ತಕ್ಷಣ ಅಧಿಕಾರಿಗಳು ಬೆಂಗಳೂರು ಉತ್ತರ ಡಿಸಿಪಿಗೆ ದೂರು ನೀಡಿದ್ದು, ಡಿಸಿಪಿ ಶಶಿಕುಮಾರ್ ನೇತೃತ್ವದ ತಂಡ ಫೋನ್ ನಂಬರ್ ಆಧರಿಸಿ ವಿದ್ಯಾರ್ಥಿಯನ್ನು ಪತ್ತೆ ಹಚ್ಚಿತ್ತು. ‘ನಾನು ಕಂಪ್ಯೂಟರ್ ಸೈನ್ಸ್ ವಿಷಯವನ್ನು ಸರಿಯಾಗಿ ಓದಿಲ್ಲ, ಪರೀಕ್ಷೆ ಮುಂದೂಡಲು ಈ ತಂತ್ರ ರೂಪಿಸಿದೆ’ ಎಂದು ವಿಚಾರಣೆ ವೇಳೆ ವಿದ್ಯಾರ್ಥಿ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.