ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ವಾಡಿ ಆರೋಪಿಗಳ ಪರ ವಕಾಲತ್ತು ವಹಿಸದಿರಲು ನಿರ್ಧಾರ

Last Updated 31 ಡಿಸೆಂಬರ್ 2018, 19:23 IST
ಅಕ್ಷರ ಗಾತ್ರ

ಮೈಸೂರು: ಚಾಮರಾಜನಗರ ಜಿಲ್ಲೆಯ ಸುಳ್ವಾಡಿಯಲ್ಲಿ ಈಚೆಗೆ ನಡೆದ ದುರಂತದಲ್ಲಿ ಯಾವ ವಕೀಲರೂ ಆರೋಪಿಗಳ ಪರ ವಕಾಲತ್ತು ವಹಿಸದಿರಲು ಜಿಲ್ಲಾ ವಕೀಲರ ಸಂಘ ನಿರ್ಣಯ ಕೈಗೊಂಡಿದೆ.

ಇಲ್ಲಿ ಸೋಮವಾರ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಇದೊಂದು ತೀರಾ ಅಮಾನವೀಯವಾದ ಪ್ರಕರಣ. ಇಂತಹ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ಸಂಘದ ಯಾವುದೇ ವಕೀಲರು ವಕಾಲತ್ತು ವಹಿಸಬಾರದು ಎಂದು ಸೂಚಿಲಾಯಿತು. ಜತೆಗೆ, ದುರಂತದಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈಗಾಗಲೇ ಕೊಳ್ಳೇಗಾಲ ತಾಲ್ಲೂಕು ಹಾಗೂ ಚಾಮರಾಜನಗರ ಜಿಲ್ಲಾ ವಕೀಲರ ಸಂಘಗಳೂ ಆರೋಪಿಗಳ ಪರವಾಗಿ ವಕಾಲತ್ತು ವಹಿಸದಿರುವ ನಿರ್ಣಯ ಕೈಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT