ಹನೂರು ಶಾಸಕ ನರೇಂದ್ರ ಮಾತನಾಡಿ, ‘ಖಾಸಗಿ ಆಡಳಿತ ಮಂಡಳಿಯ ಒಡೆತನದ ಈ ದೇವಸ್ಥಾನವನ್ನು ಮುಜರಾಯಿ ಇಲಾಖೆ ವಶಕ್ಕೆ ತೆಗೆದುಕೊಂಡು, ಮುಂದಾಗುವ ಅನಾಹುತ ತಪ್ಪಿಸಬೇಕು’ ಎಂದು ಆಗ್ರಹಿಸಿದರು. ಬಿಜೆಪಿಯ ಗೋವಿಂದ ಕಾರಜೋಳ, ಸುಳ್ವಾಡಿ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಎರಡು ಎಕರೆ ಜಮೀನು ನೀಡುವಂತೆ ಆಗ್ರಹಿಸಿದರು.