‘ಯಾವುದೇ ಭಾಗದಲ್ಲಿ ಸಮಸ್ಯೆ ಇದ್ದರೂ ನಾನು ಪತ್ರ ಬರೆಯಬಹುದು. ಆದರೆ, ಸಂಬಂಧಪಟ್ಟ ಅಧಿಕಾರಿ ಪ್ರತಿಕ್ರಿಯಿಸುವುದು ಆ ಭಾಗದ ಜನಪ್ರತಿನಿಧಿ ಜೊತೆಗೆ. ಮಾಜಿ ಪ್ರಧಾನಿ ಇರಬಹುದು, ಮೈಸೂರು ಸಂಸದರು ನನ್ನ ಕ್ಷೇತ್ರದ ಸಮಸ್ಯೆ ಕುರಿತು ಕೇಂದ್ರಕ್ಕೆ ಪತ್ರ ಬರೆದಿರಬಹುದು. ಆ ಬಗ್ಗೆ ನನಗೆ ಸರಿಯಾದ ಮಾಹಿತಿ ಇಲ್ಲ. ಹೆದ್ದಾರಿ, ಅಕ್ರಮ ಗಣಿಗಾರಿಕೆ, ಮೈಷುಗರ್ಸ್ ಸಂಬಂಧಿಸಿದಂತೆ ನಾನೇನು ಕೆಲಸ ಮಾಡಿದ್ದೇನೆ ಎಂಬುದು ನನಗೆ ಗೊತ್ತಿದೆ. ರಾಷ್ಟ್ರೀಯ ಹೆದ್ದಾರಿ ವಿಚಾರವಾಗಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಹೋರಾಟ ನಡೆಸಿ ಸಮಸ್ಯೆ ಬಗೆಹರಿಸುತ್ತಿದ್ದೇನೆ. ಅದಕ್ಕೂ ಬೇರೆ ಕ್ಷೇತ್ರದ ಸಂಸದ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದರು. ಕೆಲಸ ಮಾಡಲು ಬಿಡುತ್ತಿಲ್ಲ, ವಿಳಂಬ ಮಾಡುತ್ತಿದ್ದಾರೆ ಎಂಬುದಾಗಿ ಆರೋಪಿಸಿದರು’ ಎಂದರು.