಸದರು ಮಾತ್ರವಲ್ಲ, ಕಾಂಗ್ರೆಸ್‌ನ ಸಂಸದರೂ ಹೋರಾಡುತ್ತಿದ್ದಾರೆ’ ಎಂದು ದೇವೇಗೌಡ ಹೇಳಿದರು. ‘ಮಹಾದಾಯಿಗೆ ಸಂಬಂಧಿಸಿದ ವ್ಯಾಜ್ಯ ಸುಪ್ರೀಂ ಕೋರ್ಟ್‌ನಲ್ಲಿದೆ. ಸಿದ್ದರಾಮಯ್ಯ ಅವರ ಸರ್ಕಾರವೂ ಪ್ರಧಾನಿಗೆ ಪತ್ರ ಬರೆದಿದೆ. ವಿಷಯ ನ್ಯಾಯಾಲಯದಲ್ಲಿ ಇರುವ ಕಾರಣ ಪ್ರಧಾನಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದರಲ್ಲಿ ರಾಜ್ಯ ಸರ್ಕಾರದ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಬೇಕು. ಈ ಹೋರಾಟದಲ್ಲಿ ರಾಜ್ಯ ಸರ್ಕಾರಕ್ಕೆ ನಮ್ಮ ಸಹಕಾರವಿದೆ’ ಎಂದರು. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ ಮಂಜೂರು ಮಾಡಿಸುವಲ್ಲಿ ಜೆಡಿಎಸ್‌–ಬಿಜೆಪಿ ಸಂಸದರು ಏನೂ ಕೆಲಸ ಮಾಡುತ್ತಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ ಎಂದು ಸುದ್ದಿಗಾರರು ಪ್ರಸ್ತಾಪಿಸಿದಾಗ, ‘ಕಾಂಗ್ರೆಸ್‌ ಸರ್ಕಾರದವರು ಕೆಲವು ಯೋಜನೆಗಳನ್ನು ಮಾಡಿದ್ದಾರೆ. ಅವಕ್ಕೆ ಹಣ ಬೇಕಿದ್ದು, ನೀರಾವರಿಗೆ ಹಣ ಮೀಸಲಿಡಲು ಸಾಧ್ಯವಾಗಿಲ್ಲ. ಹೀಗಾಗಿ ಕೇಂದ್ರದ ಮೇಲೆ ಹೇಳುತ್ತಿದ್ದಾರೆ. ಆದರೆ ನಾನು ಅವನ್ನು ವಿರೋಧಿಸುವುದಿಲ್ಲ. ಅವರ ಯೋಜನೆಗಳನ್ನು ಅವರು ನಡೆಸಲಿ’ ಎಂದರು.
ಜೆಡಿಎಸ್‌ ಸಮಾವೇಶ
‘ಹಾಸನದಲ್ಲಿ ಕಾಂಗ್ರೆಸ್‌ನವರು ಸಮಾವೇಶ ನಡೆಸಿದರು. ಹೀಗಾಗಿ ಅಂಥದ್ದೇ ಸಮಾವೇಶವನ್ನು ದೊಡ್ಡ ಮಟ್ಟದಲ್ಲಿ ನಡೆಸಬೇಕು ಎಂಬುದು ಎಚ್‌.ಡಿ.ಕುಮಾರಸ್ವಾಮಿ ಅವರ ಇಂಗಿತ. ಇದಕ್ಕೆ ಸಿದ್ಧತೆ ನಡೆದಿದೆ’ ಎಂದು ದೇವೇಗೌಡ ಹೇಳಿದರು. ‘ಮೇ ತಿಂಗಳಿನಲ್ಲಿ ಸಮಾವೇಶ ನಡೆಸಬೇಕು ಎಂದುಕೊಂಡಿದ್ದೇವೆ. ಇದಕ್ಕಾಗಿ ಮಾರ್ಚ್‌ 6ರಂದು ಪಕ್ಷದ ಎಲ್ಲ ಚುನಾಯಿತ ಪ್ರತಿನಿಧಿಗಳು, ಪದಾಧಿಕಾರಿಗಳು, ಕಾರ್ಯಕರ್ತರನ್ನು ಸೇರಿಸಿ ಪೂರ್ವಸಿದ್ಧತಾ ಸಭೆ ನಡೆಸುತ್ತೇವೆ. ಸಮಾವೇಶವನ್ನು ತುಮಕೂರು ಅಥವಾ ಮಂಡ್ಯ ಅಥವಾ ಬೆಂಗಳೂರಿನಲ್ಲಿ ನಡೆಸಬೇಕೇ ಎಂಬುದನ್ನು ಅಲ್ಲಿ ಚರ್ಚಿಸುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT