ವಿಧಾನ ಪರಿಷತ್ನಲ್ಲಿ ಶನಿವಾರಜೆಡಿಎಸ್ ಸದಸ್ಯ ಕೆ. ಟಿ. ಶ್ರೀಕಂಠೇಗೌಡ ಅವರ ಗಮನ ಸೆಳೆಯುವ ಸೂಚನೆಗೆ ಸ್ಪಂದಿಸಿದ ಅವರು, ಸಾಗಣೆ ವೆಚ್ಚವನ್ನು ಸರ್ಕಾರ ಭರಿಸುವುದು, ಮಧ್ಯವರ್ತಿಗಳ ಹಾವಳಿ ತಪ್ಪಿಸುವ ಕುರಿತಂತೆ ಮುಖ್ಯಮಂತ್ರಿಗಳ ಜತೆ ಈಗಾಗಲೇ ಚರ್ಚಿಸಿದ್ದು, ಕೆಲವು ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಚರ್ಚಿಸಲಾಗಿದೆ. ಸರ್ಕಾರ ಶೀಘ್ರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಹೇಳಿದರು.