ಬೆಂಗಳೂರು: ಲಾಕ್ಡೌನ್ ಘೋಷಣೆಗೂ ಮೊದಲು ಬೆಂಗಳೂರು ಸೇರಿದಂತೆ ರಾಜ್ಯದ ದೊಡ್ಡ ನಗರಗಳಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ತಲುಪಿಸುವ ವಿಚಾರದಲ್ಲಿ ಭರ್ಜರಿ ರಾಜಕೀಯ ಮೇಲಾಟ ಆರಂಭವಾಗಿದೆ.
ಮೆಜೆಸ್ಟಿಕ್ಗೆ ಭೇಟಿ ನೀಡಿ ಕೆಎಸ್ಆರ್ಟಿಸಿಗೆ ₹ 1 ಕೋಟಿ ಚೆಕ್ ನೀಡಲು ಕಾಂಗ್ರೆಸ್ ಯತ್ನಿಸಿತ್ತು. ನಿನ್ನೆಯಷ್ಟೇ (ಮೇ 4) ಕಾರ್ಯಕರ್ತರಿಗೆ ವಿಡಿಯೊ ಸಂದೇಶ ಕಳಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಲಸೆ ಕಾರ್ಮಿಕರನ್ನು ಸ್ವಾಗತಿಸಿ, ಸ್ವಗ್ರಾಮಗಳಿಗೆ ತಲುಪಿಸಲು ನೆರವಾಗಿ ಎಂದು ಸೂಚಿಸಿದ್ದರು.
ಕಾಂಗ್ರೆಸ್ ನಾಯಕರ ಹೇಳಿಕೆ ಮತ್ತು ಪ್ರಯತ್ನಕ್ಕೆ ಇಂದು (ಮೇ 5) ತಿರುಗೇಟು ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ‘ಇದು ಕಾಂಗ್ರೆಸ್ನವರ ಭರ್ಜರಿ ಬಯಲಾಟ’ ಎಂದು ಟೀಕಿಸಿದ್ದಾರೆ.
ಕಾಂಗ್ರೆಸ್ನವರು ಕಾರ್ಮಿಕರ ಬಸ್ ಮತ್ತು ಟ್ರೈನ್ ಚಾರ್ಜ್ ಕೊಡ್ತೀವಿ ಅಂತ ರೋಡ್ ರೋಡ್ನಲ್ಲಿನ ಓಡಾಟ ಹಾಗು ಅದರ ಜಾಹಿರಾತುಗಳನ್ನ ಕೊಟ್ಟಿರುವುದು ನೋಡಿದರೆ ಇದು ಭರ್ಜರಿ ಬಯಲುನಾಟಕ ಎಂದು ಗೊತ್ತಾಗುತ್ತೆ. ನಿಯಮದಂತೆ ಹಣ ಯಾರಿಗೆ ಕೊಡಬೇಕಿತ್ತೋ ಅವರಿಗೆ ಕೊಡುವುದು ಬಿಟ್ಟು ಊರೆಲ್ಲ ಕ್ಯಾಮೆರಾ ಮುಂದೆ ಕೊರೊನ ಮೀರುವ ಓಡಾಟ ,ಚೀರಾಟ ಮತ್ತು ಹಾರಾಟ..