<p><strong>ಬೆಂಗಳೂರು:</strong> ‘ಕಬ್ಬು ಕಾರ್ಖಾನೆಗಳ ಮಾಲೀಕರು ರಫ್ತಿಗೆ ಅವಕಾಶ ಕೋರಿದ್ದು, ಹೆಚ್ಚುವರಿ ಸಂಗ್ರಹವಿರುವ 15 ಲಕ್ಷ ಟನ್ ಸಕ್ಕರೆ ರಫ್ತಿಗೆ ಅವಕಾಶ ನೀಡಲಾಗುವುದು. ಮೊಲಾಸಿಸ್ ರಫ್ತಿಗೆ ಅನುಮತಿ ಈಗಾಗಲೇ ಕೊಟ್ಟಿದ್ದೇವೆ’ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಪ್ರಲ್ಹಾದ ಜೋಶಿ ಹೇಳಿದರು. </p>.<p>ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರ್ಕಾರ ಜವಾಬ್ದಾರಿಯಿಂದ ವರ್ತಿಸಬೇಕು. ಸಂಧಾನ ನಡೆಸಬೇಕು. ರೈತರು ಪ್ರತಿ ಟನ್ಗೆ ₹3,500 ಕೇಳುತ್ತಿದ್ದಾರೆ. ವರ್ಷದ ಆರಂಭದಲ್ಲೇ ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ ನ್ಯಾಯಸಮ್ಮತ ಮತ್ತು ಲಾಭದಾಯಕ ದರ (ಎಫ್ಆರ್ಪಿ) ₹3,500 ನಿಗದಿ ಮಾಡಿದೆ. ಜತೆಗೆ, ಎಥೆನಾಲ್ ಖರೀದಿ ಮೊತ್ತ 97.2 ಶೇಕಡಾ ಪಾವತಿ ಆಗಿದೆ. ಮುಖ್ಯಮಂತ್ರಿ, ಸಚಿವರು ಕಾರ್ಖಾನೆಗಳ ಮಾಲೀಕರು, ರೈತರ ಜತೆ ಮಾತುಕತೆ ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p>ತುಪ್ಪ, ಬೆಣ್ಣೆ ಬೆಲೆ ಏರಿಕೆ ವಾಪಸ್ಗೆ ಆಗ್ರಹ: ರಾಜ್ಯ ಸರ್ಕಾರ ತುಪ್ಪ, ಬೆಣ್ಣೆ ಬೆಲೆ ಹೆಚ್ಚಿಸಿದೆ. ಇದು ರಾಹುಲ್ ಗಾಂಧಿ ಸಹವಾಸ ದೋಷ. ಬೆಲೆ ಏರಿಕೆಯ ಬೆಂಕಿಗೆ ತುಪ್ಪ ಸುರಿದಿದ್ದಾರೆ. ತಕ್ಷಣ ಬೆಲೆ ಏರಿಕೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕಬ್ಬು ಕಾರ್ಖಾನೆಗಳ ಮಾಲೀಕರು ರಫ್ತಿಗೆ ಅವಕಾಶ ಕೋರಿದ್ದು, ಹೆಚ್ಚುವರಿ ಸಂಗ್ರಹವಿರುವ 15 ಲಕ್ಷ ಟನ್ ಸಕ್ಕರೆ ರಫ್ತಿಗೆ ಅವಕಾಶ ನೀಡಲಾಗುವುದು. ಮೊಲಾಸಿಸ್ ರಫ್ತಿಗೆ ಅನುಮತಿ ಈಗಾಗಲೇ ಕೊಟ್ಟಿದ್ದೇವೆ’ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಪ್ರಲ್ಹಾದ ಜೋಶಿ ಹೇಳಿದರು. </p>.<p>ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರ್ಕಾರ ಜವಾಬ್ದಾರಿಯಿಂದ ವರ್ತಿಸಬೇಕು. ಸಂಧಾನ ನಡೆಸಬೇಕು. ರೈತರು ಪ್ರತಿ ಟನ್ಗೆ ₹3,500 ಕೇಳುತ್ತಿದ್ದಾರೆ. ವರ್ಷದ ಆರಂಭದಲ್ಲೇ ಕೇಂದ್ರ ಸರ್ಕಾರ ಪ್ರತಿ ಟನ್ ಕಬ್ಬಿಗೆ ನ್ಯಾಯಸಮ್ಮತ ಮತ್ತು ಲಾಭದಾಯಕ ದರ (ಎಫ್ಆರ್ಪಿ) ₹3,500 ನಿಗದಿ ಮಾಡಿದೆ. ಜತೆಗೆ, ಎಥೆನಾಲ್ ಖರೀದಿ ಮೊತ್ತ 97.2 ಶೇಕಡಾ ಪಾವತಿ ಆಗಿದೆ. ಮುಖ್ಯಮಂತ್ರಿ, ಸಚಿವರು ಕಾರ್ಖಾನೆಗಳ ಮಾಲೀಕರು, ರೈತರ ಜತೆ ಮಾತುಕತೆ ನಡೆಸಬೇಕು’ ಎಂದು ಸಲಹೆ ನೀಡಿದರು.</p>.<p>ತುಪ್ಪ, ಬೆಣ್ಣೆ ಬೆಲೆ ಏರಿಕೆ ವಾಪಸ್ಗೆ ಆಗ್ರಹ: ರಾಜ್ಯ ಸರ್ಕಾರ ತುಪ್ಪ, ಬೆಣ್ಣೆ ಬೆಲೆ ಹೆಚ್ಚಿಸಿದೆ. ಇದು ರಾಹುಲ್ ಗಾಂಧಿ ಸಹವಾಸ ದೋಷ. ಬೆಲೆ ಏರಿಕೆಯ ಬೆಂಕಿಗೆ ತುಪ್ಪ ಸುರಿದಿದ್ದಾರೆ. ತಕ್ಷಣ ಬೆಲೆ ಏರಿಕೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>