<p><strong>ಬೆಂಗಳೂರು:</strong> ನಿಕಟಪೂರ್ವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶನಿವಾರ ಮಧ್ಯಂತರ ವರದಿ ಸಲ್ಲಿಸಿದೆ.</p>.<p>ಆಯೋಗ ಕಂದಾಯ, ಆಹಾರ ಮತ್ತು ಸಾರಿಗೆ ಈ ಮೂರು ಇಲಾಖೆಗೆ ಸಂಬಂಧಿಸಿದ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಕೆಲವು ಶಿಫಾರಸುಗಳನ್ನು ಮಾಡಿದೆ.</p>.<p>ಹೋಬಳಿ, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕೆಲಸ ಮಾಡುವ ಹಾಗೂ ನಾಗರಿಕರ ಮಧ್ಯೆ ಕಾರ್ಯನಿರ್ವಹಿಸುವ ಸಿಬ್ಬಂದಿ ಜೊತೆ ಆಯೋಗ ಹಲವು ಗುಂಪು ಚರ್ಚೆ ನಡೆಸಿದೆ. 57 ಐಎಎಸ್, ಕೆಎಎಸ್ ಅಧಿಕಾರಿಗಳು ಮತ್ತು ಪ್ರೊಬೇಷನರಿ ಅಧಿಕಾರಿಗಳ ಗುಂಪು ಕ್ಷೇತ್ರ ಸಮೀಕ್ಷೆ ನಡೆಸಿ ಆಯೋಗ ಈ ವರದಿ ತಯಾರು ಮಾಡಿದೆ.</p>.<p>ವರದಿ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಪಿ, ರವಿಕುಮಾರ್, ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ. ವಿ. ರಮಣರೆಡ್ಡಿ ಮತ್ತು ಸಮಿತಿಯ ಸದಸ್ಯ ಎನ್.ಎಸ್. ಪ್ರಸನ್ನಕುಮಾರ್ ಇದ್ದರು.</p>.<p><strong>ಕಂದಾಯ ಇಲಾಖೆಗೆ ಸಂಬಂಧಿಸಿದ ಶಿಫಾರಸುಗಳೇನು?</strong></p>.<p>* ಎಲ್ಲ ಇಲಾಖೆಗಳು ನಾಗರಿಕರಿಗೆ ಒದಗಿಸುವ ಸುಮಾರು 800 ಆನ್ಲೈನ್ ಸೇವೆಗಳಿಗೆ ಅಟಲ್ಜೀ ಜನಸ್ನೇಹಿ ಕೇಂದ್ರಗಳು ಏಕಗವಾಕ್ಷಿ ಏಜೆನ್ಸಿಯಾಗಬೇಕು. ಈ 800 ಸೇವೆಗಳು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಪಂಚಾಯಿತಿ ಬಾಪೂಜಿ ಸೇವಾ ಕೇಂದ್ರಗಳು ಮತ್ತು ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಲಭ್ಯವಾಗಬೇಕು.</p>.<p>* ಎಲ್ಲ ಸಕಾಲ ಅರ್ಜಿಗಳಲ್ಲಿ ಶೇ 81ರಷ್ಟು ಅರ್ಜಿಗಳು ಆನ್ಲೈನ್ ಮೂಲಕ ಸಲ್ಲಿಕೆಯಾಗುತ್ತಿವೆ. ಎಲ್ಲ ಇಲಾಖೆಗಳ ಸಕಾಲ ಮತ್ತು ಸಕಾಲವಲ್ಲದ ಸುಮಾರು 800 ಇ-ಸೇವೆಗಳಿಗೆ ಸೇವಾ ಸಿಂಧು ಏಕ ಮಾತ್ರ ವೇದಿಕೆ ಆಗಬೇಕು.</p>.<p>* ರಾಜ್ಯ ಸರ್ಕಾರದ ಎಲ್ಲಾ ಇ-ಪೇಟೆಗಳನ್ನು ಮೊಬೈಲ್ ಮೂಲಕ ಒದಗಿಸಲು, ಕರ್ನಾಟಕ ಮೊಬೈಲ್ ಒನ್ ಆ್ಯಪ್ ಅನ್ನು ಇತ್ತೀಚಿನ ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿ ಮಾಡಬೇಕು.</p>.<p>* ಎಜೆಎಸ್ಕೆ, ಭೂಮಿ, ಎಸ್ಎಸ್ಪಿ, ಐಜಿಎಸ್ಎಲ್ ಮತ್ತು ಎಸ್ಎಸ್ಎಲ್ಆರ್ ಸೇವಾ ಪೋರ್ಟಲ್ಗಳು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮತ್ತು ಆನ್ಲೈನ್ ವ್ಯಾಲೆಟ್ ವ್ಯವಸ್ಥೆಯನ್ನು ಬಳಸಿಕೊಂಡು ಅರ್ಜಿ ಶುಲ್ಕವನ್ನು ಸಂಗ್ರಹಿಸಲು ಯುಪಿಐ, ಕ್ಯೂಆರ್ ಕೋಡ್ ಪಾವತಿ ವಿಧಾನ ಹೊಂದಿರಬೇಕು.</p>.<p>* ಕಂದಾಯ ಇಲಾಖೆಯಿಂದ ನೀಡಲಾಗುವ ಕೆಲವು ಪ್ರಮಾಣಪತ್ರಗಳು ಅನುಪಯುಕ್ತವಾಗಿದೆ. ಜನಸಂಖ್ಯಾ ಪ್ರಮಾಣಪತ್ರ, ವಾಸ ಸ್ಥಳ ಪ್ರಮಾಣಪತ್ರ, ಬೆಳೆ ಪ್ರಮಾಣಪತ್ರ, ಕೃಷಿಕ ಪ್ರಮಾಣಪತ್ರ, ಈ ಪ್ರಮಾಣಪತ್ರಗಳನ್ನು ತೆಗೆದುಹಾಕಿ ಮತ್ತು ಪರ್ಯಾಯಗಳನ್ನು ಸೂಚಿಸಿ ಆದೇಶ ಹೊರಡಿಸಬೇಕು</p>.<p>* ಭೂಸ್ವಾಧೀನ ನಿರ್ವಹಣಾ ಸಾಫ್ಟ್ವೇರ್ ವ್ಯವಸ್ಥೆಯನ್ನು ಕಂದಾಯ ಇಲಾಖೆ ತ್ವರಿತವಾಗಿ ಅಭಿವೃದ್ಧಿಪಡಿಸಬೇಕು. ಸೂಕ್ತವಾದ ಮಾರ್ಪಾಡುಗಳನ್ನು ಮಾಡುವ ಮೂಲಕ ಕೆಐಎಡಿಬಿ, ಬಿಡಿಎ, ಎನ್ಎಚ್ಐ ಸೇರಿದಂತೆ ವಿವಿಧ ಭೂ ಸ್ವಾಧೀನಪಡಿಸಿಕೊಳ್ಳುವ ಸಂಸ್ಥೆಗಳಿಂದ ಬಳಸುವುದನ್ನು ಕಡ್ಡಾಯಗೊಳಿಸಲು ಆದೇಶ ಹೊರಡಿಸಬೇಕು.</p>.<p>* ಅಡಮಾನ ನೋಂದಣಿ, ಭೂಮಿ ಅಥವಾ ನಿವೇಶನಗಳ ಅಡಮಾನ ಬಿಡುಗಡೆಗೊಳಿಸಲು ಮತ್ತು ಎನ್ಕಂಬೈನ್ಸ್ ನೀಡುವ ವಿಧಾನ ಸರಳೀಕರಿಸಬೇಕು ಮತ್ತು ಸಂಪೂರ್ಣವಾಗಿ ಆನ್ಲೈನ್ನಲ್ಲಿ ಮಾಡಬೇಕು</p>.<p>* ಕಾವೇರಿ-2 ಮತ್ತು ಆನ್ಲೈನ್ ಸೇವೆಯನ್ನು (ಕೆಪಿಎಸ್-2) ಅದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಬೇಕು. ಇದು ಸಬ್ ರಿಜಿಸ್ಟ್ರಾರ್ ಕಚೇರಿಗೆ ಬರುವ ಮೊದಲು ಯಾವುದೇ ಸಮಸ್ಯೆಯೇ ಇಲ್ಲದೆ ನೋಂದಣಿ ಪೂರ್ವ ದತ್ತಾಂಶ ನಮೂದು ಮಾಡಲು ಅವಕಾಶ ಮಾಡಿಕೊಡುತ್ತದೆ. ಸಂಬಂಧಪಟ್ಟವರಿಗೆ ಹೆಚ್ಚಿನ ಸಮಯವನ್ನು ಉಳಿಸುತ್ತದೆ.</p>.<p>* ಎಜೆಎಸ್ಕೆ, ತಹಶೀಲ್ದಾರ್, ಎಡಿಎಲ್ಆರ್, ಸಬ್ ರಿಜಿಸ್ಟ್ರಾರ್ ಕಚೇರಿಗಳಿಂದ ಮೇಲಿನ ಎಲ್ಲ ಕಚೇರಿಗಳಿಗೆ ಇ-ಆಫೀಸ್ ಕಡ್ಡಾಯಗೊಳಿಸಬೇಕು</p>.<p>* ಗ್ರಾಮ ಲೆಕ್ಕಾಧಿಕಾರಿಗಳನ್ನು ಗ್ರಾಮ ಅಧಿಕಾರಿಗಳಾಗಿ ಮರು ಪದನಾಮಕಾರಣ ಮಾಡಬಹುದು. ಗ್ರಾಮ ಲೆಕ್ಕಾಧಿಕಾರಿಗಳ ಕಾರ್ಯವ್ಯಾಪ್ತಿ ಗ್ರಾಮೀಣ ಪ್ರದೇಶಗಳಲ್ಲಿನ ಗ್ರಾಮ ಪಂಚಾಯಿತಿ ಕಾರ್ಯವ್ಯಾಪ್ತಿಯೊಂದಿಗೆ ಸಮನ್ವಯಗೊಳ್ಳಬೇಕು.</p>.<p>* ಎಲ್ಲ ನಾಲ್ಕು ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಪಡಿಸಬಹುದು ಮತ್ತು ರಾಜ್ಯ ಮಟ್ಟದಲ್ಲಿ ಕಂದಾಯ ಆಯುಕ್ತಾಲಯವನ್ನು ಸ್ಥಾಪಿಸಬಹುದು.</p>.<p><strong>ಆಹಾರ ಇಲಾಖೆಗೆ ಸಂಬಂಧಿಸಿ ಶಿಫಾರಸು</strong></p>.<p>* ಪಡಿತರ ಕಾರ್ಡ್ ಹೊಂದಿರುವವರು ಇಚ್ಛಿಸಿದಲ್ಲಿ ಮನೆಬಾಗಿಲಿಗೆ ಪಡಿತರ ಪಡೆದುಕೊಳ್ಳಲು, ಪಡಿತರ ಕಾರ್ಡುದಾರರರು ಮತ್ತು ನ್ಯಾಯಬೆಲೆ ಅಂಗಡಿಯವರು ಪರಸ್ಪರ ಒಪ್ಪಿದ ಶುಲ್ಕವನ್ನು ಪಾವತಿಸಿ, ಪಡಿತರ ಪಡೆದುಕೊಳ್ಳಲು ಅನುಮತಿಸಬಹುದು.</p>.<p>* ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಪಡಿತರ ಚೀಟಿ ಡೇಟಾಬೇಸ್ನೊಂದಿಗೆ ಸಂಯೋಜಿಸಬೇಕು ಅಥವಾ ಮರಣ ನೋಂದಣಿಯ ನಂತರ ಪಡಿತರ ಚೀಟಿ ಕುಟುಂಬ ಸದಸ್ಯರ ಪಟ್ಟಿ ಸ್ವಯಂಚಾಲಿತವಾಗಿ ನವೀಕರಣವಾಗುವಂತಾಗಬೇಕು.</p>.<p>* ರಾಜ್ಯದಿಂದ ಸರ್ಕಾರ ಅನುಮೋದಿತ ಪರೀಕ್ಷಾ ಕೇಂದ್ರಗಳನ್ನು (GATC Government Approved Test Centres) ಗುರುತಿಸಬೇಕು.</p>.<p>* ಕಾನೂನು ಮಾಪನಶಾಸ್ತ್ರ ಇಲಾಖೆ ನೀಡುವ ಪರವಾನಿಗೆಗಳನ್ನು 3-5 ವರ್ಷಗಳವರೆಗೆ ಸ್ವಯಂಚಾಲಿತ ಆನ್ಲೈನ್ ಮೂಲಕ ನವೀಕರಣ, ತಿದ್ದುಪಡಿ ವ್ಯವಸ್ಥೆಯನ್ನು ಜಾರಿಮಾಡಬೇಕು.</p>.<p><strong>ಸಾರಿಗೆ ಇಲಾಖೆಯ ಪ್ರಮುಖ ಶಿಫಾರಸುಗಳು</strong></p>.<p>* ಪ್ರಸ್ತುತ ಆರ್ಟಿಒ ಸೇವೆಗಳಿಗೆ ನಾಗರಿಕರು ಕಾಗದದ ಅರ್ಜಿ ಮತ್ತು ಆನ್ಲೈನ್ ಅರ್ಜಿ ಎರಡರಲ್ಲೂ ಸಲ್ಲಿಸಲಾಗುತ್ತಿದೆ. ನಾಗರಿಕರಿಗೆ ಎಲ್ಲ ಆರ್ಟಿಒ ಸೇವೆಗಳನ್ನು ಕಾಗದರಹಿತವಾಗಿ ಮಾಡಬೇಕು</p>.<p>* ಯಾವುದೇ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ದಾಖಲೆಗಳನ್ನು ನೋಂದಾಯಿಸಲು ಅವಕಾಶವಿರುವಂತೆ, ಸುಲಭವಾಗಿ ಸೇವೆಗಳನ್ನು ಪಡೆಯಲು ನಾಗರಿಕರು ಬೆಂಗಳೂರು ನಗರದ ಯಾವುದೇ ಆರ್ಟಿಒ ಕಚೇರಿ ಆಯ್ಕೆ ಮಾಡಿಕೊಳ್ಳುವಂತಿರಬೇಕು.</p>.<p>* ಹೆಚ್ಚಿನ ದಕ್ಷತೆಗಾಗಿ ಇ-ಆಫೀಸ್ ವ್ಯವಸ್ಥೆಯನ್ನು ಎಲ್ಲ ಆರ್ಟಿಒ ಕಚೇರಿಗಳು ಮತ್ತು ಸಾರಿಗೆ ಇಲಾಖೆ ಕಚೇರಿಗಳು ಬಳಸಬೇಕು</p>.<p>* ಸಾರಿಗೆ ಆಯುಕ್ತರು ವಶಪಡಿಸಿಕೊಂಡ ವಾಹನಗಳಿಗೆ ನಿಗದಿತ ಸಮಯದೊಳಗೆ ದಂಡ ಪಾವತಿಸದಿದ್ದರೆ, ನ್ಯಾಯಾಲಯದ ಆದೇಶ ಕಾಯುವ ಅಗತ್ಯವಿಲ್ಲದೆ ಇ-ಹರಾಜು ಹಾಕಲು ಸಾರಿಗೆ ಇಲಾಖೆಗೆ ಅನುಮತಿ ನೀಡಲು ಕರ್ನಾಟಕ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಪ್ರಸ್ತಾಪಿಸಬಹುದು.</p>.<p>* ನಗದು ಪಾವತಿಗಾಗಿ ಆರ್ಟಿಒ ಕಚೇರಿಗಳಲ್ಲಿ ತೆಗೆದುಕೊಳ್ಳುವ ಸಮಯ ಕಡಿಮೆ ಮಾಡಲು, ನಗದು ವ್ಯವಹಾರ ಕಡಿಮೆ ಮಾಡಲು, ಕ್ಯೂಆರ್ ಕೋಡ್ ಆಧಾರಿತ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಪಾವತಿ ಯಂತ್ರಗಳನ್ನು ಸ್ಥಾಪಿಸಬಹುದು.</p>.<p>* ಐಟಿ ನಿರ್ದೇಶಕರ ಎರಡು ಹುದ್ದೆಗಳಿವೆ (ಒಂದು ಕೆಎಸ್ಆರ್ಟಿಸಿಯಲ್ಲಿ, ಮತ್ತೊಂದು ಬಿಎಂಟಿಸಿಯಲ್ಲಿ) ಒಂದು ಹುದ್ದೆಯನ್ನು ರದ್ದುಪಡಿಸಿ ಎರಡೂ ಐಟಿ ವ್ಯವಸ್ಥೆಗಳ ಉಸ್ತುವಾರಿಗೆ ಒಬ್ಬರನ್ನೇ ನಿರ್ದೇಶಕರನ್ನಾಗಿ ಮಾಡಬಹುದು.</p>.<p>* ಹಳೆಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸುವ ಯೋಜನೆಯನ್ನು ಹೆಚ್ಚಿನ ಹಳೆಯ ದಾಖಲೆಗಳನ್ನು ಹೊಂದಿರುವ ಆರ್ಟಿಒ ಕಚೇರಿಗಳಿಂದ ಆರಂಭಿಸಿ, ಎಲ್ಲ ಆರ್ಟಿಒ ಕಚೇರಿಗಳಲ್ಲಿಯೂ ಕೆಲವು ವರ್ಷಗಳಲ್ಲಿ ಅನುಷ್ಠಾನಗೊಳಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಿಕಟಪೂರ್ವ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶನಿವಾರ ಮಧ್ಯಂತರ ವರದಿ ಸಲ್ಲಿಸಿದೆ.</p>.<p>ಆಯೋಗ ಕಂದಾಯ, ಆಹಾರ ಮತ್ತು ಸಾರಿಗೆ ಈ ಮೂರು ಇಲಾಖೆಗೆ ಸಂಬಂಧಿಸಿದ ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಕೆಲವು ಶಿಫಾರಸುಗಳನ್ನು ಮಾಡಿದೆ.</p>.<p>ಹೋಬಳಿ, ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕೆಲಸ ಮಾಡುವ ಹಾಗೂ ನಾಗರಿಕರ ಮಧ್ಯೆ ಕಾರ್ಯನಿರ್ವಹಿಸುವ ಸಿಬ್ಬಂದಿ ಜೊತೆ ಆಯೋಗ ಹಲವು ಗುಂಪು ಚರ್ಚೆ ನಡೆಸಿದೆ. 57 ಐಎಎಸ್, ಕೆಎಎಸ್ ಅಧಿಕಾರಿಗಳು ಮತ್ತು ಪ್ರೊಬೇಷನರಿ ಅಧಿಕಾರಿಗಳ ಗುಂಪು ಕ್ಷೇತ್ರ ಸಮೀಕ್ಷೆ ನಡೆಸಿ ಆಯೋಗ ಈ ವರದಿ ತಯಾರು ಮಾಡಿದೆ.</p>.<p>ವರದಿ ಸಲ್ಲಿಕೆ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಪಿ, ರವಿಕುಮಾರ್, ಮುಖ್ಯಮಂತ್ರಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ. ವಿ. ರಮಣರೆಡ್ಡಿ ಮತ್ತು ಸಮಿತಿಯ ಸದಸ್ಯ ಎನ್.ಎಸ್. ಪ್ರಸನ್ನಕುಮಾರ್ ಇದ್ದರು.</p>.<p><strong>ಕಂದಾಯ ಇಲಾಖೆಗೆ ಸಂಬಂಧಿಸಿದ ಶಿಫಾರಸುಗಳೇನು?</strong></p>.<p>* ಎಲ್ಲ ಇಲಾಖೆಗಳು ನಾಗರಿಕರಿಗೆ ಒದಗಿಸುವ ಸುಮಾರು 800 ಆನ್ಲೈನ್ ಸೇವೆಗಳಿಗೆ ಅಟಲ್ಜೀ ಜನಸ್ನೇಹಿ ಕೇಂದ್ರಗಳು ಏಕಗವಾಕ್ಷಿ ಏಜೆನ್ಸಿಯಾಗಬೇಕು. ಈ 800 ಸೇವೆಗಳು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಪಂಚಾಯಿತಿ ಬಾಪೂಜಿ ಸೇವಾ ಕೇಂದ್ರಗಳು ಮತ್ತು ಸಾಮಾನ್ಯ ಸೇವಾ ಕೇಂದ್ರಗಳ ಮೂಲಕ ಲಭ್ಯವಾಗಬೇಕು.</p>.<p>* ಎಲ್ಲ ಸಕಾಲ ಅರ್ಜಿಗಳಲ್ಲಿ ಶೇ 81ರಷ್ಟು ಅರ್ಜಿಗಳು ಆನ್ಲೈನ್ ಮೂಲಕ ಸಲ್ಲಿಕೆಯಾಗುತ್ತಿವೆ. ಎಲ್ಲ ಇಲಾಖೆಗಳ ಸಕಾಲ ಮತ್ತು ಸಕಾಲವಲ್ಲದ ಸುಮಾರು 800 ಇ-ಸೇವೆಗಳಿಗೆ ಸೇವಾ ಸಿಂಧು ಏಕ ಮಾತ್ರ ವೇದಿಕೆ ಆಗಬೇಕು.</p>.<p>* ರಾಜ್ಯ ಸರ್ಕಾರದ ಎಲ್ಲಾ ಇ-ಪೇಟೆಗಳನ್ನು ಮೊಬೈಲ್ ಮೂಲಕ ಒದಗಿಸಲು, ಕರ್ನಾಟಕ ಮೊಬೈಲ್ ಒನ್ ಆ್ಯಪ್ ಅನ್ನು ಇತ್ತೀಚಿನ ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿ ಮಾಡಬೇಕು.</p>.<p>* ಎಜೆಎಸ್ಕೆ, ಭೂಮಿ, ಎಸ್ಎಸ್ಪಿ, ಐಜಿಎಸ್ಎಲ್ ಮತ್ತು ಎಸ್ಎಸ್ಎಲ್ಆರ್ ಸೇವಾ ಪೋರ್ಟಲ್ಗಳು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮತ್ತು ಆನ್ಲೈನ್ ವ್ಯಾಲೆಟ್ ವ್ಯವಸ್ಥೆಯನ್ನು ಬಳಸಿಕೊಂಡು ಅರ್ಜಿ ಶುಲ್ಕವನ್ನು ಸಂಗ್ರಹಿಸಲು ಯುಪಿಐ, ಕ್ಯೂಆರ್ ಕೋಡ್ ಪಾವತಿ ವಿಧಾನ ಹೊಂದಿರಬೇಕು.</p>.<p>* ಕಂದಾಯ ಇಲಾಖೆಯಿಂದ ನೀಡಲಾಗುವ ಕೆಲವು ಪ್ರಮಾಣಪತ್ರಗಳು ಅನುಪಯುಕ್ತವಾಗಿದೆ. ಜನಸಂಖ್ಯಾ ಪ್ರಮಾಣಪತ್ರ, ವಾಸ ಸ್ಥಳ ಪ್ರಮಾಣಪತ್ರ, ಬೆಳೆ ಪ್ರಮಾಣಪತ್ರ, ಕೃಷಿಕ ಪ್ರಮಾಣಪತ್ರ, ಈ ಪ್ರಮಾಣಪತ್ರಗಳನ್ನು ತೆಗೆದುಹಾಕಿ ಮತ್ತು ಪರ್ಯಾಯಗಳನ್ನು ಸೂಚಿಸಿ ಆದೇಶ ಹೊರಡಿಸಬೇಕು</p>.<p>* ಭೂಸ್ವಾಧೀನ ನಿರ್ವಹಣಾ ಸಾಫ್ಟ್ವೇರ್ ವ್ಯವಸ್ಥೆಯನ್ನು ಕಂದಾಯ ಇಲಾಖೆ ತ್ವರಿತವಾಗಿ ಅಭಿವೃದ್ಧಿಪಡಿಸಬೇಕು. ಸೂಕ್ತವಾದ ಮಾರ್ಪಾಡುಗಳನ್ನು ಮಾಡುವ ಮೂಲಕ ಕೆಐಎಡಿಬಿ, ಬಿಡಿಎ, ಎನ್ಎಚ್ಐ ಸೇರಿದಂತೆ ವಿವಿಧ ಭೂ ಸ್ವಾಧೀನಪಡಿಸಿಕೊಳ್ಳುವ ಸಂಸ್ಥೆಗಳಿಂದ ಬಳಸುವುದನ್ನು ಕಡ್ಡಾಯಗೊಳಿಸಲು ಆದೇಶ ಹೊರಡಿಸಬೇಕು.</p>.<p>* ಅಡಮಾನ ನೋಂದಣಿ, ಭೂಮಿ ಅಥವಾ ನಿವೇಶನಗಳ ಅಡಮಾನ ಬಿಡುಗಡೆಗೊಳಿಸಲು ಮತ್ತು ಎನ್ಕಂಬೈನ್ಸ್ ನೀಡುವ ವಿಧಾನ ಸರಳೀಕರಿಸಬೇಕು ಮತ್ತು ಸಂಪೂರ್ಣವಾಗಿ ಆನ್ಲೈನ್ನಲ್ಲಿ ಮಾಡಬೇಕು</p>.<p>* ಕಾವೇರಿ-2 ಮತ್ತು ಆನ್ಲೈನ್ ಸೇವೆಯನ್ನು (ಕೆಪಿಎಸ್-2) ಅದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಬೇಕು. ಇದು ಸಬ್ ರಿಜಿಸ್ಟ್ರಾರ್ ಕಚೇರಿಗೆ ಬರುವ ಮೊದಲು ಯಾವುದೇ ಸಮಸ್ಯೆಯೇ ಇಲ್ಲದೆ ನೋಂದಣಿ ಪೂರ್ವ ದತ್ತಾಂಶ ನಮೂದು ಮಾಡಲು ಅವಕಾಶ ಮಾಡಿಕೊಡುತ್ತದೆ. ಸಂಬಂಧಪಟ್ಟವರಿಗೆ ಹೆಚ್ಚಿನ ಸಮಯವನ್ನು ಉಳಿಸುತ್ತದೆ.