<p><strong>ಬೆಂಗಳೂರು</strong>: ಇಲ್ಲಿಯ ಕೆ.ಆರ್.ರಸ್ತೆಯಲ್ಲಿರುವ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಕಾಲೇಜು ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಜಯಂತ್ ರೆಡ್ಡಿ (21) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಆಂಧ್ರಪ್ರದೇಶದ ಜಯಂತ್, ದೊಡ್ಡಬೊಮ್ಮಸಂದ್ರದಲ್ಲಿ ನೆಲೆಸಿದ್ದರು. ಎಂಜಿನಿಯರಿಂಗ್ (ಕಂಪ್ಯೂಟರ್ ಸೈನ್ಸ್) 3ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>’ಮಾ.6ರಿಂದ ಸೆಮಿಸ್ಟರ್ ಪರೀಕ್ಷೆ ನಿಗದಿಯಾಗಿತ್ತು. ಪರೀಕ್ಷೆಗೂ ಮುನ್ನ ಲ್ಯಾಬ್ನ ನಿಯೋಜಿತ ಕಾರ್ಯದ ವರದಿ ಸಲ್ಲಿಸಲೆಂದು ಜಯಂತ್, ಸೋಮವಾರ ಬೆಳಿಗ್ಗೆ 9 ಗಂಟೆಗೆ ಕಾಲೇಜಿಗೆ ಬಂದಿದ್ದರು. ಅದೇ ಸಂದರ್ಭದಲ್ಲಿ ಕಟ್ಟಡದಿಂದ ಜಿಗಿದಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು. ವಿ.ವಿ.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.</p>.<p class="Subhead">ಜೇಬಿನಲ್ಲಿ ಮರಣಪತ್ರ: ‘ಜಯಂತ್ ಜೇಬಿನಲ್ಲಿ ಮರಣಪತ್ರ ಸಿಕ್ಕಿದೆ. ‘ದಿನವೂ ಸಾಯುವ ಬದಲು, ಒಮ್ಮೆಯೇ ಸಾಯುವುದು ಒಳ್ಳೆಯದು’ ಎಂದು ಪತ್ರದಲ್ಲಿ ಬರೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದ್ದು, ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರನ್ನು ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p class="Briefhead">ವಿದ್ಯಾರ್ಥಿಗಳ ಪ್ರತಿಭಟನೆ</p>.<p>ಜಯಂತ್ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಕಾಲೇಜಿನಲ್ಲಿ ಸೇರಿದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.</p>.<p>‘ತರಾತುರಿಯಲ್ಲಿ ಪರೀಕ್ಷೆಗಳನ್ನು ನಿಗದಿ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಕಷ್ಟಪಡುತ್ತಿದ್ದಾರೆ. ಈ ಹಿಂದೆ ಒಂದೊಂದು ಪರೀಕ್ಷೆಗೆ ನಾಲ್ಕು ದಿನಗಳ ಅಂತರವಿರುತ್ತಿತ್ತು. ಆದರೆ, ಈ ಬಾರಿ ಒಂದು ದಿನ ಮಾತ್ರ ಅಂತರವಿದೆ. ಪರೀಕ್ಷಾ ಭಯದಿಂದಲೇ ಮಾನಸಿಕವಾಗಿ ನೊಂದು ಜಯಂತ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಹೊಣೆ’ ಎಂದು ದೂರಿದರು.</p>.<p>ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಲೇಜು ಆಡಳಿತ ಮಂಡಳಿ, ‘ವಿದ್ಯಾರ್ಥಿಗಳು, ಪೋಷಕರು ಹಾಗೂ ತಜ್ಞರ ಜೊತೆ ಚರ್ಚಿಸಿಯೇ ವಿಶ್ವವಿದ್ಯಾಲಯ ಪರೀಕ್ಷೆ ನಿಗದಿ ಮಾಡಿದೆ. ವಿದ್ಯಾರ್ಥಿಗಳ ಬೇಡಿಕೆಗಳನ್ನು ಕುಲಪತಿ ಹಾಗೂ ಕುಲಸಚಿವರಿಗೆ ತಿಳಿಸಲಾಗುವುದು’ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಇಲ್ಲಿಯ ಕೆ.ಆರ್.ರಸ್ತೆಯಲ್ಲಿರುವ ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಬಿಐಟಿ) ಕಾಲೇಜು ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಜಯಂತ್ ರೆಡ್ಡಿ (21) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಆಂಧ್ರಪ್ರದೇಶದ ಜಯಂತ್, ದೊಡ್ಡಬೊಮ್ಮಸಂದ್ರದಲ್ಲಿ ನೆಲೆಸಿದ್ದರು. ಎಂಜಿನಿಯರಿಂಗ್ (ಕಂಪ್ಯೂಟರ್ ಸೈನ್ಸ್) 3ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>’ಮಾ.6ರಿಂದ ಸೆಮಿಸ್ಟರ್ ಪರೀಕ್ಷೆ ನಿಗದಿಯಾಗಿತ್ತು. ಪರೀಕ್ಷೆಗೂ ಮುನ್ನ ಲ್ಯಾಬ್ನ ನಿಯೋಜಿತ ಕಾರ್ಯದ ವರದಿ ಸಲ್ಲಿಸಲೆಂದು ಜಯಂತ್, ಸೋಮವಾರ ಬೆಳಿಗ್ಗೆ 9 ಗಂಟೆಗೆ ಕಾಲೇಜಿಗೆ ಬಂದಿದ್ದರು. ಅದೇ ಸಂದರ್ಭದಲ್ಲಿ ಕಟ್ಟಡದಿಂದ ಜಿಗಿದಿದ್ದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು. ವಿ.ವಿ.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.</p>.<p class="Subhead">ಜೇಬಿನಲ್ಲಿ ಮರಣಪತ್ರ: ‘ಜಯಂತ್ ಜೇಬಿನಲ್ಲಿ ಮರಣಪತ್ರ ಸಿಕ್ಕಿದೆ. ‘ದಿನವೂ ಸಾಯುವ ಬದಲು, ಒಮ್ಮೆಯೇ ಸಾಯುವುದು ಒಳ್ಳೆಯದು’ ಎಂದು ಪತ್ರದಲ್ಲಿ ಬರೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದ್ದು, ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರನ್ನು ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p class="Briefhead">ವಿದ್ಯಾರ್ಥಿಗಳ ಪ್ರತಿಭಟನೆ</p>.<p>ಜಯಂತ್ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಕಾಲೇಜಿನಲ್ಲಿ ಸೇರಿದ್ದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.</p>.<p>‘ತರಾತುರಿಯಲ್ಲಿ ಪರೀಕ್ಷೆಗಳನ್ನು ನಿಗದಿ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳು ಸಾಕಷ್ಟು ಕಷ್ಟಪಡುತ್ತಿದ್ದಾರೆ. ಈ ಹಿಂದೆ ಒಂದೊಂದು ಪರೀಕ್ಷೆಗೆ ನಾಲ್ಕು ದಿನಗಳ ಅಂತರವಿರುತ್ತಿತ್ತು. ಆದರೆ, ಈ ಬಾರಿ ಒಂದು ದಿನ ಮಾತ್ರ ಅಂತರವಿದೆ. ಪರೀಕ್ಷಾ ಭಯದಿಂದಲೇ ಮಾನಸಿಕವಾಗಿ ನೊಂದು ಜಯಂತ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಹೊಣೆ’ ಎಂದು ದೂರಿದರು.</p>.<p>ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಕಾಲೇಜು ಆಡಳಿತ ಮಂಡಳಿ, ‘ವಿದ್ಯಾರ್ಥಿಗಳು, ಪೋಷಕರು ಹಾಗೂ ತಜ್ಞರ ಜೊತೆ ಚರ್ಚಿಸಿಯೇ ವಿಶ್ವವಿದ್ಯಾಲಯ ಪರೀಕ್ಷೆ ನಿಗದಿ ಮಾಡಿದೆ. ವಿದ್ಯಾರ್ಥಿಗಳ ಬೇಡಿಕೆಗಳನ್ನು ಕುಲಪತಿ ಹಾಗೂ ಕುಲಸಚಿವರಿಗೆ ತಿಳಿಸಲಾಗುವುದು’ ಎಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>