</p>.<p>* ಎಜೆಎಸ್ಕೆ, ತಹಶೀಲ್ದಾರ್, ಎಡಿಎಲ್ಆರ್, ಸಬ್ ರಿಜಿಸ್ಟ್ರಾರ್ ಕಚೇರಿಗಳಿಂದ ಮೇಲಿನ ಎಲ್ಲ ಕಚೇರಿಗಳಿಗೆ ಇ-ಆಫೀಸ್ ಕಡ್ಡಾಯಗೊಳಿಸಬೇಕು</p>.<p>* ಗ್ರಾಮ ಲೆಕ್ಕಾಧಿಕಾರಿಗಳನ್ನು ಗ್ರಾಮ ಅಧಿಕಾರಿಗಳಾಗಿ ಮರು ಪದನಾಮಕಾರಣ ಮಾಡಬಹುದು. ಗ್ರಾಮ ಲೆಕ್ಕಾಧಿಕಾರಿಗಳ ಕಾರ್ಯವ್ಯಾಪ್ತಿ ಗ್ರಾಮೀಣ ಪ್ರದೇಶಗಳಲ್ಲಿನ ಗ್ರಾಮ ಪಂಚಾಯಿತಿ ಕಾರ್ಯವ್ಯಾಪ್ತಿಯೊಂದಿಗೆ ಸಮನ್ವಯಗೊಳ್ಳಬೇಕು.</p>.<p>* ಎಲ್ಲ ನಾಲ್ಕು ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಪಡಿಸಬಹುದು ಮತ್ತು ರಾಜ್ಯ ಮಟ್ಟದಲ್ಲಿ ಕಂದಾಯ ಆಯುಕ್ತಾಲಯವನ್ನು ಸ್ಥಾಪಿಸಬಹುದು.</p>.<p><strong>ಆಹಾರ ಇಲಾಖೆಗೆ ಸಂಬಂಧಿಸಿ ಶಿಫಾರಸು</strong></p>.<p>* ಪಡಿತರ ಕಾರ್ಡ್ ಹೊಂದಿರುವವರು ಇಚ್ಛಿಸಿದಲ್ಲಿ ಮನೆಬಾಗಿಲಿಗೆ ಪಡಿತರ ಪಡೆದುಕೊಳ್ಳಲು, ಪಡಿತರ ಕಾರ್ಡುದಾರರರು ಮತ್ತು ನ್ಯಾಯಬೆಲೆ ಅಂಗಡಿಯವರು ಪರಸ್ಪರ ಒಪ್ಪಿದ ಶುಲ್ಕವನ್ನು ಪಾವತಿಸಿ, ಪಡಿತರ ಪಡೆದುಕೊಳ್ಳಲು ಅನುಮತಿಸಬಹುದು.</p>.<p>* ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಪಡಿತರ ಚೀಟಿ ಡೇಟಾಬೇಸ್ನೊಂದಿಗೆ ಸಂಯೋಜಿಸಬೇಕು ಅಥವಾ ಮರಣ ನೋಂದಣಿಯ ನಂತರ ಪಡಿತರ ಚೀಟಿ ಕುಟುಂಬ ಸದಸ್ಯರ ಪಟ್ಟಿ ಸ್ವಯಂಚಾಲಿತವಾಗಿ ನವೀಕರಣವಾಗುವಂತಾಗಬೇಕು.</p>.<p>* ರಾಜ್ಯದಿಂದ ಸರ್ಕಾರ ಅನುಮೋದಿತ ಪರೀಕ್ಷಾ ಕೇಂದ್ರಗಳನ್ನು (GATC Government Approved Test Centres) ಗುರುತಿಸಬೇಕು.</p>.<p>* ಕಾನೂನು ಮಾಪನಶಾಸ್ತ್ರ ಇಲಾಖೆ ನೀಡುವ ಪರವಾನಿಗೆಗಳನ್ನು 3-5 ವರ್ಷಗಳವರೆಗೆ ಸ್ವಯಂಚಾಲಿತ ಆನ್ಲೈನ್ ಮೂಲಕ ನವೀಕರಣ, ತಿದ್ದುಪಡಿ ವ್ಯವಸ್ಥೆಯನ್ನು ಜಾರಿಮಾಡಬೇಕು.</p>.<p><strong>ಸಾರಿಗೆ ಇಲಾಖೆಯ ಪ್ರಮುಖ ಶಿಫಾರಸುಗಳು</strong></p>.<p>* ಪ್ರಸ್ತುತ ಆರ್ಟಿಒ ಸೇವೆಗಳಿಗೆ ನಾಗರಿಕರು ಕಾಗದದ ಅರ್ಜಿ ಮತ್ತು ಆನ್ಲೈನ್ ಅರ್ಜಿ ಎರಡರಲ್ಲೂ ಸಲ್ಲಿಸಲಾಗುತ್ತಿದೆ. ನಾಗರಿಕರಿಗೆ ಎಲ್ಲ ಆರ್ಟಿಒ ಸೇವೆಗಳನ್ನು ಕಾಗದರಹಿತವಾಗಿ ಮಾಡಬೇಕು</p>.<p>* ಯಾವುದೇ ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ದಾಖಲೆಗಳನ್ನು ನೋಂದಾಯಿಸಲು ಅವಕಾಶವಿರುವಂತೆ, ಸುಲಭವಾಗಿ ಸೇವೆಗಳನ್ನು ಪಡೆಯಲು ನಾಗರಿಕರು ಬೆಂಗಳೂರು ನಗರದ ಯಾವುದೇ ಆರ್ಟಿಒ ಕಚೇರಿ ಆಯ್ಕೆ ಮಾಡಿಕೊಳ್ಳುವಂತಿರಬೇಕು.</p>.<p>* ಹೆಚ್ಚಿನ ದಕ್ಷತೆಗಾಗಿ ಇ-ಆಫೀಸ್ ವ್ಯವಸ್ಥೆಯನ್ನು ಎಲ್ಲ ಆರ್ಟಿಒ ಕಚೇರಿಗಳು ಮತ್ತು ಸಾರಿಗೆ ಇಲಾಖೆ ಕಚೇರಿಗಳು ಬಳಸಬೇಕು</p>.<p>* ಸಾರಿಗೆ ಆಯುಕ್ತರು ವಶಪಡಿಸಿಕೊಂಡ ವಾಹನಗಳಿಗೆ ನಿಗದಿತ ಸಮಯದೊಳಗೆ ದಂಡ ಪಾವತಿಸದಿದ್ದರೆ, ನ್ಯಾಯಾಲಯದ ಆದೇಶ ಕಾಯುವ ಅಗತ್ಯವಿಲ್ಲದೆ ಇ-ಹರಾಜು ಹಾಕಲು ಸಾರಿಗೆ ಇಲಾಖೆಗೆ ಅನುಮತಿ ನೀಡಲು ಕರ್ನಾಟಕ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಪ್ರಸ್ತಾಪಿಸಬಹುದು.</p>.<p>* ನಗದು ಪಾವತಿಗಾಗಿ ಆರ್ಟಿಒ ಕಚೇರಿಗಳಲ್ಲಿ ತೆಗೆದುಕೊಳ್ಳುವ ಸಮಯ ಕಡಿಮೆ ಮಾಡಲು, ನಗದು ವ್ಯವಹಾರ ಕಡಿಮೆ ಮಾಡಲು, ಕ್ಯೂಆರ್ ಕೋಡ್ ಆಧಾರಿತ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಪಾವತಿ ಯಂತ್ರಗಳನ್ನು ಸ್ಥಾಪಿಸಬಹುದು.</p>.<p>* ಐಟಿ ನಿರ್ದೇಶಕರ ಎರಡು ಹುದ್ದೆಗಳಿವೆ (ಒಂದು ಕೆಎಸ್ಆರ್ಟಿಸಿಯಲ್ಲಿ, ಮತ್ತೊಂದು ಬಿಎಂಟಿಸಿಯಲ್ಲಿ) ಒಂದು ಹುದ್ದೆಯನ್ನು ರದ್ದುಪಡಿಸಿ ಎರಡೂ ಐಟಿ ವ್ಯವಸ್ಥೆಗಳ ಉಸ್ತುವಾರಿಗೆ ಒಬ್ಬರನ್ನೇ ನಿರ್ದೇಶಕರನ್ನಾಗಿ ಮಾಡಬಹುದು.</p>.<p>* ಹಳೆಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸುವ ಯೋಜನೆಯನ್ನು ಹೆಚ್ಚಿನ ಹಳೆಯ ದಾಖಲೆಗಳನ್ನು ಹೊಂದಿರುವ ಆರ್ಟಿಒ ಕಚೇರಿಗಳಿಂದ ಆರಂಭಿಸಿ, ಎಲ್ಲ ಆರ್ಟಿಒ ಕಚೇರಿಗಳಲ್ಲಿಯೂ ಕೆಲವು ವರ್ಷಗಳಲ್ಲಿ ಅನುಷ್ಠಾನಗೊಳಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>